ದೆಹಲಿ | ಧೂಳಿನ ಬಿರುಗಾಳಿ; 205 ವಿಮಾನಗಳು ವಿಳಂಬ, ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

Date:

Advertisements

ಶುಕ್ರವಾರ ದೆಹಲಿಯಲ್ಲಿ ತೀವ್ರವಾದ ಧೂಳಿನ ಬಿರುಗಾಳಿ ಉಂಟಾದ ಕಾರಣದಿಂದಾಗಿ ವಿಮಾನಯಾನದಲ್ಲಿ ವ್ಯತ್ಯಯ ಉಂಟಾಗಿದೆ. ಕನಿಷ್ಠ 205 ವಿಮಾನಗಳು ವಿಳಂಬವಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿತ್ತು. ಕನಿಷ್ಠ 50 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಸರಾಸರಿ ಒಂದು ಗಂಟೆಗಳ ಕಾಲ ನಿರ್ಗಮನ ವಿಳಂಬವಾಗಿದೆ ಎನ್ನಲಾಗಿದೆ.

“ಧೂಳಿನ ಬಿರುಗಾಳಿಯ ನಂತರ, ಅನೇಕ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಮತ್ತು ರದ್ದುಗೊಳಿಸಲಾಗಿದೆ. ಇದರಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ತಮ್ಮ ವಿಮಾನಗಳಿಗಾಗಿ ಕಾಯುತ್ತಿದ್ದ ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಯಿತು. ಬೇರೆಡೆಗೆ ಮಾರ್ಗ ಬದಲಾಯಿಸಿಕೊಂಡ ವಿಮಾನಗಳು ದೆಹಲಿಗೆ ತಲುಪುವುದು ತಡವಾಗಿದೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಜನದಟ್ಟಣೆ ಉಂಟಾಗಿದೆ” ಎಂದು ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ| ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ: 7 ಮಂದಿ ಸಾವು; ಆರೆಂಜ್ ಅಲರ್ಟ್ ಘೋಷಣೆ

Advertisements

ಏರ್ ಇಂಡಿಯಾ ಮತ್ತು ಇಂಡಿಗೋದಂತಹ ವಿಮಾನಯಾನ ಸಂಸ್ಥೆಗಳು ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ. ಆದರೆ ನಿರಾಶೆಗೊಂಡ ಪ್ರಯಾಣಿಕರು ತಮ್ಮ ಕಷ್ಟವಾಗಿದೆ ಎಂದು ಹೇಳಿಕೊಂಡಿದ್ದಾರೆ. “ಶ್ರೀನಗರದಿಂದ ದೆಹಲಿಗೆ ಮುಂಬೈಗೆ ಸಂಜೆ 4 ಗಂಟೆಗೆ ವಿಮಾನವಿತ್ತು. ನಮ್ಮ ವಿಮಾನವು ಸಂಜೆ 6 ಗಂಟೆಯ ಸುಮಾರಿಗೆ ದೆಹಲಿಯಲ್ಲಿ ಇಳಿಯಬೇಕಿತ್ತು. ಆದರೆ ಧೂಳಿನ ಬಿರುಗಾಳಿಯಿಂದಾಗಿ ಚಂಡೀಗಢಕ್ಕೆ ಮಾರ್ಗ ಬದಲಾಯಿಸಲಾಗಿದೆ. ಅದಾದ ನಂತರ ರಾತ್ರಿ 11 ಗಂಟೆಗೆ ದೆಹಲಿಗೆ ತಲುಪಿದೆ” ಎಂದು ಏರ್ ಇಂಡಿಯಾ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

“ನಂತರ ನಮ್ಮನ್ನು ದೆಹಲಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಮುಂಬೈಗೆ ತೆರಳುವ ಮತ್ತೊಂದು ವಿಮಾನ ಹತ್ತುವಂತೆ ತಿಳಿಸಲಾಗಿದೆ. ನಾವು ಸುಮಾರು 4 ಗಂಟೆಗಳ ಕಾಲ ವಿಮಾನದಲ್ಲಿ ಕುಳಿತುಕೊಂಡೆವು. ನಂತರ ಮತ್ತೆ ಇಳಿಯಲು ತಿಳಿಸಲಾಯಿತು. ಮತ್ತೆ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು. ಈಗ ಬೆಳಿಗ್ಗೆ 8 ಗಂಟೆ ನಾವು ಇನ್ನೂ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದೇವೆ. ನಮ್ಮ ವಿಮಾನ ಇನ್ನೂ ಟೇಕ್ ಆಫ್ ಆಗಿಲ್ಲ” ಎಂದು ಸಿಲುಕಿಕೊಂಡ ಪ್ರಯಾಣಿಕರು ಹೇಳಿದ್ದಾರೆ.

ಇನ್ನು ಕೆಲವರು ಎಕ್ಸ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಿರ್ವಹಣೆ, ಮಾಹಿತಿ ನೀಡುವ ವಿಚಾರದಲ್ಲಿ ವಿಶ್ವ ದರ್ಜೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾದ ನವದೆಹಲಿ ಬಸ್ ನಿಲ್ದಾಣಕ್ಕಿಂತ ಕೆಟ್ಟದಾಗಿದೆ” ಎಂದು ತಿಳಿಸಿದ್ದಾರೆ.

“ಕೋಲ್ಕತ್ತಾದಿಂದ ದೆಹಲಿಗೆ ಇಂಡಿಗೋ ವಿಮಾನವನ್ನು ಸಂಜೆಯಿಂದ 6 ಬಾರಿ ಮರು ನಿಗದಿಪಡಿಸಲಾಗಿದೆ. ಇಂಡಿಯಾಗೋ ಪ್ರಯಾಣಿಕರನ್ನು ಹಗುರವಾಗಿ ಪರಿಗಣಿಸುತ್ತಿದ್ದೀರಾ? ನಿಮ್ಮಿಂದಾಗಿ ಈಗಾಗಲೇ ಆರು ಗಂಟೆ ನಷ್ಟವಾಗಿದೆ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X