ಬೀದರ್‌ | 3 ದಿನಕ್ಕೊಮ್ಮೆ ಕುಡಿಯುವ ನೀರು : ಸಮಸ್ಯೆ ಬಗೆಹರಿಸದಿದ್ದರೆ ಹೋರಾಟದ ಎಚ್ಚರಿಕೆ

Date:

Advertisements

ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸದ ಕಮಲನಗರ ತಾಲ್ಲೂಕಿನ ಡೋಣಗಾಂವ(ಎಂ) ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ವಿರುದ್ಧ ಡೋಣಗಾಂವ್‌ (ಎಂ) ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಡೋಣಗಾಂವ್‌ (ಎಂ) ಗ್ರಾಮದಲ್ಲಿ ಮೂರು ವಾರ್ಡ್‌ಗಳಿದ್ದು, ಸುಮಾರು 4 ಸಾವಿರ ಜನಸಂಖ್ಯೆ ಹೊಂದಿದೆ. ಜೆಜೆಎಂ ಕಾಮಗಾರಿ ಕೈಗೊಂಡರೂ ಸಹ ನೀರಿನ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ. ನೀರು ಪೂರೈಕೆಗೆ ತೆರೆದ ಬಾವಿಯಿದ್ದರೂ ನೀರಿನ ಸಮಸ್ಯೆ ತಲೆದೋರಿದೆ. ಹೀಗಾಗಿ 3 ದಿನಕ್ಕೊಮ್ಮೆ ನೀರು ಬರುತ್ತದೆ. ಈ ಬಗ್ಗೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನೆ ಆಗಿಲ್ಲʼ ಎಂದು ಗ್ರಾಮಸ್ಥರು ದೂರಿದರು.

ಈ ಕುರಿತು ಶುಕ್ರವಾರ ಗ್ರಾಮದ ಪ್ರಮುಖರು ಗ್ರಾಮ ಪಂಚಾಯಿತಿ ಪಿಡಿಒ ವಿಜಯಕುಮಾರ್‌ ಪಾಟೀಲ್‌ ಅವರಿಗೆ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Advertisements

ʼಗ್ರಾಮದಲ್ಲಿ ನೀರಿನ ಸಮಸ್ಯೆಯಿಂದ ಜನರು ನೀರಿಗಾಗಿ ಕೊಡ ಹಿಡಿದು ಅಲೆದಾಡಬೇಕಾದ ಪರಿಸ್ಥಿತಿ ಇದೆ. ಜೆಜೆಎಂ ಕಾಮಗಾರಿ ಕೈಗೊಂಡರೂ ನೀರು ಪೂರೈಸುವಲ್ಲಿ ಗ್ರಾಮ ಆಡಳಿತ ವ್ಯವಸ್ಥೆ ವಿಫಲವಾಗಿದೆ. ಈ ಸಮಸ್ಯೆ ಮುಂದಿನ ತಿಂಗಳು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ 5 ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮದ ಮುಖಂಡರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಶಿವು ದೇಸಾಯಿ, ಅಪ್ಪಾಸಾಹೇಬ್‌ ದೇಶಮುಖ, ಉತ್ತಮರಾವ್‌ ಮಾನೆ, ವಿಲಾಸ ಗಂದಗೆ, ಮಹಾದೇವ ಚಾಕುರೆ, ಅನೀಲ್‌ ಗಂದಗೆ, ತುಳಸಿರಾಮ ಮಾನೆ, ವಿಜಯಕುಮಾರ್‌ ಪಾಟೀಲ್‌, ರಾಜಪ್ಪಾ ತೇಲಿ, ಸಂಗಮೇಶ ವಲ್ಲೂರೆ ಮತ್ತಿತರರಿದ್ದರು.

ಈ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒ ವಿಜಯಕುಮಾರ್‌ ಅವರಿಗೆ ʼಈದಿನ.ಕಾಮ್‌ʼ ಸಂಪರ್ಕಿಸಿದರೆ, ಅವರು ಕರೆ ಸ್ವೀಕರಿಸಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X