ಸಾಮಾನ್ಯ ನಾಗರಿಕರಂತೆ ಬಸ್‌ ಮೂಲಕ ವಿಜಯಪುರಕ್ಕೆ ತೆರಳಿದ ಸಚಿವ ಕೃಷ್ಣ ಬೈರೇಗೌಡ

Date:

Advertisements

ಸಚಿವ ಕೃಷ್ಣ ಬೈರೇಗೌಡ ಸದಾ ಸಾಮಾನ್ಯ ಜನರಂತೆ ಇರುಲು ಪ್ರಯತ್ನಿಸಿ, ತಮ್ಮ ಭಿನ್ನ ಕೆಲಸ ಕಾರ್ಯಗಳ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಶುಕ್ರವಾರ ರಾತ್ರಿ ಕಾರ್ ತೊರೆದು ಸಾಮಾನ್ಯ ನಾಗರಿಕರಂತೆ ಬಸ್ಸಿನ ಮೂಲಕ ವಿಜಯಪುರಕ್ಕೆ ಪ್ರಯಾಣ ಮಾಡಿ ಗಮನ ಸೆಳೆದಿದ್ದಾರೆ.

ಇಲಾಖೆಯ ಕೆಲಸದ ನಿಮಿತ್ತ ಕೃಷ್ಣ ಬೈರೇಗೌಡ ಅವರು ಬೆಂಗಳೂರಿನಿಂದ ವಿಜಯಪುರಕ್ಕೆ ಕಲ್ಯಾಣ ರಥ ಬಸ್‌ನಲ್ಲಿ ತೆರಳಿದ್ದಾರೆ. ಸಾಮಾನ್ಯವಾಗಿ ಪಕ್ಕದ ಜಿಲ್ಲೆಗೆ ಹೋಗಬೇಕಾದರೆ ವಿಮಾನದ ಮೂಲಕ ಪ್ರಯಾಣ ಮಾಡಿ ನಂತರದಲ್ಲಿ ಕಾರ್‌ನಲ್ಲಿ ರಸ್ತೆಯ ಮೂಲಕ ಸಚಿವರು ತೆರಳುವುದು ಸಾಮಾನ್ಯ.

ಆದರೆ ಕೃಷ್ಣ ಬೈರೇಗೌಡ‌ ಹಠಾತ್ ಕಾರ್ ತೊರೆದು ಬಸ್‌ ನಲ್ಲಿ ಪ್ರಯಾಣ ಮಾಡುವ ಮೂಲಕ ಗಮನ ಸೆಳೆದರು. ವಿಜಯಪುರಕ್ಕೆ ಶನಿವಾರ ಬಂದಿಳಿದಾಗ ಸ್ಥಳೀಯ ಅಧಿಕಾರಿಗಳು ಮತ್ತು ಆಪ್ತರು ಪುಸ್ತಕ ನೀಡಿ ಜಿಲ್ಲೆಗೆ ಸ್ವಾಗತಿಸಿದರು.

Advertisements

ವಿಭಿನ್ನ ಕಾರ್ಯವೈಖರಿ ಮೂಲಕ ಗಮನ ಸೆಳೆಯುತ್ತಿರುವ ಸಚಿವ ಕೃಷ್ಣ ಬೈರೇಗೌಡರು ಕಂದಾಯ ಇಲಾಖೆಯ ಕಚೇರಿಗಳಿಗೆ ದಿಢೀರ್ ಭೇಟಿ ನೀಡುವ ಮೂಲಕ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ತಮ್ಮ ಇಲಾಖೆಯ ಕೆಲಸ ಕಾರ್ಯಗಳಿಗೂ ವೇಗ ನೀಡುತ್ತಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ಹಾಗೂ ಕೆಲಸ ಮಾಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಕೆಲಸವನ್ನೂ ಮಾಡುತ್ತಿದ್ದಾರೆ.

ಸಚಿವರ ಕಾರ್ಯವೈಖರಿಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಕೆಲವು ದಿನಗಳ ಹಿಂದೆ ವಿಧಾನಸೌಧದಲ್ಲಿ ನಡೆದಿದ್ದ ಕಂದಾಯ ಇಲಾಖೆಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಚಿವ ಕೃಷ್ಣ ಬೈರೇಗೌಡ ಅವರ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದ್ದರು. ಒಂದೂವರೆ ವರ್ಷದಲ್ಲಿ 26 ಲಕ್ಷ ಸರ್ವೇ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದಕ್ಕೆ ಸಚಿವರಿಗೆ ಅಭಿನಂದಿಸಿದ್ದರು.

“ಕಂದಾಯ ಇಲಾಖೆ ರಾಜ್ಯ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಸಚಿವ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ. ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ನಾಲಗೆ ತುದಿಯಲ್ಲಿ ಅಂಕಿ – ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿಯಾಗಿದ್ದಾರೆ” ಎಂದು ಹಾಡಿ ಹೊಗಳಿದ್ದನ್ನು ಇಲ್ಲಿ ಗಮನಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X