ಅಮಾನುಷ ಕೃತ್ಯ | ತರಕಾರಿ ಕದ್ದ ಆರೋಪ: ಮಹಿಳೆ, ಪುತ್ರಿಗೆ ಥಳಿತ; ನೆಟ್ಟಿಗರ ಆಕ್ರೋಶ

Date:

Advertisements

ತರಕಾರಿ ಕದ್ದ ಆರೋಪದಲ್ಲಿ ಮಹಿಳೆ ಮತ್ತು ಆಕೆಯ ಪುತ್ರಿಗೆ ಕೂದಲು ಹಿಡಿದು ಎಳೆದಾಡಿ ಅಮಾನುಷವಾಗಿ ಥಳಿಸಿದ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತರಕಾರಿ ಮಾರುಕಟ್ಟೆಯ ರಸ್ತೆಯಲ್ಲಿ ಮಹಿಳೆ ಮತ್ತು ಆಕೆಯ ಪುತ್ರಿಯ ಕೂದಲು ಎಳೆದು, ಹೊಟ್ಟೆಗೆ ಒದ್ದು, ಕೋಲುಗಳಿಂದ ಹೊಡೆದಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದ್ದು, ಇಬ್ಬರು ಪುರುಷರು ಮಹಿಳೆ ಮತ್ತು ಆಕೆಯ ಮಗಳನ್ನು ಥಳಿಸುತ್ತಿರುವುದು ಕಂಡುಬಂದಿದೆ. ಹಲವು ಮಂದಿ ನಿಂತು ನೋಡುತ್ತಿರುವುದು ಕಂಡು ಬಂದಿದೆ. ಆದರೆ ಯಾರೂ ಕೂಡಾ ಮಹಿಳೆಯರ ಸಹಾಯಕ್ಕೆ ಬಂದಿಲ್ಲ. ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ? ಅಮಾನುಷ ಕೃತ್ಯ | ದಲಿತ ಬಾಲಕಿಯ ಅಪಹರಣ, ನಿರಂತರ ಸಾಮೂಹಿಕ ಅತ್ಯಾಚಾರ

Advertisements

ಸೆಕ್ಯುರಿಟಿ ಗಾರ್ಡ್‌ನಂತೆ ಕಾಣುವ ವ್ಯಕ್ತಿಯೊಬ್ಬರ ಹಣೆಯಲ್ಲಿ ರಕ್ತಸ್ರಾವವಾಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ವ್ಯಕ್ತಿಯೇ ಕೋಲು ಹಿಡಿದುಕೊಂಡು ಮಹಿಳೆಯ ಕಡೆಗೆ ಹೋಗಿ ಕೂದಲು ಹಿಡಿದು ರಸ್ತೆಯಲ್ಲಿ ಎಳೆದಾಡಿ ಹೊಡೆದಿದ್ದಾರೆ. ಅದೇ ಸಮಯದಲ್ಲಿ, ಇತರ ಇಬ್ಬರು ಪುರುಷರು ಯುವತಿಯ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಆಕೆಯ ಕೂದಲನ್ನು ಎಳೆದು, ನೆಲಕ್ಕೆ ತಳ್ಳಿ ಹೊಟ್ಟೆಗೆ ಒದ್ದಿದ್ದಾರೆ.

ಸೂರತ್ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ವಿಡಿಯೋವನ್ನು ಕೂಡಾ ಸೇರಿಸಲಾಗಿದೆ. “ಸೂರತ್ ಎಪಿಎಂಸಿಯಲ್ಲಿ ತರಕಾರಿಗಳನ್ನು ಕದ್ದ ಆರೋಪದ ಮೇಲೆ ಮಹಿಳೆ ಮತ್ತು ಯುವತಿಯ ಮೇಲೆ ಹಲ್ಲೆ ನಡೆಸಿದ ಘಟನೆಯಲ್ಲಿ ಸೂರತ್ ನಗರ ಪುಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ” ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಈ ವಿಡಿಯೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವು ನೆಟ್ಟಿಗರು ಪೊಲೀಸರು ಈ ಆರೋಪಿಗಳಿಗೂ ಥಳಿಸಿದ್ದಾರೆ ಎಂದು ಹೇಳಿದ್ದಾರೆ. ಆರೋಪಿಗಳಿಗೆ ಥಳಿಸಿ ಶಿಕ್ಷಿಸುವುದು ಸರಿಯಲ್ಲ. ನ್ಯಾಯಾಲಯವೇ ತೀರ್ಪು ನೀಡಬೇಕು. ಪೊಲೀಸರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಕೆಲವು ನೆಟ್ಟಿಗರು ಹೇಳಿದ್ದಾರೆ.

ಇನ್ನು ಕೆಲವು ಪೊಲೀಸರನ್ನು ಪ್ರಶಂಸಿಸಿದ್ದಾರೆ. ಇವೆಲ್ಲವುದರ ನಡುವೆ ಬೆಲೆ ಏರಿಕೆ, ಬಡತನದ ವಿಚಾರವನ್ನು ಕೆಲವು ನೆಟ್ಟಿಗರು ಮುಂದಿಟ್ಟಿದ್ದಾರೆ. ಮಹಿಳೆಯರು ತರಕಾರಿ ಕದ್ದಿರುವುದು ನಿಜವೇ ಆಗಿದ್ದರೆ, ಅವರ ಬಡತನದ ಬಗ್ಗೆ ಚಿಂತಿಸಬೇಕು. ಪ್ರಸ್ತುತ ದೇಶದಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಬಡವರಿಗೆ ಒಂದು ಹೊತ್ತಿನ ಊಟಕ್ಕೂ ಕಷ್ಟವಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X