ವಿಕೃತ ಘಟನೆ | ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

Date:

Advertisements

ಬಾಲಕಿಯನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ದಲಿತ ಯುವಕನನ್ನು ಬಾಲಕಿಯ ಕುಟುಂಬಸ್ಥರು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆಗೈದು ವಿಕೃತಿ ಮರೆದಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಬಡೆ ರಾವೇಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂತ್ರಸ್ತ 21 ವರ್ಷದ ದಲಿತ ಯುವಕ ರಾಹುಲ್ ಅಂಚಲ್ ಮತ್ತು ಬಡೆ ರಾವೇಲಿ ಗ್ರಾಮದ ಒಬಿಸಿ ಸಮುದಾಯದ 16 ವರ್ಷದ ಬಾಲಕಿ ಪರಸ್ಪರ ಪರಿಚಿತರಾಗಿದ್ದರು. ಬಾಲಕಿಯನ್ನು ಭೇಟಿ ಮಾಡಲು ಬಡೆ ರಾವೇಲಿ ಗ್ರಾಮದಲ್ಲಿದ್ದ ಬಾಲಕಿಯ ಮನೆಗೆ ರಾಹುಲ್ ತೆರಳಿದ್ದರು. ಈ ವೇಳೆ, ಆತನ ಮೇಲೆ ಹಲ್ಲೆ ಎಸಗಿರುವ ಬಾಲಕಿಯ ಕುಟುಂಬಸ್ಥರು, ಆತನನ್ನು ಬೀದಿಗೆ ಎಳೆದು ತಂದು, ವಿವಸ್ತ್ರಗೊಳಿಸಿ ವಿಕೃತಿ ಮರೆದಿದ್ದಾರೆ.

Advertisements

“ಬಾಲಕಿಯ ಕುಟುಂಬವು ಯುವಕನನ್ನು ಹಿಡಿದು ಒಂದು ದಿನ ಒತ್ತೆಯಾಳಾಗಿ ಇಟ್ಟುಕೊಂಡಿತ್ತು. ರಾತ್ರಿಯಿಡೀ ಚಪ್ಪಲಿ, ವೈರ್ ಹಾಗೂ ಪೈಪ್‌ಗಳಿಂದ ಆತನನ್ನು ಥಳಿಸಿದೆ. ಮರುದಿನ ಬೀದಿಗೆ ಎಳೆದುಕೊಂಡು ಬಂದು, ಬೆತ್ತಲೆಗೊಳಿಸಿ ಹಲ್ಲೆ ಮಾಡಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ದಲಿತ ಯುವಕ ರಾಹುಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದಾಗ್ಯೂ, ಯುವಕ ಅಥವಾ ಆತನ ಕುಟುಂಬಸ್ಥರು ದೂರು ದಾಖಲಿಸಿಲ್ಲ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೋವನ್ನು ಆಧರಿಸಿ ಪೊಲೀಸರೇ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X