ಚಾಮರಾಜನಗರ | ರಾಜರು ಕೊಟ್ಟಿರುವ ಭೂಮಿಯನ್ನು ಕಿತ್ತುಕೊಳ್ಳಲ್ಲ: ಪ್ರಮೋದಾದೇವಿ ಒಡೆಯರ್

Date:

Advertisements

ಚಾಮರಾಜನಗರ ಜಿಲ್ಲೆಯಲ್ಲಿ ರಾಜರು ದಾನವಾಗಿ ಕೊಟ್ಟಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಜನರಿಂದ ಕಿತ್ತುಕೊಳ್ಳುವುದಿಲ್ಲ. ಈ ಬಗ್ಗೆ ಆತಂಕ ಬೇಡ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದರು.

ಜಿಲ್ಲೆಯಲ್ಲಿ ಮೈಸೂರು ರಾಜಮನೆತರದ ಹೆಸರಿನಲ್ಲಿರುವ 5 ಸಾವಿರ ಎಕರೆ ಖಾಸಗಿ ಸ್ವತ್ತಿಗೆ ಖಾತೆ ಮಾಡಿಸಿಕೊಳ್ಳುವ ವಿಚಾರವಾಗಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಂದಾಯ ಗ್ರಾಮಗಳನ್ನು ಮಾಡುವುದಾಗಿ ಚಾಮರಾಜನಗರ ಜಿಲ್ಲಾಡಳಿತ ಹೇಳಿದೆ. ಅದರಲ್ಲಿ ನಮಗೆ ಸೇರಿದ ಜಾಗವೂ ಇದೆ. ಹಾಗಾಗಿ ನಮ್ಮಲ್ಲಿರುವ ದಾಖಲೆಗಳ ಆಧಾರದ ಮೇಲೆಯೇ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕಂದಾಯ ಗ್ರಾಮ ಮಾಡುವ ಬಗ್ಗೆ ನಮಗೂ ಮಾಹಿತಿ ನೀಡಿದ್ದರೆ ಇಷ್ಟು ಗೊಂದಲ ಸೃಷ್ಟಿಯಾಗುತ್ತಿರಲಿಲ್ಲ” ಎಂದರು.

“ಮಹಾರಾಜರು ದಾನವಾಗಿ ಕೊಟ್ಟಿರುವ ಭೂಮಿ ಕೊಟ್ಟಿದ್ದರೆ ಆ ಬಗ್ಗೆ ಯಾವುದೇ ತಕರಾರಿಲ್ಲ. ಈ ಬಗ್ಗೆ ಯಾವುದೇ ಪ್ರಶ್ನೆಗಳಿದ್ದರೂ ಆ ಭಾಗದ ಗ್ರಾಮಸ್ಥರು ನಮ್ಮನ್ನು ನೇರವಾಗಿ ಭೇಟಿಯಾಗಬಹುದು. ಒಂದು ವೇಳೆ ಅದು ನಮ್ಮ ಜಾಗವೇ ಆಗಿದ್ದರೂ ಸಂಬಂಧಿಸಿದವರಿಗೆ ಉಳುಮೆ ಮಾಡಲು ಜಮೀನು ಕೊಡಲಾಗುತ್ತದೆ. ಜಮೀನು ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ. ಗ್ರಾಮಸ್ಥರಿಗೆ ಯಾವುದೇ ರೀತಿ ತೊಂದರೆ ಕೊಡುವುದಿಲ್ಲ” ಎಂದು ಪುನರುಚ್ಚರಿಸಿದರು.

Advertisements

ಇದನ್ನೂ ಓದಿ: ಚಾಮರಾಜನಗರ | ಏ. 24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X