ಗುಬ್ಬಿ | ಉತ್ಪಾದನಾ ವೆಚ್ಚ ಅನುಸಾರ ರೈತರ ಬೆಳೆಗೆ ಬೆಲೆ ನಿಗದಿ ಮಾಡಿ : ರೈತಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಆಗ್ರಹ

Date:

Advertisements

ರೈತರು ಬೆಳೆದ ಬೆಳೆಯನ್ನು ರೋಡಿಗೆ ತಂದು ಬಿಸಾಡುವ ದೃಶ್ಯ ಎಲ್ಲರೂ ಕಂಡಿದ್ದಾರೆ. ಲಕ್ಷಾಂತರ ರೂ ಸಾಲ ಮಾಡಿಕೊಂಡು ನಿರಾಸೆ ಅನುಭವಿಸುತ್ತಾನೆ. ಈ ಬಗ್ಗೆ ವೈಜ್ಞಾನಿಕ ಸಮೀಕ್ಷೆ ನಡೆಸಿ ರೈತರ ಉತ್ಪಾದನಾ ವೆಚ್ಚ ತಿಳಿದು ಬೆಳೆಗೆ ಬೆಲೆ ನಿಗದಿ ಮಾಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಆಗ್ರಹಿಸಿದರು.

ತಾಲ್ಲೂಕಿನ ಕಡಬ ಹೋಬಳಿ ಕೋಣೆಮಾದೇನಹಳ್ಳಿ ಗ್ರಾಮದಲ್ಲಿ ರೈತಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದ ಅವರು ಕುಡಿಯುವ ನೀರಿಗೂ ಹಾಲಿಗೂ ಒಂದೇ ಬೆಲೆ ಮಾರುಕಟ್ಟೆಯಲ್ಲಿ ಸಾಕ್ಷಿಯಾಗಿ ನಮ್ಮ ಮುಂದಿದೆ. ಒಂದು ಲೀಟರ್ ನೀರಿನ ಬಾಟಲ್ ಶೋ ಕೇಸ್ ನಲ್ಲಿ ಇದ್ದರೆ, ಹಾಲು ಪ್ಯಾಕೆಟ್ ನಲ್ಲಿದೆ. ಆದರೆ ಹಾಲು ಸಿದ್ಧವಾಗಲು ಆಗುವ ವೆಚ್ಚ ಗಮನಿಸಿದರೆ ಒಂದು ಲೀಟರ್ ಹಾಲು 80 ರೂಗಿಂತ ಹೆಚ್ಚಿರಬೇಕು ಎಂದು ಉದಾಹರಣೆ ನೀಡಿದರು.

1001302490

ದಿನದ 16 ಗಂಟೆ ದುಡಿಯುವ ಏಕೈಕ ವರ್ಗ ರೈತರು. ಆದರೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದೆ ಆತ್ಮಹತ್ಯೆಗೆ ಶರಣಾಗುವವರ ಸಂಖ್ಯೆ ಸಹ ರೈತರದ್ದೇ ಆಗಿದೆ. ಪ್ರತಿ ಗಂಟೆಗೆ 24 ಮಂದಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಕಳೆದ ಹತ್ತು ವರ್ಷದಲ್ಲಿ 3.50 ಲಕ್ಷ ಮಂದಿ ರೈತರನ್ನು ಈಗಾಗಲೇ ಕಳೆದುಕೊಂಡಿದ್ದೇವೆ. ದಿನದ 8 ಗಂಟೆ ದುಡಿಯುವ ಕಾರ್ಮಿಕ ನೆಮ್ಮದಿ ಕಾಣುತ್ತಾನೆ. ರೈತರಿಗೆ ಯಾಕೆ ನೆಮ್ಮದಿ ಸಿಕ್ಕಿಲ್ಲ ಎಂಬುದು ಸಮೀಕ್ಷೆ ನಡೆಸಿ ಸರ್ಕಾರ ರೈತ ಪರ ನಿಲ್ಲಬೇಕಿದೆ. ನೀರು, ಗೊಬ್ಬರ, ಕರೆಂಟ್ ನೀಡಿದರೆ ಸ್ವಾಭಿಮಾನಿ ಬದುಕು ನಡೆಸುತ್ತಾನೆ. ಈ ನಿಟ್ಟಿನಲ್ಲಿ ನಮ್ಮ ಹಕ್ಕು ಪಡೆಯಲು ರೈತ ಸಂಘ ಹಳ್ಳಿಗಳಲ್ಲಿ ಬಲವರ್ಧನೆಗೊಳ್ಳಬೇಕು ಎಂದರು.

Advertisements

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ರೈತರಲ್ಲಿ ಅಸಂಘಟಿತ ವಾತಾವರಣ ಹೆಚ್ಚಾಗಿದೆ. ಕೃಷಿಗೆ ಪ್ರಾಮುಖ್ಯತೆ ನೀಡದ ಸರ್ಕಾರದ ವಿರುದ್ಧ ಹೋರಾಟ ಮೂಲಕವೇ ನಮ್ಮ ಕೆಲಸ ಸಾಧಿಸಬೇಕಿದೆ. ಪ್ರತಿ ಗ್ರಾಮದಲ್ಲಿ ರೈತ ಸಂಘ ಘಟಕ ಕೆಲಸ ಮಾಡಿದರೆ ನಮ್ಮ ಹೋರಾಟಕ್ಕೆ ಬಲ ಸಿಗಲಿದೆ. ಸರ್ಕಾರದ ಗಮನ ಸೆಳೆಯಲು ಸಂಘಟಿತ ಶಕ್ತಿ ಪ್ರದರ್ಶನ ಮಾಡಬೇಕಿದೆ. ಈ ನಿಟ್ಟಿನಲ್ಲಿ ರೈತರು ಒಗ್ಗೂಡಿ ಸಂಘದ ಮೂಲಕ ತಮ್ಮ ಹಕ್ಕು ಪ್ರತಿಪಾದಿಸಿ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ 50 ಮಂದಿ ರೈತರ ಸಂಘಕ್ಕೆ ಚಾಲನೆ ನೀಡಲಾಯಿತು.

ವೇದಿಕೆಯಲ್ಲಿ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಮಂಜುನಾಥ್, ಚನ್ನಬಸವಣ್ಣ, ಜಗದೀಶಯ್ಯ, ಗಂಗಣ್ಣ, ಪ್ರಕಾಶ್, ಬಸವರಾಜು, ಮಹದೇವಣ್ಣ, ಯತೀಶ್, ಕನ್ನಿಗಪ್ಪ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X