ತುಮಕೂರು | ಕೀಲು ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ ಶಾಸಕ

Date:

Advertisements

ಕೀಲು ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಕೀಲು ಮತ್ತು ಮೂಳೆ ತಜ್ಞರೂ ಆಗಿರುವ ಶಾಸಕ ಡಾ. ರಂಗನಾಥ್ ತಮ್ಮ ವೈದ್ಯ ಮಿತ್ರರೊಂದಿಗೆ ಸೇರಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಕುಂದೂರು ಗ್ರಾಮದ ಆಶಾ (42) ಎಂಬುವರಿಗೆ ಮಂಡಿಕೀಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಪತಿ ಅನಾರೋಗ್ಯ ಪೀಡಿತರಾಗಿರುವ ಕಾರಣ ತಮ್ಮ ಇಬ್ಬರು ಮಕ್ಕಳ ಪೋಷಣೆಯ ಹೊಣೆ ಆಶಾ ಅವರ ಮೇಲಿದೆ. ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಅವರು, ಹತ್ತು ವರ್ಷದ ಹಿಂದೆ ಮಂಡಿಕೀಲು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಇದೀಗ ಮತ್ತೆ ತೀವ್ರ ನೋವು ಕಾಣಿಸಿಕೊಂಡಿತ್ತು.

ಕೀಲು ತಪ್ಪಿದ (ಡಿಸ್‌ಲೊಕೇಟ್‌) ಕಾರಣ ಮತ್ತೆ ಶಸ್ತ್ರಚಿಕಿತ್ಸೆ ಅನಿವಾರ್ಯವಾಗಿತ್ತು. ಶಸ್ತ್ರಚಿಕಿತ್ಸೆಗೆ ₹3 ಲಕ್ಷ ವೆಚ್ಚವಾಗುತ್ತದೆಂದು ವೈದ್ಯರು ಹೇಳಿದ್ದರು. ಹಣ ಹೊಂದಿಸಲಾಗದ ಕಾರಣ ಆಶಾ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ.ಈ ವಿಷಯವನ್ನು ಕುಂದೂರು ಗ್ರಾಮದ ಮುಖಂಡ ವಸಂತ್ ಕುಮಾರ್ ಎಂಬುವರು ಕುಣಿಗಲ್‌ ಕ್ಷೇತ್ರದ ಶಾಸಕ ಡಾ. ರಂಗನಾಥ್ ಅವರ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ರಂಗನಾಥ್‌ ಅವರು ಕೀಲು ಮತ್ತು ಮೂಳೆ ರೋಗ ತಜ್ಞರಾಗಿರುವ ಕಾರಣ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾರೆ.

Advertisements

“ವಿಶೇಷ ಪ್ರಕರಣಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಸಹಕಾರೊಂದಿಗೆ ಶಸ್ತ್ರಚಿಕಿತ್ಸೆ ನಡೆಸಲು ಕಾನೂನಿನಲ್ಲಿ ಅವಕಾಶವಿದೆ. ಹಾಗಾಗಿ ಬೌರಿಂಗ್‌ ಆಸ್ಪತ್ರೆಯ ನಿರ್ದೇಶಕ ಮನೋಜ್‌ ಅವರ ಸಲಹೆ ಮೇರೆಗೆ ಡಾ. ದೀಪಕ್‌ ಜೊತೆಗೂಡಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ” ಎಂದು ಡಾ.ರಂಗನಾಥ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ₹1 ಲಕ್ಷ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಸಿಬ್ಬಂದಿ

“ಕುಣಿಗಲ್‌ ತಾಲೂಕಿನಲ್ಲಿ 50ಕ್ಕೂ ಹೆಚ್ಚು ಮಂದಿಗೆ ಕೀಲು ಸಂಬಂಧಿತ ಎರಡನೇ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಸರ್ಕಾರದ ಉಚಿತ ಚಿಕಿತ್ಸಾ ಯೋಜನೆಯಲ್ಲಿ ಮೊದಲ ಬಾರಿಗೆ ಮಾತ್ರ ಶಸ್ತ್ರಚಿಕಿತ್ಸೆಗೆ ಅವಕಾಶವಿದೆ. ಎರಡನೇ ಶಸ್ತ್ರಚಿಕಿತ್ಸೆಗಾಗಿ ರಾಜ್ಯದಲ್ಲಿ 50 ಸಾವಿರ ರೋಗಿಗಳಿದ್ದಾರೆ. ಸರ್ಕಾರ ಈ ನಿಯಮಗಳನ್ನು ಮರು ಪರಿಶೀಲನೆ ಮಾಡಬೇಕಿದೆ. ಈ ಬಗ್ಗೆ ಸದನದಲ್ಲಿ ದನಿ ಎತ್ತಲಾಗುವುದು” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X