ಎಸ್‌ಸಿ ಒಳಮೀಸಲಾತಿ ಜಾರಿಗೊಳಿಸಿದ ತೆಲಂಗಾಣ ಸರ್ಕಾರ

Date:

Advertisements

ತೆಲಂಗಾಣ ಕಾಂಗ್ರೆಸ್ ಸರ್ಕಾರ ಸೋಮವಾರ ಪರಿಶಿಷ್ಟ ಜಾತಿ (ಎಸ್‌ಸಿ) ಒಳಮೀಸಲಾತಿ ಜಾರಿಗೊಳಿಸಿದೆ. ಒಳಮೀಸಲಾತಿಯನ್ನು ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಇದಾಗಿದೆ. “ತೆಲಂಗಾಣವು ಎಸ್‌ಸಿ ಒಳಮೀಸಲಾತಿಯನ್ನು ಜಾರಿಗೊಳಿಸಿದ ಮೊದಲ ರಾಜ್ಯ ಎನಿಸಿಕೊಂಡಿದೆ” ಎಂದು ನೀರಾವರಿ ಸಚಿವ ಎನ್‌ ಉತ್ತಮ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ತೆಲಂಗಾಣ ಸರ್ಕಾರವು ಒಳಮೀಸಲಾತಿ ಜಾರಿ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಲ್ತರ್‌ ಅವರ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ತೆಲಂಗಾಣದಲ್ಲಿ ಎಸ್‌ಸಿ ಪಟ್ಟಿಯಲ್ಲಿ ಒಟ್ಟು 59 ಉಪಜಾತಿಗಳಿದೆ. ಜನಸಂಖ್ಯೆ, ಹಿಂದುಳಿದುರುವ ಆಧಾರದಲ್ಲಿ ಮೂರು ಗುಂಪುಗಳಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡುವಂತೆ ಸಮಿತಿ ಶಿಫಾರಸು ನೀಡಿತ್ತು.

ಇದನ್ನು ಓದಿದ್ದೀರಾ? ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದಿದ್ದರೆ ಮೀಸಲಾತಿಯ ಉದ್ದೇಶವೇ ವಿಫಲ: ಸಿದ್ದರಾಮಯ್ಯ

Advertisements

ಅದರಂತೆ ತೆಲಂಗಾಣದಲ್ಲಿ ಎಸ್‌ಸಿಯಲ್ಲಿ ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಒಟ್ಟು ಶೇಕಡ 15ರಷ್ಟು ಮೀಸಲಾತಿಯ ಪೈಕಿ ಮೊದಲ ವಿಭಾಗಕ್ಕೆ ಶೇಕಡ 1ರಷ್ಟು, ಎರಡನೇ ವಿಭಾಗಕ್ಕೆ ಶೇಕಡ 9ರಷ್ಟು, ಮೂರನೇ ವಿಭಾಗಕ್ಕೆ ಶೇಕಡ 5ರಷ್ಟು ಮೀಸಲಾತಿ ಲಭಿಸಲಿದೆ. ಮೊದಲ ವಿಭಾಗದಲ್ಲಿ 15, ಎರಡನೇ ವಿಭಾಗದಲ್ಲಿ 18 ಮತ್ತು ಮೂರನೇ ವಿಭಾಗದಲ್ಲಿ 26 ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ಜಾತಿಗಳನ್ನು ವರ್ಗೀಕರಿಸಲಾಗಿದೆ.

ತೆಲಂಗಾಣ ಪರಿಶಿಷ್ಟ ಜಾತಿಗಳ (ಮೀಸಲಾತಿ ತರ್ಕಬದ್ಧಗೊಳಿಸುವಿಕೆ) ಕಾಯ್ದೆ- 2025ಕ್ಕೆ ರಾಜ್ಯಪಾಲರು ಏಪ್ರಿಲ್ 8ರಂದು ಸಹಿತ ಹಾಕಿದ್ದಾರೆ. ಏಪ್ರಿಲ್ 14ರಂದು ಗೆಜೆಟ್‌ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ, “ತೆಲಂಗಾಣವು ಎಸ್‌ಸಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಕ್ರಾಂತಿಕಾರಿ ನಿರ್ಧಾರವನ್ನು ತೆಗೆದುಕೊಂಡ ಮೊದಲ ರಾಜ್ಯವಾಗಿದೆ. ಈ ಇತಿಹಾಸ ಸೃಷ್ಟಿಯ ಭಾಗವಾಗಿರುವುದಕ್ಕೆ ನಮಗೆ ಹೆಮ್ಮೆಯಿದೆ. ಬಾಬಾಸಾಹೇಬ್ ಡಾ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಪವಿತ್ರ ದಿನವೇ ನಾವು ಒಳಮೀಸಲಾತಿ ಜಾರಿ ಮಾಡಿದ್ದೇವೆ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X