ಅಂತರ್‌ ಧರ್ಮೀಯ ವಿವಾಹವಾಗಿದ್ದ ಯುವತಿ ಶವ ಪತ್ತೆ; ಮರ್ಯಾದೆಗೇಡು ಹತ್ಯೆ ಶಂಕೆ

Date:

Advertisements

ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿದ್ದರಿಂದ ತಮ್ಮ ಪ್ರೀತಿಯನ್ನು ಪೋಷಕರು ವಿರೋಧಿಸಿದ್ದ ಕಾರಣ, ಊರು ತೊರೆದುಬಂದು ವಿವಾಹವಾಗಿದ್ದ ಯುವತಿಯೊಬ್ಬರ ಮೃತದೇಹ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಪತ್ತೆಯಾಗಿದೆ. ತಮ್ಮ ವಿರೋಧದ ನಡುವೆಯೂ ವಿವಾಹವಾಗಿದ್ದ ಕಾರಣಕ್ಕಾಗಿ ಆಕೆಯನ್ನು ಆಕೆಯ ಪೋಷಕರೇ ಹತ್ಯೆ (‘ಮರ್ಯಾದೆಗೇಡು ಹತ್ಯೆ’) ಮಾಡಿರಬಹುದು ಎಂದು ಶಂಕಿಸಲಾಗಿದೆ.

ಚಿತ್ತೂರು ಜಿಲ್ಲೆಯ ಯಾಸ್ಮಿನ್ ಬಾನು ಎಂಬ ಯುವತಿ ಕಳೆದ ಕಳೆದ ನಾಲ್ಕು ವರ್ಷಗಳಿಂದ ಹಿಂದು ಯುವಕ ಸಾಯಿ ತೇಜ ಎಂಬಾತನನ್ನು ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಬಾನು ಅವರ ಕುಟುಂಬದಿಂದ ವಿರೋಧವಿತ್ತು. ಹೀಗಾಗಿ, ಅವರು ಇದೇ ವರ್ಷದ ಫೆಬ್ರವರಿಯಲ್ಲಿ ಮನೆ ತೊರೆದು ಬಂದು ಯುವಕನೊಂದಿಗೆ ವಿವಾಹವಾಗಿದ್ದರು. ಪ್ರತ್ಯೇಕವಾಗಿ ಜೀವನ ಕಟ್ಟಿಕೊಂಡು ವಾಸಿಸುತ್ತಿದ್ದರು.

ಮದುವೆಯ ಬಳಿಕ ತಮ್ಮ ಸುರಕ್ಷತೆಗೆ ಪೋಷಕರಿಂದ ಬೆದರಿಕೆ ಇದೆಯೆಂದು ಪೊಲೀಸ್‌ ರಕ್ಷಣೆಯನ್ನೂ ಕೋರಿದ್ದರು. ಆದಾಗ್ಯೂ, ಇದೀಗ ಆಕೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಆಕೆಯನ್ನು ಅವರ ಪೋಷಕರೇ ಹತ್ಯೆಗೈದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

Advertisements

ಬಾನು ಅವರ ಪತಿ ತೇಜ ಹೇಳುವಂತೆ; “ತಮ್ಮ ಮದುವೆಯಾದಾಗಿನಿಂದ ಬಾನು ಅವರ ಅಣ್ಣ ಮತ್ತು ತಂಗಿ ಪದೇ ಪದೇ ಕರೆ ಮಾಡುತ್ತಿದ್ದರು. ಬಾನು ಸಾವಿಗೂ ಮೂರು ದಿನಗಳ ಮುನ್ನ ತಮಗೆ ಬಾನು ಅವರ ಕುಟುಂಬಸ್ಥರು ಕರೆಮಾಡಿದ್ದರು. ಬಾನು ಅವರ ತಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಮನೆಗೆ ಬಂದು ಭೇಟಿಯಾಗುವಂತೆ ಒತ್ತಾಯಿಸಿದ್ದರು” ಎಂದು ವಿವರಿಸಿದ್ದಾರೆ.

“ತಂದೆಯನ್ನು ಭೇಟಿ ಮಾಡಲು ಬಾನು ತನ್ನ ಪೋಷಕರ ಮನೆಗೆ ಹೋಗಿದ್ದರು. ಆಕೆ ತೆರಳಿದ ಕೆಲವೇ ಗಂಟೆಗಳಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಕರೆ ಬಂದಿತು. ಆ ನಂತರ, ಬಾನು ಸಾವನ್ನಪ್ಪಿದ್ದಾರೆಂದು ಅವರ ಕುಟುಂಬದವರು ತಿಳಿಸಿದರು” ಎಂದು ತೇಜ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ವಕ್ಫ್‌ ತಿದ್ದುಪಡಿ ಕಾಯ್ದೆ | ಮೂಗಿಗೆ ತುಪ್ಪ ಹಚ್ಚಲು ಮನೆ ಬಾಗಿಲಿಗೆ ಬರುತ್ತಿದೆ ಬಿಜೆಪಿ!

ಬಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಪೋಷಕರು ಹೇಳುತ್ತಿದ್ದಾರೆ. ಆದರೆ, ಇದು ಕೊಲೆ ಎಂದು ತೇಜ ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿರುವ ತೇಜ, “ಬಾನು ಅವರನ್ನು ಆಕೆಯ ಕುಟುಂಬದವರು ಕೊಲೆ ಮಾಡಿದ್ದಾರೆ. ಆತ್ಮಹತ್ಯೆಯೆಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆಕೆಯನ್ನು ಪೋಷಕರ ಮನೆಗೆ ಕರೆದುಕೊಂಡ ಹೋಗಿದ್ದ ಸಂಬಂಧಿಕರು ಪರಾರಿಯಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಬಾನು ಅವರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X