ಬೀದರ್‌ | ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ವಿತರಣೆ ಆರಂಭ

Date:

Advertisements

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಡಿಪ್ಲೋಮಾ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಡಿಪ್ಲೋಮಾ ಪ್ರವೇಶ ಅರ್ಜಿಗಳನ್ನು ಕಚೇರಿ ಸಮಯದಲ್ಲಿ ಪಡೆಯಬಹುದೆಂದು ಬೀದರ್‌ ನಗರದ ಮೈಲೂರು ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ವಿಜಯಕುಮಾರ್ ಎಸ್.ಜಾಧವ್ ಅವರು ತಿಳಿಸಿದ್ದಾರೆ.

‘ಭರ್ತಿ ಮಾಡಿದ ಅರ್ಜಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ನಂತರ ಸಂಬಂಧಪಟ್ಟ ದಾಖಲೆಗಳೊಂದಿಗೆ ಸ್ವೀಕರಿಸಲಾಗುತ್ತದೆ. ಆದ್ದರಿಂದ ಪ್ರವೇಶ ಬಯಸುವ ವಿದ್ಯಾರ್ಥಿಗಳು ಸಂಸ್ಥೆಯಿಂದ ಅರ್ಜಿ ಪಡೆದುಕೊಂಡ ನಂತರ ಅವಶ್ಯಕ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲು ಸೂಚಿಸಲಾಗಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವಶ್ಯಕ ದಾಖಲೆಗಳು : ಶಾಲೆಯ ಮುಖ್ಯಸ್ಥರು ಧೃಢೀಕರಿಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತೀರ್ಣಗೊಂಡ ಅಂಕಪಟ್ಟಿ, ಮೂಲ ವರ್ಗಾವಣೆ ಪತ್ರ, ೧ ರಿಂದ ೧೦ನೇ ತರಗತಿವರೆಗಿನ ವ್ಯಾಸಂಗ ಪ್ರಮಾಣಪತ್ರ, 6 ಪಾಸ್ ಪೋರ್ಟ್‌ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ/ಗ್ರಾಮೀಣ/ಕಲ್ಯಾಣ-ಕರ್ನಾಟಕ ಪ್ರಮಾಣ ಪತ್ರಗಳು (ಅನ್ವಯಿಸಿದಲ್ಲಿ ಮಾತ್ರ), ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿಗಳನ್ನು ಸಿದ್ಧಪಡಿಸಿಟ್ಟುಕೊಳ್ಳತಕ್ಕದ್ದು. ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡು ಡಿಪ್ಲೋಮಾ ಪ್ರವೇಶಕ್ಕಾಗಿ ಪ್ರಕಟಣೆ ಹೊರಡಿಸಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದೆಂದು ತಿಳಿಸಿದ್ದಾರೆ.

Advertisements

ಸರ್ಕಾರಿ ಪಾಲಿಟೆಕ್ನಿಕ್ ಬೀದರ್ ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಮೆಕಾನಿಕಲ್ ಇಂಜಿನಿಯರಿಂಗ್ (60 ಸೀಟುಗಳು), ಆಟೊಮೊಬೈಲ್ ಇಂಜಿನಿಯರಿಂಗ್ (60), ಸಿವಿಲ್ ಇಂಜಿನಿಯರಿಂಗ್ (60), ಎಲೆಕ್ಟ್ರಿಕಲ್ ಅಂಡ್ ಎಲೆಕ್ಟಾçನಿಕ್ಸ್ ಇಂಜಿನಿಯರಿAಗ್ (60), ಎಲೆಕ್ಟ್ರಾನಿಕ್ಸ್ ಅಂಡ್ ಕಮುನಿಕೇಶನ್ ಇಂಜಿನಿಯರಿಂಗ್ (60), ಕಂಪ್ಯೂಟರ್ ಸೈನ್ಸ್ (30) ಮತ್ತು ಕಮರ್ಷಿಯಲ್ ಪ್ರ‍್ಯಾಕ್ಟೀಸ್ (ಕನ್ನಡ-30, ಇಂಗ್ಲೀಷ್-30) ಸೀಟುಗಳು ಪ್ರವೇಶಕ್ಕಾಗಿ ಲಭ್ಯವಿವೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X