ಮಂಡ್ಯ | ಬೆಳೆ ವಿಮೆ ಕುರಿತು ರೈತರಿಗೆ ಅರಿವು ಮೂಡಿಸಿ; ಸಚಿವ ಸೂಚನೆ

Date:

Advertisements

ಮಂಡ್ಯ ಜಿಲ್ಲೆಯಲ್ಲಿ ಬೆಳೆ ವಿಮೆಗೆ ಹೆಚ್ಚಿನ ರೈತರು ನೋಂದಣಿ ಮಾಡಿಕೊಂಡಿಲ್ಲ. ವಿಮೆ ಕುರಿತು ರೈತರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಸೂಚಿಸಿದ್ದಾರೆ.

ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ಬೆಳೆ ವಿಮೆಯು ಬರ ಅಥವಾ ಪ್ರವಾಹದ ಸಂದರ್ಭದಲ್ಲಿ ರೈತರಿಗೆ ಪ್ರಯೋಜನವಾಗಲಿದೆ. ಕಳೆದ ವರ್ಷ ರೈತರಿಗೆ ಕಡಿಮೆ ಗುಣಮಟ್ಟದ ಬೀಜಗಳು ಮತ್ತು ರಸಗೊಬ್ಬರಗಳನ್ನು ಸರಬರಾಜು ಮಾಡಲಾಗಿದೆ ಎಂಬ ದೂರುಗಳು ಬಂದಿವೆ. ಸರ್ಕಾರ ಇಂತಹ ಧೋರಣೆಗಳನ್ನು ಸಹಿಸುವುದಿಲ್ಲ. ಮುಂಗಾರು ಆರಂಭದಲ್ಲಿ ರೈತರಿಗೆ ಅಗತ್ಯವಿರುವಷ್ಟು ಬೀಜಗಳು ಮತ್ತು ರಸಗೊಬ್ಬರಗಳ ದಾಸ್ತಾನು ಸರ್ಕಾರದ ಬಳಿ ಇದೆ” ಎಂದರು.

ಕೃಷಿ ಇಲಾಖೆಯೊಂದಿಗೆ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳನ್ನು ವಿಲೀನಗೊಳಿಸುವ ಸಾಧ್ಯತೆಯ ಕುರಿತು ಮಾತನಾಡಿದ ಸಚಿವರು, “ರಾಜ್ಯ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾಪವಿಲ್ಲ. ಹಿಂದಿನ ಸರ್ಕಾರದ ಆಡಳಿತದಲ್ಲಿ ಮಾತ್ರ ಚರ್ಚಿಸಲಾಗಿದೆ. ಆ ಬಗ್ಗೆ ಕಾಂಗ್ರೆಸ್‌ ಸರ್ಕಾರ ಯಾವುದೇ ಚರ್ಚೆ ನಡೆಸಿಲ್ಲ” ಎಂದು ಹೇಳಿದರು.

Advertisements

“ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿರುವ ಕ್ಯಾನ್ಸರ್ ಮತ್ತು ಟ್ರಾಮಾ ಕೇರ್ ಸೆಂಟರ್‌ಅನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು” ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X