ಬೆಂಗಳೂರು | ಅಂತರ್‌ಧರ್ಮೀಯ ಜೋಡಿಗೆ ಥಳಿಸಿ ಅನೈತಿಕ ಪೊಲೀಸ್‌ಗಿರಿ

Date:

Advertisements

ಎರಡು ವಿಭಿನ್ನ ಕೋಮಿನ ಜೋಡಿಗಳನ್ನು ಬೆದರಿಸಿ, ಹಲ್ಲೆಗೈದು, ದಾಂಧಲೆ ನಡೆಸಿ ಪುಂಡರ ಗುಂಪೊಂದು ಅನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಪಾರ್ಕ್‌ವೊಂದರ ಹೊರಗೆ ಜೋಡಿಯು ಬೈಕ್‌ ಮೇಲೆ ಕುಳಿತಿದ್ದಾಗ, ಅಲ್ಲಿಗೆ ಬಂದ ಪುಂಡರ ಗುಂಪೊಂದು ದಾಂಧಲೆ ನಡೆಸಿದೆ. ಜೋಡಿಗೆ ಕಿರುಕುಳ ನೀಡಿದೆ. ಘಟನೆಯನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ; ಕಿತ್ತಳೆ ಬಣ್ಣದ ಟೀ ಶರ್ಟ್ ಧರಿಸಿದ್ದ ಯುವಕ ಮತ್ತು ಬುರ್ಖಾ ಧರಿಸಿದ್ದ ಯುವತಿಯು ಕೆಲವು ಯುವಕರೊಂದಿಗೆ ತೀವ್ರ ವಾಗ್ವಾದ ನಡೆಸುತ್ತಿರುವುದು ಕಂಡುಬಂದಿದೆ. ಪುಂಡರ ಗುಂಪಿನಲ್ಲಿದ್ದ ಒರ್ವ ಯುವತಿಯ ವೀಡಿಯೊವನ್ನು ಸೆರೆಹಿಡಿಯುತ್ತಿರುವುದು ಕೂಡ ಸರೆಯಾಗಿದೆ.

Advertisements

ತಾನು ಇರುವ ಸ್ಥಳದ ಬಗ್ಗೆ ತನ್ನ ಪೋಷಕರಿಗೆ ಮಾಹಿತಿ ಇದೆಯೇ ಎಂದು ಯುವತಿಯನ್ನು ಪುಂಡರ ಗುಂಪಿನಲ್ಲಿದ್ದವರು ಪ್ರಶ್ನಿಸಿದ್ದಾರೆ. ಬುರ್ಖಾ ಧರಿಸಿಕೊಂಡು ಪುರುಷನೊಂದಿಗೆ ಕುಳಿತಿರುವುದಕ್ಕೆ ನಿಮಗೆ ನಾಚಿಕೆಯಾಗುತ್ತಿಲ್ಲವೇ ಎಂದು ನಿಂದಿಸಿದ್ದಾರೆ. ಅಲ್ಲದೆ, ಯುವಕನನ್ನು ಬೇರೆ ಧರ್ಮದ ಯುವತಿಯೊಂದಿಗೆ ಯಾಕೆ ಸುತ್ತಾಡುತ್ತಿದ್ದೀಯಾ ಎಂದೂ ಪ್ರಶ್ನಿಸಿದ್ದಾರೆ. ಬಳಿಕ, ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ.

ಘಟನೆ ಬಳಿಕ, ಯುವತಿಯು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅವರಲ್ಲಿ ಓರ್ವ ಅಪ್ರಾಪ್ತನೂ ಇದ್ದಾನೆ ಎಂದು ತಿಳಿದುಬಂದಿದೆ.

“ಜೋಡಿ ಸ್ಕೂಟರ್‌ನಲ್ಲಿ ಕುಳಿತಿದ್ದಾಗ ಅವರನ್ನು ಐದು ಮಂದಿ ಪ್ರಶ್ನಿಸಿದರು. ಹುಡುಗಿ ಬುರ್ಖಾ ಧರಿಸಿದ್ದಳು. ಯುವತಿಯಿಂದ ನಮಗೆ ದೂರು ಬಂದಿದ್ದು, ಅದರ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿದ್ದೇವೆ…. ನಾವು ತನಿಖೆ ಮುಂದುವರಿಸಿದ್ದೇವೆ” ಎಂದು ಉಪ ಪೊಲೀಸ್ ಆಯುಕ್ತ ಗಿರೀಶ್ ಹೇಳಿದರು.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ, “ರಾಜ್ಯದಲ್ಲಿ ಯಾವುದೇ ನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ. ಇದು ಬಿಹಾರ ಅಥವಾ ಉತ್ತರ ಪ್ರದೇಶ ಅಥವಾ ಮಧ್ಯಪ್ರದೇಶ ಅಲ್ಲ; ಕರ್ನಾಟಕ ಪ್ರಗತಿಪರ ರಾಜ್ಯ” ಎಂದು ಅವರು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X