ಕೆಪಿಎಸ್‌ಸಿ | ಅನರ್ಹ ವ್ಯಕ್ತಿಗಳು ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲು ಹೇಗೆ ಸಾಧ್ಯ: ಹೈಕೋರ್ಟ್‌ ಪ್ರಶ್ನೆ

Date:

Advertisements

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರ ನೇಮಕಕ್ಕೆ ರಾಜ್ಯ ಸರ್ಕಾರ ನೇಮಿಸಿರುವ ಸತ್ಯಶೋಧನಾ ಸಮಿತಿ‌ ರಚನೆಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

“ಅನರ್ಹ ವ್ಯಕ್ತಿಗಳು ಕೆಪಿಎಸ್‌ಸಿ ಸದಸ್ಯರಾಗಿ ನೇಮಕವಾದಲ್ಲಿ ವಿವಿಧ ಜ್ಞಾನದ ಶಾಖೆಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲು ಹೇಗೆ ಸಾಧ್ಯ” ಎಂದು ಹೈಕೋರ್ಟ್‌ ಪ್ರಶ್ನಿಸಿದೆ.

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಕುಡಿಯುವ ನೀರು ಪೂರೈಕೆ ವಿಭಾಗದ ಸಹಾಯಕ ಎಂಜಿನಿಯರ್‌ಗಳ ನೇಮಕದಲ್ಲಿ ಅಕ್ರಮ ನಡೆಸಿ ಆಯ್ಕೆಯಾದ ಕಳಂಕಿತ ಸಹಾಯಕ ಎಂಜಿನಿಯರ್‌ಗಳ ಸೇವೆಯಿಂದ ವಜಾಗೊಳಿಸುವಂತೆ ಕೆಪಿಎಸ್‌ಸಿ ಮಾಡಿರುವ ಶಿಫಾರಸ್ಸಿಗೆ ತಡೆ ನೀಡಲು ನಿರಾಕರಿಸಿದ ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣದ (ಕೆಎಟಿ) ಕ್ರಮ ಪ್ರಶ್ನಿಸಿ, ಎಂಜಿನಿಯರ್‌ಗಳಾದ ವಿಶ್ವಾಸ್‌ ಮತ್ತಿತರರು ಹೈಕೋರ್ಟ್‌ಗೆ ಎರಡು ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸರ್ಕಾರದ ಕ್ರಮಕ್ಕೆ ಸಿಟ್ಟಾಗಿದೆ.

Advertisements

ತಮಗಿಂತಲೂ ಕೆಳಮಟ್ಟದವರ ಮುಂದೆ ಸಂದರ್ಶನಕ್ಕೆ ಹಾಜರಾಗುವಂತೆ ಮಾಡಿದರೆ ಉನ್ನತ ವರ್ಗವು ಯಾವ ರೀತಿಯ ಅಭಿಪ್ರಾಯಕ್ಕೆ ಬರುತ್ತದೆ ಎಂಬುದನ್ನು ಹೆಚ್ಚಾಗಿ ವಿವರಿಸುವ ಅಗತ್ಯವಿಲ್ಲ ಎಂದು ಪೀಠ ಸ್ಪಷ್ಟವಾಗಿ ಹೇಳಿದೆ.

ಸರ್ಕಾರದ ಪರವಾಗಿ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ”ಕೆಪಿಎಸ್‌ಸಿ ಸದಸ್ಯರ ಆಯ್ಕೆ ಮತ್ತು ನೇಮಕಾತಿಗೆ ನೆರವು ನೀಡಲು ಶೋಧನಾ ಸಮಿತಿಯ ರಚನೆಗೆ ತುರ್ತು ಆಧಾರದ ಮೇಲೆ ಕೆಲವು ಪ್ರಕ್ರಿಯೆ ರೂಪಿಸಲಾಗುತ್ತಿದೆ. ಆ ಕುರಿತ ಬೆಳವಣಿಗೆಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದ ಮುಂದೆ ಇಡಲಾಗುವುದು” ಎಂದು ಭರವಸೆ ನೀಡಿದರು.

ಇದಕ್ಕೆ ಪೀಠ, ”ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡಿದೆ. ಸದಸ್ಯರ ನೇಮಕಾತಿಗೆ ಅರ್ಹರ ಹೆಸರು ಶಿಫಾರಸು ಮಾಡಲು ಶೋಧನಾ ಸಮಿತಿಯನ್ನು ರಚಿಸಲು ಸರ್ಕಾರ ಆಸಕ್ತಿ ತೋರಿಸುತ್ತಿರುವುದು ಶ್ಲಾಘನೀಯ. ಆದರೆ, ಈ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಮಾಡಬೇಕಿದೆ. ಈ ಭರವಸೆಯನ್ನು ನ್ಯಾಯಾಲಯ ಪ್ರಶಂಸಿಸುತ್ತದೆ” ಎಂದು ಪೀಠ ತಿಳಿಸಿದೆ.

ಕೆಪಿಎಸ್‌ಸಿ ಖ್ಯಾತಿ ಕುಸಿದಿದೆ

ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ವಿಶೇಷವಾಗಿ ಸರ್ಕಾರದ ಸಚಿವಾಲಯ ಮಟ್ಟದಲ್ಲಿ ನಡೆದಿರುವ ಹಲವು ಲೋಪಗಳಿದ್ದು, ಅಮಾಯಕ ಅಭ್ಯರ್ಥಿಗಳು ಮತ್ತು ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ. ಯಾವುದೇ ತಪ್ಪಿತಸ್ಥ ವ್ಯಕ್ತಿ ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಹಾನಿಗೊಳಗಾಗುವುದಿಲ್ಲ ಎಂದ ಬೇಸರ ವ್ಯಕ್ತಪಡಿಸಿದ ಪೀಠ, ಕೆಪಿಎಸ್‌ಸಿ ಅಂತಹ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಸಾರ್ವಜನಿಕರಿಗೆ ನಂಬಿಕೆ ಕುಸಿದಿದೆ. ಕೆಪಿಎಸ್‌ಸಿಯು ಸಾರ್ವಜನಿಕ ಉದ್ಯೋಗದ ಆಕಾಂಕ್ಷಿಗಳ ವಿಶ್ವಾಸ ಗಳಿಸಬೇಕಿದೆ. ಕಳೆದ ಎರಡು ದಶಕಗಳಲ್ಲಿ ನಡೆದ ನೇಮಕಾತಿಯಲ್ಲಿ ಕೆಪಿಎಸ್‌ಸಿಗೆ ಅಪಖ್ಯಾತಿ ಗಳಿಸಿದೆ. ಅದರ ಘನತೆ ಕೆಳಮಟ್ಟಕ್ಕೆ ಇಳಿದಿದೆ ಎಂದು ಪೀಠ ಬೇಸರ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X