ಐಪಿಎಲ್ 2025 | ಧೋನಿ ಔಟ್‌ ಇಲ್ಲದಿದ್ದರೂ ವಿವಾದಾತ್ಮಕ ತೀರ್ಪು ನೀಡಿದ ಅಂಪೈರ್

Date:

Advertisements

ಇಂಡಿಯನ್ ಪ್ರೀಮಿಯರ್ ಲೀಗ್​ನ 25ನೇ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪು ಇದೀಗ ವಿವಾದಕ್ಕೀಡಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಸಿಎಸ್​ಕೆ ತಂಡವು 72 ರನ್​ ಕಲೆಹಾಕುವಷ್ಟರಲ್ಲಿ 7 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಮಹೇಂದ್ರ ಸಿಂಗ್ ಧೋನಿ, ಸುನಿಲ್ ನರೈನ್ ಎಸೆತದಲ್ಲಿ ಎಲ್​ಬಿ ಆದರು. ಇತ್ತ ಧೋನಿ ಎಲ್​ಬಿ ಆಗುತ್ತಿದ್ದಂತೆ ಕೆಕೆಆರ್ ಆಟಗಾರರು ಮನವಿ ಮಾಡಿದರು.
ಈ ಮನವಿಗೆ ಫೀಲ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದಾರೆ. ಇದರ ಬೆನ್ನಲ್ಲೇ ಮಹೇಂದ್ರ ಸಿಂಗ್ ಧೋನಿ ರಿವ್ಯೂ ತೆಗೆದುಕೊಂಡಿದ್ದಾರೆ. ರಿವ್ಯೂ ವೇಳೆ ಚೆಂಡು ಧೋನಿಯ ಬ್ಯಾಟ್ ಸವರಿ ಸಾಗುತ್ತಿರುವುದು ಸ್ಪಷ್ಟವಾಗಿ ಗೋಚರಿಸಿದೆ. ಇದರಿಂದ ಅಲ್ಟ್ರಾಎಡ್ಜ್​ ಮೀಟರ್​ನಲ್ಲೂ ಸ್ಪೈಕ್​ಗಳು ಕಾಣಿಸಿಕೊಂಡಿದೆ.

ಆದರೆ ಇದನ್ನು ಸರಿಯಾಗಿ ಪರಿಶೀಲಿಸದೇ ಮೂರನೇ ಅಂಪೈರ್ ಧೋನಿಯನ್ನು ಎಲ್​ಬಿಡಬ್ಲ್ಯೂ ಎಂದು ಔಟ್ ನೀಡಿದ್ದಾರೆ. ಇತ್ತ ನಿರಾಸೆಯಿಂದಲೇ ಮಹೇಂದ್ರ ಸಿಂಗ್ ಧೋನಿ (1) ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

Advertisements

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಧೋನಿ

ಮಹೇಂದ್ರ ಸಿಂಗ್ ಧೋನಿ ನಾಟೌಟ್ ಆಗಿದ್ದರೂ ಔಟ್ ತೀರ್ಪು ನೀಡಿರುವ ಅಂಪೈರ್ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶಗಳು ವ್ಯಕ್ತವಾಗಿದೆ. ಅದರಲ್ಲೂ ಧೋನಿ ಬ್ಯಾಟ್​ಗೆ ಚೆಂಡು ತಾಗಿರುವ ಭಾವಚಿತ್ರಗಳನ್ನು ಧೋನಿ ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು, ಅಂಪೈರ್ ನಿರ್ಧಾರವನ್ನು ಪ್ರಶ್ನಿಸುತ್ತಿದ್ದಾರೆ.

ಈ ಫೋಟೋಗಳು ಹಾಗೂ ವಿಡಿಯೋವನ್ನು ಪರಿಶೀಲಿಸಿದರೆ, ಮೇಲ್ನೋಟಕ್ಕೆ ನಾಟೌಟ್ ಎಂದು ಗೊತ್ತಾಗುತ್ತಿದ್ದರೂ, ಮೂರನೇ ಅಂಪೈರ್ ಔಟ್ ನೀಡಿದ್ದೇಕೆ ಎಂಬುದೇ ಈಗ ಪ್ರಶ್ನೆಯಾಗಿ ಉಳಿದಿದೆ.

ಧೋನಿಯ ಈ ವಿಕೆಟ್​ನೊಂದಿಗೆ ಇಡೀ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 20 ಓವರ್​ಗಳಲ್ಲಿ 103 ರನ್​​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. 104 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 10.1 ಓವರ್​ಗಳಲ್ಲಿ 107 ರನ್ ಬಾರಿಸಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Dhoni out controvercy 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X