ಬೆಂಗಳೂರು | ವೇತನ ಪಾವತಿ ವಿಳಂಬ: ಬಿಬಿಎಂಪಿಯ 30ಕ್ಕೂ ಹೆಚ್ಚು ಮಾರ್ಷಲ್‌ಗಳು ರಾಜೀನಾಮೆ

Date:

Advertisements

ಹಲವು ತಿಂಗಳುಗಳಿಂದ ಬಿಬಿಎಂಪಿ ವೇತನ ಪಾವತಿ ಮಾಡದೆ, ವಿಳಂಬ ಮಾಡುತ್ತಿರುವ ಕಾರಣ, ಬೇಸತ್ತ 30ಕ್ಕೂ ಹೆಚ್ಚು ‘ಲೇಕ್‌’ (ಕರೆ) ಮಾರ್ಷಲ್‌ಗಳು ತಮ್ಮ ಹುದ್ದೆಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳಲ್ಲಿ ಕಾವಲು ಕಾಯುತ್ತಿದ್ದ ಮಾರ್ಷಲ್‌ಗಳು ರಾಜೀನಾಮೆ ನೀಡಿದ್ದು, ತಮ್ಮ ಹುದ್ದೆಗಳನ್ನು ತೊರೆದಿದ್ದಾರೆ.

ಈ ಹಿಂದೆ, ಉಭಯ ಕೆರೆಗಳಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ, ಕೆರೆಗಳು ಭಾರೀ ಕಲುಷಿತಗೊಂಡಿದ್ದವು. ಕೆರೆ ನಿರ್ವಹಣೆಯಲ್ಲಿ ಸರ್ಕಾರದ ನಿರ್ಲಕ್ಷ್ಯದ ವಿರುದ್ಶ ಅಸಮಾಧಾನ ವ್ಯಕ್ತಪಡಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸರ್ಕಾರಕ್ಕೆ ಭಾರೀ ದಂಡ ವಿಧಿಸಿತ್ತು. ಕೆರೆಗಳನ್ನು ಪುನರುಜ್ಜೀವನಗೊಳಿಸುವ ಜವಾಬ್ದಾರಿಯನ್ನು ಬಿಡಿಎಗೆ ನೀಡಿತ್ತು. ಜೊತೆಗೆ, ಕೆರೆಗಳ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಸಿ, ಭದ್ರತೆ ನೀಡುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಿತ್ತು.

ಅದರಂತೆ, ವರ್ತೂರು ಮತ್ತು ಬೆಳ್ಳಂದೂರು ಕೆರೆಗಳಿಗೆ ತಲಾ 25 ಮಂದಿ ಮಾರ್ಷಲ್‌ಗಳನ್ನು ಕಾವಲಿಗಾಗಿ ಬಿಬಿಎಂಪಿ ನೇಮಿಸಿತ್ತು. ಆದರೆ, ಅವರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಬಿಬಿಎಂಪಿ ವೇತನ ಪಾವತಿ ಮಾಡಿಲ್ಲ ಎಂದು ಹೇಳಲಾಗಿದೆ. ಹೀಗಾಗಿ, 30ಕ್ಕೂ ಹೆಚ್ಚು ಮಾರ್ಷಲ್‌ಗಳು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

Advertisements

ಬೆಳ್ಳಂದೂರು ಮತ್ತು ವರ್ತೂರು ಕೆರೆಗಳಲ್ಲಿ ಸುಮಾರು 50 ಮಾರ್ಷಲ್‌ಗಳು ದಿನ 24 ಗಂಟೆಯೂ ಎರಡು ಪಾಳಿಯಲ್ಲಿ ಕಾವಲು ಕಾಯುತ್ತಿದ್ದರು. ಆದರೆ, ಈಗ ಅವರಲ್ಲಿ ಅರ್ಧಕ್ಕೂ ಹೆಚ್ಚು ಮಾರ್ಷಲ್‌ಗಳು ರಾಜೀನಾಮೆ ನೀಡಿದ್ದು, ಕೆರೆಗಳಲ್ಲಿ ಕಾವಲು ಕಾಯುವವರು ಇಲ್ಲದಂತಾಗಿದೆ.

“ಕೆರೆಯ ಬಫರ್ ವಲಯವನ್ನು ವಲಸಿಗರು ಆಕ್ರಮಿಸಿಕೊಂಡಿದ್ದಾರೆ. ಕೆರೆ ಸುತ್ತಲಿನ ಹಲವು ಪ್ರದೇಶಗಳ ಜನರು ಕಸವನ್ನು ಕೆರೆ ಪ್ರದೇಶದಲ್ಲಿ ಸುರಿಯುತ್ತಾರೆ. ಕೆರೆ ಮಾರ್ಷಲ್‌ಗಳು ಇದನ್ನು ತಡೆಯುತ್ತಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಮಾರ್ಷಲ್‌ಗಳ ಸಂಖ್ಯೆ ಕಡಿಮೆಯಾಗಿದೆ” ಎಂದು ವರ್ತೂರು ಕೆರೆ ಬಳಿಯ ನಿವಾಸಿ ಜಗದೀಶ್ ರೆಡ್ಡಿ ಹೇಳಿದ್ದಾರೆ.

“ಜನವರಿಯಲ್ಲಿ ಎನ್‌ಸಿಸಿ ಹಿನ್ನೆಲೆಯುಳ್ಳವರನ್ನು ಮಾರ್ಷಲ್‌ಗಳಾಗಿ ನೇಮಕ ಮಾಡಿಕೊಳ್ಳಲಾಯಿತು. 20,000 ರೂ. ವೇತನ ನೀಡುವುದಾಗಿ ಹೇಳಿದ್ದರು. ಆದರೆ, 13,000 ರೂ. ಮಾತ್ರವೇ ನೀಡಲಾಗುತ್ತಿದೆ. ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಅಲ್ಲದೆ, ವೇತನವನ್ನೂ ಸರಿಯಾಗಿ ನೀಡುತ್ತಿಲ್ಲ” ಎಂದು ರಾಜೀನಾಮೆ ನೀಡಿರುವ ಮಾರ್ಷಲ್‌ವೊಬ್ಬರು ಹೇಳಿರುವುದಾಗಿ ‘ಕನ್ನಡಪ್ರಭ’ ವರದಿ ಮಾಡಿದೆ.

“ವಿಳಂಬವು ಕೆರೆ ವಿಭಾಗದ ವೇತನ ಪ್ಯಾಕೇಜ್‌ನಿಂದ ಉಂಟಾಗಿದೆ. ಮಾರ್ಷಲ್‌ಗಳಿಗೆ ಈ ಹಿಂದೆ, ಘನತ್ಯಾಜ್ಯ ನಿರ್ವಹಣಾ ಇಲಾಖೆಯು ವೇತನ ಪಾವತಿ ಮಾಡುತ್ತಿತ್ತು. ಆದರೆ, ಈಗ ಕೆರೆ ನಿರ್ವಹಣೆ ಮಾಡುವ ಇಲಾಖೆಗೆ ಹಸ್ತಾಂತರಿಸಲಾಗಿದೆ. ಜವಾಬ್ದಾರಿ ಹಸ್ತಾಂತರದ ಕಾರಣಕ್ಕಾಗಿ ವೇತನ ಪಾವತಿ ವಿಳಂಬವಾಗಿದೆ” ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X