ಬಿಜೆಪಿಯವರಿಗೆ ಏನೇನು ಸಮಸ್ಯೆ ಇದೆಯೋ, ಏನೇನು ನೋವಿದ್ಯೋ: ಸಚಿವ ಚಲುವರಾಯಸ್ವಾಮಿ ವ್ಯಂಗ್ಯ

Date:

Advertisements

ಕಾಂಗ್ರೆಸ್‌ನಿಂದ ಬಂದವರಿಂದ ಬಿಜೆಪಿಯೊಳಗಿನ ಶಿಸ್ತು ಹೋಗಿದೆ ಎನ್ನುವುದನ್ನು ಅಲ್ಲಿಗೆ ಕರೆದುಕೊಂಡು ಹೋದ ನಾಯಕರೇ ಹೇಳಬೇಕು ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕಾಂಗ್ರೆಸ್‌ನಿಂದ ಶಾಸಕರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದರು. ಆದರೆ, ಒಳ್ಳೆಯ ಆಡಳಿತ ಕೊಡುವಲ್ಲಿ ವಿಫಲವಾಗಿದ್ದರಿಂದ ಜನರು ಈಗ ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ಕೊಟ್ಟು ಸ್ಥಿರ ಸರ್ಕಾರ ರಚನೆಗೆ ಅವಕಾಶ ಕೊಟ್ಟರು” ಎಂದರು.

“ಬಿಜೆಪಿಯಲ್ಲಿನ ಬಾಂಬೆ ಟೀಂ ಮೇಲೆ ಈಶ್ವರಪ್ಪ ಕಿಡಿ ಕಾರಿರುವುದನ್ನು ನೋಡಿದೆ. ಅವರ ಪಕ್ಷದಲ್ಲಿ ಆಂತರಿಕ ಜಗಳ ಆಡಬೇಡಿ ಎಂದು ಹೇಳೋಕೆ ನಾವ್ಯಾರು? ಅದು ಆಗುತ್ತಾ? ಅವರಿಗೆ ಏನೇನು ಸಮಸ್ಯೆ ಇದ್ಯೋ? ಏನೇನೂ ನೋವಿದ್ಯೋ? ಎಂದು ವ್ಯಂಗ್ಯವಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಜೋಶಿ, ಸಂತೋಷರನ್ನು ಹೊಣೆ ಮಾಡುವ ಧೈರ್ಯ ಬಿಜೆಪಿಗರಿಗಿಲ್ಲ ಏಕೆ: ಕಾಂಗ್ರೆಸ್‌ ಪ್ರಶ್ನೆ

“ಕಾಂಗ್ರೆಸ್‌ನ ಗ್ಯಾರಂಟಿಗಳಿಂದಾಗಿ ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಜನರಿಗೆ ಕಾಂಗ್ರೆಸ್ ಒಳ್ಳೆಯ ಕಾರ್ಯಕ್ರಮಗಳನ್ನು ಕೊಡುವುದು ಬಿಜೆಪಿಗೆ ಇಷ್ಟವಿಲ್ಲ. ಇದರಿಂದಾಗಿಯೇ ಹಣ ಕೊಟ್ಟರೂ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ” ಕೇಂದ್ರದ ವಿರುದ್ಧ ಅಸಮಾಧಾನದ ವ್ಯಕ್ತಪಡಿಸಿದರು.

ಲೋಕಸಭೆಗೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ನವರು ಮೈತ್ರಿ ಮಾಡಿಕೊಳ್ಳುತ್ತಾರೋ? ಪರೋಕ್ಷವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೋ ಅಥವಾ ಪೂರ್ಣ ವಿಲೀನ ಮಾಡಿಕೊಳ್ಳುತ್ತಾರೋ? ಅದು ಆ ಪಕ್ಷಗಳಿಗೆ ಬಿಟ್ಟಿದ್ದು. ಈಗ ಜನರು ನಮಗೆ ಜವಾಬ್ದಾರಿ ಕೊಟ್ಟಿದ್ದಾರೆ. ಅದರಂತೆ ಕೆಲಸ ಮಾಡುತ್ತಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X