ಎಐಯುಟಿಯುಸಿ ಜಿಲ್ಲಾ ಸಮಿತಿಯಿಂದ ಮೈಸೂರು ನಗರದ ಗಾಂಧಿ ವೃತ್ತದಲ್ಲಿ ಗಾಜಾ ಉಳಿಯಲಿ, ಇಸ್ರೇಲ್ ದಾಳಿ ನಿಲ್ಲಲಿ ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಸಾಮ್ರಾಜ್ಯ ಶಾಹಿ ಅಮೇರಿಕದ ನೆರವಿನೊಂದಿಗೆ ಜಿಯೋನಿಸ್ಟ್ ಇಸ್ರೇಲ್, ಗಾಜಾದ ಅಸ್ತಿತ್ವವನ್ನೇ ನಾಶ ಮಾಡುವಂತಹ ಭೀಕರವಾದ ಶಸ್ತ್ರಾಸ್ತ್ರ ದಾಳಿಯನ್ನು ನಡೆಸುತ್ತಿದೆ. ಕದನ ವಿರಾಮವನ್ನು ಕೂಡಾ ಲೆಕ್ಕಿಸದೇ ನಿರಾಶ್ರಿತ ಶಿಬಿರಗಳು, ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳನ್ನು, ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಈ ಭೀಕರ ದಾಳಿಯಿಂದಾಗಿ ಸಾವಿರಾರು ಮಂದಿ ಪ್ಯಾಲೇಸ್ತೀನಿ ಮುಗ್ಧ ಮಕ್ಕಳು, ನಾಗರಿಕರು, ಬಡವರು, ಶ್ರಮಿಕರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
ಇಸ್ರೇಲಿನ ಈ ಪಾಶವೀ ದಾಳಿಗೆ, ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ತನ್ನ ಹಿಡಿತವನ್ನು ಸಾಧಿಸಲು ಸರ್ವಪ್ರಯತ್ನಗಳನ್ನು ಮಾಡುತ್ತಿರುವ ಅಮೇರಿಕ ಶಸ್ತ್ರಾಸ್ತ್ರ ಮತ್ತು ತಂತ್ರಜ್ಞಾನದ ಪೂರೈಕೆಯ ಮೂಲಕ ಸಹಾಯ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಇದು ಕೇವಲ ಇಸ್ರೇಲ್- ಪ್ಯಾಲೇಸ್ಥಾನ್ ನಡುವಿನ ಯುದ್ಧಕ್ಕೆ ಮಾತ್ರವಲ್ಲದೇ ಇಡೀ ಜಗತ್ತಿನಲ್ಲಿ ನಡೆಯುತ್ತಿರುವ ಬಹುತೇಕ ಎಲ್ಲಾ ಯುದ್ಧಗಳು ಸಹ ಬಂಡವಾಳಶಾಹಿ ವ್ಯವಸ್ಥೆಯ ಮಾರುಕಟ್ಟೆಯನ್ನು ಉಳಿಸುವ, ವಿಸ್ತರಿಸುವ ಪ್ರಯತ್ನಗಳ ಭಾಗವಾಗಿವೆ.
ಆದರೆ ಅಂತಿಮವಾಗಿ ನೋವನ್ನು ಅನುಭವಿಸುವವರು ಆಯಾಯ ದೇಶಗಳ ಬಡಪಾಯಿ ನಾಗರೀಕರು. ಈ ಹಿನ್ನೆಲೆಯಲ್ಲಿ ವಿಶ್ವದ ಶಾಂತಿಯನ್ನು ಕಾಪಾಡುವ ಸಲುವಾಗಿ, ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಈ ಕೂಡಲೇ ನಿಲ್ಲಿಸಬೇಕು ಹಾಗೂ ಗಾಜಾದಲ್ಲಿ ಶಾಂತಿ ಸ್ಥಾಪಿಸಬೇಕೆಂದು ಆಗ್ರಹಿಸಿ ಎಐಯುಟಿಯುಸಿ ಮೈಸೂರು ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಕೊಡಗು | ಜಿಲ್ಲಾಡಳಿತದಿಂದ ಮಹಾವೀರ ಜಯಂತ್ಯುತ್ಸವ
ಎಐಯುಟಿಯುಸಿ ರಾಜ್ಯ ನಾಯಕಿ ಕಾ. ಎಂ. ಉಮಾದೇವಿ ಹಾಗೂ ಎಐಯುಟಿಯುಸಿ ಮೈಸೂರು ಜಿಲ್ಲಾ ಕಾರ್ಯದರ್ಶಿಗಳಾದ ಕಾ. ಚಂದ್ರಶೇಖರ್ ಮೇಟಿ, ಜಿಲ್ಲಾಧ್ಯಕ್ಷ ಕಾ.ಯಶೋಧರ್, ಜಿಲ್ಲಾ ಸಮಿತಿ ಸದಸ್ಯರಾದ ಕಾ. ಸಂಧ್ಯಾ, ಮುದ್ದು ಕೃಷ್ಣ, ಹರೀಶ್ಸೇ ರಿದಂತೆ ಇನ್ನಿತರರು ಇದ್ದರು.