ಹುಬ್ಬಳ್ಳಿ | ಬಾಲಕಿಯ ಹತ್ಯೆ ಆರೋಪಿ ಎನ್‌ಕೌಂಟರ್; ಪೊಲೀಸ್ ಕಮಿಷನರ್ ಹೇಳಿದ್ದೇನು?

Date:

Advertisements

ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಆರೋಪಿಯು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಗಿದ್ದು, ಆರೋಪಿ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಹುಬ್ಬಳಿಯ ಅಶೋಕನಗರದಲ್ಲಿ ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಆರೋಪಿ‌ಕರೆದೊಯ್ದಿದ್ದ. ಆಕೆಯ ಮೇಲೆ ಅತ್ಯಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಎಂದು ಆರೋಪಿಸಲಾಗಿತ್ತು. ಬಾಲಕಿಯ ಮೃತದೇಹ ಪಾಳುಬಿದ್ದ ಶೌಚಾಲಯದಲ್ಲಿ ಪತ್ತೆಯಾಗಿತ್ತು.

ಆರೋಪಿಯ ಚಲನವಲನಗಳು ಸಿಸಿಟಿವಿ‌ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆರೋಪಿಯನ್ನು‌ ಬಿಹಾರ ಮೂಲದ ರಿತೇಶ್ ಕುಮಾರ್ ಎಂದು ಗುರುತಿಸಲಾಗಿತ್ತು.

Advertisements

ಬಾಲಕಿ ಹತ್ಯೆಯ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಯನ್ನು ಎನ್‌ಕೌಂಟರ್ ಮಾಡಬೇಕು ಎಂದು ಆಗ್ರಹಿಸಿ ಪೋಷಕರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಈ‌ ಬೆನ್ನಲ್ಲೇ, ಆರೋಪಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆಗೈದಿದ್ದಾರೆ.

ಆರೋಪಿಯನ್ನು ಬಂಧಿಸುವ ವೇಳೆ ಆತ ಪೊಲೀಸರ ಮೇಲೆ ದಾಳಿ ಮಾಡಿ, ಓಡಿ ಹೋಗಲು ಯತ್ನಿಸಿದ್ದ. ಆತ್ಮರಕ್ಷಣೆಗಾಗಿ ಪೊಲೀಸ್​ ಸಿಬ್ಬಂದಿ ಗುಂಡು ಹಾರಿಸಿದ್ದರು ಎಂದು ಹೇಳಲಾಗಿದೆ. ಆರೋಪಿ ಬೆನ್ನಿಗೆ ಗುಂಡು ತಗುಲಿತ್ತು. ಆತನನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆರೋಪಿ‌ ಮೃತಪಟ್ಟಿದ್ದಾನೆ..

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್, “ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಪತ್ತೆ ಮಾಡಲಾಗಿತ್ತು. ಆರೋಪಿ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿ ವಾಸವಿದ್ದನು. ಆತನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ದಾಳಿ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ, ಪಿಎಸ್​ಐ ಅನ್ನಪೂರ್ಣ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಆರೋಪಿ ಓಡಿ ಹೋಗಲು ಯತ್ನಿಸಿದ್ದು, ಆತನ ಮೇಲೆ ಫೈರಿಂಗ್ ಮಾಡಿದ್ದಾರೆ. ಆರೋಪಿಯ ಬೆನ್ನಿಗೆ ಗುಂಡು ತಗುಲಿತ್ತು. ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಮೃತಪಟ್ಟಿದ್ದಾನೆ. ಇಂತಹ ಗಂಭೀರ ಪ್ರಕರಣದಲ್ಲಿ ಆರೋಪಿಯನ್ನು ತಪ್ಪಿಸಿಕೊಳ್ಳಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಆದಾಗ್ಯೂ, ಪೋಷಕರು ಮತ್ತು ಸಾರ್ವಜನಿಕರ ಆಕ್ರೋಶವನ್ನು ಥಣಿಸಲು‌ ಆರೋಪಿಯನ್ನು ಎನ್‌ಕೌಂಟರ್ ಮಾಡಿರಬಹುದು ಎಂಬ ಅನುಮಾನಗಳೂ ಸಾರ್ವಜನಿಕ‌ ವಲಯದಲ್ಲಿ‌ ವ್ಯಕ್ತವಾಗಿವೆ. ಈ ಹಿಂದೆ, ಆಂಧ್ರಪದೇಶದ ಪಶು ವೈದ್ಯೆ ಕೊಲೆ ಪ್ರಕರಣದಲ್ಲಿಯೂ ನಾಲ್ವರು ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X