ಯೂಟ್ಯೂಬರ್ ಸಮೀರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

Date:

Advertisements

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಕುರಿತು ವಿಡಿಯೋಗಳನ್ನು ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ‌ ದಾಖಲಿಸಿದ್ದಾರೆ. 10 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಕೋರಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ‘ಊರ ಗೌಡ’ರನ್ನು ಉಲ್ಲೇಖಿಸಿ ಸಮೀರ್‌ ವಿಡಿಯೋ ಮಾಡಿದ್ದರು. ಆ ವಿಡಿಯೋ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ವಿರೇಂದ್ರ ಹೆಗಡೆ ಅವರನ್ನು ಗುರಿಯಾಸಿಕೊಂಡಿದೆ ಎಂದು ಆರೋಪಿಸಲಾಗಿತ್ತು. ವಿಡಿಯೋ ಡಿಲೀಟ್ ಮಾಡುವಂತೆ ಧರ್ಮಸ್ಥಳದ ಪರವಾಗಿ ಕೆಲವರು ನ್ಯಾಯಾಲಯದಿಂದ ಆದೇಶ ತಂದಿದ್ದರು.

Advertisements

ಆದಾಗ್ಯೂ, ಸಮೀರ್ ವಿಡಿಯೋ ಡಿಲೀಟ್ ಮಾಡಿರಲಿಲ್ಲ. ಈಗ ಸಮೀರ್ ವಿರುದ್ಧ ಧರ್ಮಸ್ಥಳದ ಪರವಾಗಿ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ 10 ಕೋಟಿ ರೂ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ.

ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿರುವ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶ ಎಸ್‌. ನಟರಾಜ್‌ ಅವರು ಪ್ರತಿವಾದಿ ಸಮೀರ್‌ಗೆ ನೋಟಿಸ್‌ ಜಾರಿ ಮಾಡಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋವನ್ನು ತಕ್ಷಣ ಡಿಲೀಟ್‌ ಮಾಡಬೇಕು. ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X