ಬೀದರ್‌ | ಸಂವಿಧಾನ ಮೇಲೆ ಬೆಳಕು ಚೆಲ್ಲುವ ʼಭಾಗ್ಯವಿದಾತʼ ಕೃತಿ : ಧನರಾಜ ತುಡಮೆ

Date:

Advertisements

ದೇಶಕ್ಕೆ ರಾಜಪ್ರಭುತ್ವಕ್ಕಿಂತ ಪ್ರಜಾಪ್ರಭುತ್ವದ ಅವಶ್ಯಕತೆಯಿದೆ ಎಂದು ತಿಳಿದ ಡಾ.ಅಂಬೇಡ್ಕರ್ ಅವರು ಬಹುತ್ವ ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ಸಂವಿಧಾನ ಎಂಬ ವಿಷಯ ಮೇಲೆಯೇ ʼಭಾಗ್ಯವಿದಾತʼ ಕೃತಿ ಬೆಳಕು ಚೆಲ್ಲುತ್ತದೆ ಎಂದು ಸಾಹಿತಿ ಡಾ.ಧನರಾಜ ತುಡಮೆ ಅಭಿಪ್ರಾಯಪಟ್ಟರು.

ಬೀದರ್ ನಗರದ ಮಹಾಲಕ್ಷ್ಮೀ ಸಾಂಸ್ಕೃತಿಕ ಭವನದಲ್ಲಿ ಸಾಹಿತ್ಯರತ್ನ ಅಣ್ಣಾಭಾವು ಸಾಠೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಲೋಕಮಂಚ್ ಟ್ರಸ್ಟ್ ವತಿಯಿಂದ ಗುರುವಾರ ಆಯೋಜಿಸಿದ ಭಾರತ ಸಂವಿಧಾನದ ಮಹತ್ವ ಸಾರುವ ʼಭಾಗ್ಯವಿಧಾತʼ ಕವನ ಸಂಕಲನ ಬಿಡುಗಡೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಪುಸ್ತಕ ಕುರಿತು ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಅವರು ವಿಶ್ವದ ಅಪಾರ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಸಂವಿಧಾನ ರಚನೆ ಸುಲಭದ ಮಾತಲ್ಲ. ಸೂಜಿಯ ಮೊನೆಯಷ್ಟೂ ಲೋಪವಿಲ್ಲದ ಸಂವಿಧಾನ ರಚಿಸಿ ಭಾರತ ದೇಶಕ್ಕೆ ಅರ್ಪಿಸಿದ್ದಾರೆ. ದೇಶದ ಸರ್ವಜನರ ಅಭ್ಯುದಯಕ್ಕಾಗಿ ರಚಿಸಲಾದ ಸಂವಿಧಾನ ಮೇಲೆ ಬೆಳಕು ಚೆಲ್ಲುವ 48‌ ಮೌಲಿಕ ಕವಿತೆಗಳ ಕೃತಿ ಓದುಗರನ್ನು ಆಕರ್ಷಿಸುತ್ತದೆʼ ಎಂದರು.

Advertisements

ಸಾಹಿತಿ ಕಾವ್ಯಶ್ರೀ ಮಹಾಗಾಂವಕರ್‌ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಮಹಿಳೆಯರ ನೋವು ಅರ್ಥೈಸಿಕೊಂಡ ಡಾ.ಬಿ.ಆರ್.ಅಂಬೇಡ್ಕರ್‌ ಅವರು ಮಹಿಳಾ ಸಮಾನತೆಗಾಗಿ ಅನೇಕ ಹಕ್ಕುಗಳನ್ನು ಒದಗಿಸಿಕೊಟ್ಟಿದ್ದಾರೆ. ಬಾಬಾ ಸಾಹೇಬರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ ಎನಿಸುತ್ತವೆ. ನಾವೆಲ್ಲರೂ ಸಂವಿಧಾನ ಮಾರ್ಗದಲ್ಲಿ ಮುನ್ನಡೆಯೋಣʼ ಎಂದರು.

DSC 0699
ಸಾಹಿತಿ ಕಾವ್ಯಶ್ರೀ ಮಹಾಗಾಂವಕರ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅವರು ಕವನ ಸಂಕಲನ ಬಿಡುಗಡೆಗೊಳಿಸಿ ಮಾತನಾಡಿ, ʼಸಂವಿಧಾನ ಅರ್ಥೈಸಿಕೊಂಡವರು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಲು ಸಾಧ್ಯ. ಯಾವುದೇ ಒಂದು ಜಾತಿ-ಧರ್ಮದವರಿಗೆ ಮಾತ್ರ ಅಲ್ಲದೇ ದೇಶದ ಸರ್ವರಿಗೂ ಸಂವಿಧಾನ ನ್ಯಾಯದ ಹಕ್ಕು ನೀಡಿದ್ದಾರೆ. ಸಮಾಜದಲ್ಲಿ ಸಂವಿಧಾನ ಜಾಗೃತಿಗೆ ʼಭಾಗ್ಯವಿದಾತʼ ಪುಸ್ತಕ ಅತ್ಯಂತ ಮಹತ್ವದಾಗಿದೆʼ ಎಂದು ಶ್ಲಾಘಿಸಿದರು.

ಸಾಹಿತ್ಯರತ್ನ ಅಣ್ಣಾಭಾವು ಸಾಠೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಲೋಕಮಂಚ್ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ಮನೋಹರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ʼವ್ಯಕ್ತಿಯ ಬದುಕಿನ ತುಡಿತ, ಭಾವನೆಗಳ ಹೊಯ್ದಾಟ, ವಾದ-ವಿವಾದಗಳ ಬಗೆಹರಿಯುವಿಕೆಗೆ ಸಂವಿಧಾನ ಬೇಕೇ ಬೇಕು. ವ್ಯಕ್ತಿ ಸಮಸ್ಯೆಗಳನ್ನು ಹಲವು ಸಮಸ್ಯೆಗಳಿಗೆ ಕಾನೂನಿನ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಪ್ರತಿಯೊಬ್ಬರನ್ನು ಸಂವಿಧಾನ ಓದಿಸುವ ಕಾರ್ಯ ಹೆಚ್ಚೆಚ್ಚು ನಡೆಯಬೇಕಿದೆʼ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನ ಪೀಠಿಕೆ ಪಠಣ ಮಾಡಲಾಯಿತು. ʼಭಾಗ್ಯವಿದಾತʼ ಕವನ ಸಂಕಲನಕ್ಕೆ ಕವಿತೆ ಬರೆದ ಕವಿಗಳನ್ನು ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಜಾತಿ ಜನಗಣತಿ ಲಕೋಟೆ ಓಪನ್‌, ಜಾರಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ

ಪ್ರಮುಖರಾದ ಡಾ.ದೇವಿದಾಸ ತುಮಕುಂಟೆ, ಡಾ.ರಜಿಯಾ ಬಳಬಟ್ಟಿ, ಮಾರುತಿ ಬೌದ್ಧೆ, ನಾಗಶೆಟ್ಟಿ ಪಾಟೀಲ ಗಾದಗಿ, ಸಂಜೀವಕುಮಾರ್‌ ಅತಿವಾಳೆ, ಸುಜಾತಾ ಹೊಸಮನಿ, ದಿಲೀಪ ಆರ್., ಎಸ್.ಬಿ.ಕುಚಬಾಳ, ಅಶ್ವಜಿತ ದಂಡಿನ್, ಡಾ.ಶ್ರೇಯಾ ಯಶಪಾಲ, ರಮೇಶ ಬಿರಾದಾರ, ಅಜಿತ್‌ ನೇಳಗಿ, ಮಾಣಿಕ ನೇಳಗಿ, ಮಹೇಶ ಗೋರನಾಳಕರ್, ರೂಪಾ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.‌ ಹಿರಿಯ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ಪ್ರಾರ್ಥಿಸಿದರು. ಟ್ರಸ್ಟ್ ಖಜಾಂಚಿ ಸುಭಾಷ ರತ್ನ ಸ್ವಾಗತಿಸಿದರು. ಟ್ರಸ್ಟ್ ಉಪಾಧ್ಯಕ್ಷ ಸುಮಂತ ಕಟ್ಟಿಮನಿ ನಿರೂಪಿಸಿದರು. ಕಾರ್ಯದರ್ಶಿ ಪ್ರವೀಣಚಂದ್ರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X