ಉತ್ತರ ಪ್ರದೇಶ | ಹಿಜಾಬ್ ಎಳೆದು ಬಿಚ್ಚಿ, ಮುಸ್ಲಿಂ ಯುವತಿ, ಹಿಂದೂ ಯುವಕನಿಗೆ ಥಳಿಸಿದ ಗುಂಪು

Date:

Advertisements

ಹಿಂದೂ ಯುವಕ ಮತ್ತು ಮುಸ್ಲಿಂ ಯುವತಿ ಜೊತೆಗಿರುವುದನ್ನು ನೋಡಿ ಗುಂಪೊಂದು ಯುವತಿಯ ಹಿಜಾಬ್ ಎಳೆದು ಬಿಚ್ಚಿ, ಇಬ್ಬರಿಗೂ ಥಳಿಸಿದ ಘಟನೆ ಉತ್ತರ ಪ್ರದೇಶದ ಮುಜಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ಅನೈತಿಕ ಪೊಲೀಸ್‌ಗಿರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಯುವತಿಯ ತಾಯಿ ಮತ್ತು ಹಲ್ಲೆಗೊಳಗಾದ ಯುವಕ ಸಚಿನ್ ಇಬ್ಬರೂ ಖಾಸಗಿ ಬ್ಯಾಂಕ್‌ನಲ್ಲಿ ಕಲೆಕ್ಷನ್ ಏಜೆಂಟರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಜನರಿಂದ ಸಾಲದ ಕಂತು ಸಂಗ್ರಹಿಸಲು ಜೊತೆಯಾಗಿ ಹೋಗುತ್ತಿದ್ದರು. ಸಾಲ ವಸೂಲಿಗೆ ತನ್ನ ಸಹೋದ್ಯೋಗಿಯೊಂದಿಗೆ ತನ್ನ ಮಗಳನ್ನು ತಾಯಿ ಕಳುಹಿಸಿದ್ದರು. ಈ ವೇಳೆ ಗುಂಪು ಹಲ್ಲೆ ಮಾಡಿದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಅನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದೂ ಯುವಕರ ಗುಂಪು

Advertisements

ಇಬ್ಬರೂ ಕಂತಿನ ಮೊತ್ತ ಸಂಗ್ರಹಿಸಿದ ಬಳಿಕ ಮೋಟಾರ್‌ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಮುಸ್ಲಿಂ ಪ್ರಾಬಲ್ಯದ ಖಲಾಪರ್ ಪ್ರದೇಶದ ದಾರ್ಜಿ ಗಾಲಿಯಲ್ಲಿ ಗುಂಪೊಂದು ಅವರನ್ನು ತಡೆದಿದೆ. ಯುವಕ ಹಿಂದೂ ಎಂದು ಖಚಿತವಾದ ಬಳಿಕ ಯುವತಿಯ ‘ಹಿಜಾಬ್’ ಎಳೆದು ಬಿಚ್ಚಿ, ಆಕೆಗೆ ಕಪಾಳಕ್ಕೆ ಬಾರಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು ಕೂಡಾ ಗುಂಪು ಮಾಡಿಕೊಂಡಿದೆ.

ಮಾಹಿತಿ ಪಡೆದ ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರನ್ನು ರಕ್ಷಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದ್ದು, ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವಿಡಿಯೋದಿಂದ ಆರೋಪಿಗಳನ್ನು ಗುರುತಿಸಲಾಗಿದೆ.

ಈ ಘಟನೆ ಶನಿವಾರ ನಡೆದಿದ್ದರೂ, ಒಂದು ದಿನದ ನಂತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇದಾದ ಬಳಿಕ ಪೊಲೀಸರು ಕ್ರಮಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕರಾವಳಿಯಲ್ಲಿ ನಿಲ್ಲದ ಅನೈತಿಕ ಪೊಲೀಸ್‌ಗಿರಿ; ಪೊಲೀಸ್‌ ಬಳಿಕ ಪತ್ರಕರ್ತನಿಗೆ ನಿಂದನೆ, ಬೆದರಿಕೆ

ಕೆಲವು ತಿಂಗಳ ಹಿಂದೆ, ಉತ್ತರ ಪ್ರದೇಶದ ಸಹರಾನ್‌ಪುರ ಪಟ್ಟಣದಲ್ಲಿ ಇಬ್ಬರು ಮುಸ್ಲಿಂ ಹುಡುಗಿಯರನ್ನು ಹಿಂದೂ ಯುವಕರೊಂದಿಗೆ ಸುತ್ತಾರುತ್ತಿದ್ದಾರೆ ಎಂದು ಅನುಮಾನದಿಂದ ಗುಂಪೊಂದು ಹಲ್ಲೆ ನಡೆಸಿತ್ತು. ಯುವಕರೂ ಮುಸ್ಲಿಮರಾಗಿದ್ದರಿಂದ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿ ಬಿಟ್ಟಿತ್ತು. ಇಂತಹ ಹಲವು ಅನೈತಿಕ ಪೊಲೀಸ್‌ಗಿರಿ ಪ್ರಕರಣಗಳು ದೇಶದಲ್ಲಿ ವರದಿಯಾಗುತ್ತಿದೆ.

ಹಿಂದೂ ಯುವತಿ, ಮುಸ್ಲಿಂ ಯುವಕರು ಜೊತೆಗಿದ್ದ ಕಾರಣ ಅವರ ಮೇಲೆ ಹಲ್ಲೆ ನಡೆಸಿರುವ ಹಲವು ಘಟನೆಗಳೂ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಸ್ಲಿಂ ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು ದೇಶದಲ್ಲಿ ಹೆಚ್ಚಾಗುತ್ತಿದೆ. ಮುಸ್ಲಿಮರ ಮೇಲೆ ದಾಳಿ ಹೆಚ್ಚಾಗುತ್ತಿದ್ದಂತೆ ಪ್ರತಿದಾಳಿಯೂ ನಡೆದು ಕೋಮುಗಲಭೆಗೆ ದೇಶ ಸಾಕ್ಷಿಯಾಗಿದೆ. ಹೋಳಿ ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಮುಸ್ಲಿಂ ಬಾಲಕನಿಗೆ ಥಳಿಸಿ ಕೊಂದಿರುವ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೋಮು ದ್ವೇಷ ಬಿತ್ತುವ ರಾಜಕಾರಣಿಗಳೇ ಇದಕ್ಕೆಲ್ಲಾ ನೇರ ಕಾರಣ ಎಂದರೆ ತಪ್ಪಾಗಲಾಗದು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X