ಬಳ್ಳಾರಿ | ನೋಟಿಸ್ ನೀಡದೆ ಮನೆ ತೆರವು; ಪ್ರತಿಭಟನೆ

Date:

Advertisements

ರಸ್ತೆ ಅಗಲೀಕರಣದ ಕಾರಣಕ್ಕೆ ಯಾವುದೇ ನೋಟಿಸ್ ನೀಡದೇ ಏಕಾಏಕಿ ಮನೆ ತೆರವಿಗೆ ಮುಂದಾದ ಲೋಕೋಪಯೋಗಿ ಇಲಾಖೆ ಕ್ರಮವನ್ನು ವಿರೋಧಿಸಿ ಬಳ್ಳಾರಿ ಜಿಲ್ಲೆ ಬಾದನಹಟ್ಟಿ ಗ್ರಾಮದಲ್ಲಿ ಪ್ರತಿಭಟನೆ ಮಾಡಲಾಯಿತು.

ಇಲಾಖೆಯು ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಪಾಲಿಸಬೇಕಾದ ಯಾವುದೇ ನಿಯಮಗಳನ್ನು ಪಾಲಿಸದಿರುವುದು ಸರ್ವಾಧಿಕಾರದ ಧೋರಣೆಯಾಗಿದೆ. ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿಯವರು ಇದನ್ನು ಕಂಡು ಕಾಣದಂತಿರುವ ಜಾಣ ಕುರುಡುತನ ಅನುಸರಿಸುತ್ತಿದ್ದಾರೆ ಎಂದು ಜನ ಖಂಡಿಸಿದರು.

ಗ್ರಾಮದ ಮಧ್ಯ ಭಾಗದಲ್ಲಿ ರಾಜ್ಯ ಹೆದ್ದಾರಿ ನಿರ್ಮಿಸುವುದರಿಂದ ಸಾಕಷ್ಟು ಅಪಘಾತಗಳು, ಅನಾಹುತಗಳು ಸಂಭವಿಸಬಹುದು. ಹಾಗಾಗಿ ಜನನಿಬಿಡ ಪ್ರದೇಶದಲ್ಲಿ ಹೆದ್ದಾರಿಗಳನ್ನು ನಿರ್ಮಿಸುವುದು ಸೂಕ್ತ ಎಂದರು. ಇದನ್ನು ಬಿಟ್ಟು ಜನರ ಜೀವನ ನಾಶ ಮಾಡಿ ರಸ್ತೆ ನಿರ್ಮಿಸಲು ಮುಂದಾದಲ್ಲಿ ತೀವ್ರ ಸ್ವರೂಪದ ಹೋರಾಟ ಕಟ್ಟುವುದು ನಿಚ್ಚಿತ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

Advertisements

ಇದನ್ನೂ ಓದಿ: ಬಳ್ಳಾರಿ | ಜು.12ರಂದು ರಾಷ್ಟ್ರೀಯ ‘ಲೋಕ ಅದಾಲತ್’

ಪ್ರತಿಭಟನೆಯಲ್ಲಿ ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷ ಗೋವಿಂದ್, ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ಎಐಡಿವೈಓ ಯುವಜನ ಸಂಘಟನೆ ಜಿಲ್ಲಾಧ್ಯಕ್ಷ ಕೊಳೂರು ಪಂಪಾಪತಿ, ಅಂಬರೀಶ, ಶೇಕಣ್ಣ, ಹನುಮಕ್ಕ, ದುರುಗಣ್ಣ, ಗೋವಿಂದ್, ಜಡೆಪ್ಪ ಹಾಗೂ ಇತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X