‘ದಲಿತರು ಹಿಂದುಗಳಲ್ಲ’: ಬಿಜೆಪಿ ಅಂತರಂಗ ಬಿಚ್ಚಿಟ್ಟ ಕೇಂದ್ರ ಸಚಿವ ಜೋಶಿ

Date:

Advertisements

ಸಚಿವ ಪ್ರಲ್ಹಾದ್ ಜೋಶಿ ಅವರು ‘ದಲಿತರು ಹಿಂದುಗಳಲ್ಲ’ ಎಂಬ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಒಳಮನಸಿನ ಸತ್ಯವನ್ನು ಸ್ಪಷ್ಟಪಡಿಸಿದ್ದಾರೆ. ಈ ಸ್ಪಷ್ಟನೆಗಾಗಿ ಅವರಿಗೆ ಧನ್ಯವಾದಗಳು ಎಂದು ರಾಜ್ಯ ಸಚಿವ, ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚೆಗೆ, ಬೆಂಗಳೂರಿನಲ್ಲಿ ಮಾತನಾಡಿದ್ದ ಜೋಶಿ, “ಕಾಂಗ್ರೆಸ್ ಕೇವಲ ಹಿಂದುಗಳಿಗೆ ಮಾತ್ರವಲ್ಲ, ದಲಿತರಿಗೂ ವಿರೋಧಿಗಳು” ಎಂದು ಹೇಳಿದ್ದರು. ಅವರ ಹೇಳಿಕೆಯು ಹಿಂದುಗಳೇ ಬೇರೆ – ದಲಿತರೇ ಬೇರೆ ಎಂಬುದನ್ನು ಪ್ರತಿಧ್ವನಿಸಿತ್ತು.

ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿ-ಆರ್‌ಎಸ್‌ಎಸ್‌ನವರು ದಲಿತರು ಹಿಂದುಗಳಲ್ಲ ಎಂಬ ಧೋರಣೆ ಹೊಂದಿದ್ದಾರೆ. ಅದನ್ನು ಜೋಶಿ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.

Advertisements

“ಹಿಂದುಗಳೇ ಬೇರೆ, ದಲಿತರೇ ಬೇರೆ ಮತ್ತು ಸನಾತನದವರೇ ಬೇರೆ ಎನ್ನುವ ಆರ್‌ಎಸ್ಎಸ್ ಹಾಗೂ ಬಿಜೆಪಿಯ ವಿಭಜನಾತ್ಮಕ ಧೋರಣೆಯನ್ನು ಜೋಶಿಯವರು ಪ್ರಾಮಾಣಿಕವಾಗಿ ಸ್ಪಷ್ಟಪಡಿಸಿದ್ದಾರೆ. ಸನಾತನದಲ್ಲಿ ಹಿಂದುಗಳಿಲ್ಲ, ಹಿಂದುಗಳಲ್ಲಿ ದಲಿತರಿಲ್ಲ ಎನ್ನುವುದು ಸಂಘ ಪರಿವಾರದೊಳಗಿನ ಸತ್ಯ. ಈ ಸತ್ಯವನ್ನು ಸಮಾಜ ಅರ್ಥ ಮಾಡಿಕೊಳ್ಳುವಂತೆ ತಿಳಿಸಿದ್ದಕ್ಕೆ ಅಭಿನಂದನೆಗಳು!” ಎಂದು ಖರ್ಗ ಹೇಳಿದ್ದಾರೆ.

“ಜೋಶಿಯವರೇ, ನಿಮ್ಮ ಈ ಪ್ರತ್ಯೇಕತಾ ಧೋರಣೆಗಾಗಿಯೇ, ಈ ತಾರತಮ್ಯಕ್ಕಾಗಿಯೇ ಬಾಬಾ ಸಾಹೇಬರು ‘ಹಿಂದುವಾಗಿ ಹುಟ್ಟಿದ್ದೇನೆ, ಆದರೆ ಹಿಂದುವಾಗಿ ಸಾಯಲಾರೆ’ ಎಂದು ಬೌದ್ಧ ದಮ್ಮ ದೀಕ್ಷೆ ಪಡೆದರು. ಬಿಜೆಪಿ ನಾಯಕರಿಗೆ ಬಾಬಾ ಸಾಹೇಬರ ಸಿದ್ಧಾಂತದ ಮೇಲೆ ನೈಜ ಗೌರವ ಇರುವುದೇ ಆದರೆ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ ದಮ್ಮಚಕ್ರ ಪ್ರವರ್ತನ ದಿನವನ್ನು ಆಚರಿಸಿ, ತಾರತಮ್ಯದ ಬಗೆಗಿನ ಅಂಬೇಡ್ಕರ್ ಅವರ ಹೇಳಿಕೆಗಳನ್ನು ಓದಲಿ” ಎಂದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

4 COMMENTS

  1. ಹೌದು ಅವರು ಹೇಳಿದ್ದು ಸತ್ಯ, ಕೇವಲ ಬ್ರಾಹ್ಮಣರು ಮಾತ್ರ ಹಿಂದುಗಳು. ಉಳಿದವರು ಕೇವಲ ಚುನವಣೆ ಸಂದರ್ಭದಲ್ಲಿ ಮಾತ್ರ ಮತ ಚಲಾಯಿಸುವಾಗಷ್ಟೆ ಹಿಂದುಗಳು. ತದನಂತರ ಅವರೆಲ್ಲಾ ಶೂದ್ರರು.

  2. ದಲಿತರು ಭಾರತದ ಮೂಲನಿವಾಸಿಗಳು. ಮೂಲನಿವಾಸಿಗಳು ಯಾವತ್ತು ಹಿಂದುಗಳಾಗಲ್ಲ.

  3. .. ಇದು ಮೂರ್ಖರ ಸಂತೆ ಅನ್ಸುತ್ತೆ ., ” ಕಾಂಗ್ರೆಸ್ ಕೇವಲ ಹಿಂದೂಗಳಿಗೆ ಮಾತ್ರವಲ್ಲ ದಲಿತರಿಗೂ ಕೂಡಾ ವಿರೋಧಿಗಳು ” ಅನ್ನೋ ಈ ಹೇಳಿಕೆಯಲ್ಲಿ ನಿಮ್ಮೆಲ್ಲರಿಗೂ “ಕಾಂಗ್ರೆಸ್ ಅಂದರೆ ಹಿಂದೂಗಳು” ಅಂತ ಅರ್ಥಮಾಡಿಕೊಂಡಿರುವಂತೆ ಭಾವನೆ ಬರ್ತಾ ಇದೆ., ಆದರೆ ವಾಸ್ತವದಲ್ಲಿ ” ಕಾಂಗ್ರೆಸ್ ನಲ್ಲಿ ಯಾರೂ ಹಿಂದೂಗಳು ಅನ್ನುವವರು ಇಲ್ವೇ ಇಲ್ಲ., ಅಲ್ಲಿರುವವರೆಲ್ಲ ಸಂದರ್ಭಕ್ಕೆ ಸರಿಯಾಗಿ, ತಮ್ಮ ಸ್ವಾರ್ಥಸಾಧನೆಗಾಗಿ ಸಂದರ್ಭ ಬಂದಾಗಲೆಲ್ಲ ‘ ನಾನೂ ಒಬ್ಬ ಹಿಂದೂ ‘ ಅಂತ ಹೇಳಿಕೊಳ್ಳುವ ಮುಖವಾಡ ಧರಿಸಿಕೊಂಡಿರುವ ಕೇವಲ ನಟಭಯಂಕರ ಕಪಟಿಗಳು ಮಾತ್ರ ” ಈ ಸತ್ಯ ಸರಿಯಾಗಿ ಅರ್ಥಮಾಡಿಕೊಳ್ಳುವಲ್ಲಿ ಮೋಸ ಹೋಗಿರುವ ನಮ್ಮ ನಿಮ್ಮಂಥವರಿಂದ ಈ ದೇಶದ್ರೋಹಿ ಕಾಂಗ್ರೆಸ್ ಇನ್ನೂ ಈ ದೇಶದಲ್ಲಿ ಬದುಕಿದೆ ಮತ್ತು ನಮ್ಮನ್ನೆಲ್ಲ ನಿಧಾನವಾಗಿ ಸಾಯಿಸ್ತಾ ಇದೆ ಅಷ್ಟೇ…

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X