1ನೇ ತರಗತಿ ಸೇರ್ಪಡೆಗೆ 5 ವರ್ಷ 5 ತಿಂಗಳು, ವಯೋಮಿತಿ ಸಡಿಲ: ಶಿಕ್ಷಣ ಸಚಿವ ಘೋಷಣೆ

Date:

Advertisements

ಕರ್ನಾಟಕದಲ್ಲಿ 1ನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೂ ಅವರು ಶಾಲೆಗೆ ದಾಖಲಾಗಲು ಅವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.

ಈ ಹಿಂದೆ, ಮಕ್ಕಳು 1ನೇ ತರಗತಿಗೆ ದಾಖಲಾಗಲು ಕಡ್ಡಾಯವಾಗಿ 6 ವರ್ಷದ ವಯೋಮಿತಿಯನ್ನು ಪೂರೈಸಿರಬೇಕಿತ್ತು. ಆದರೆ, ಇದೀಗ, ವಯೋಮಿತಿಯ ಮಾನದಂಡವನ್ನು ಸಡಿಲಿಸಲಾಗಿದೆ. 5 ವರ್ಷ 5 ತಿಂಗಳು ವಯೋಮಾನವನ್ನು ಪೂರೈಸಿದ್ದ ಮಕ್ಕಳು 1ನೇ ತರಗತಿಗೆ ದಾಖಲಾಗಬಹುದಾಗಿದೆ. ಆದಾಗ್ಯೂ, ಸಂಪೂರ್ಣ ಆರು ವರ್ಷ ಪೂರೈಸಿರದ ಮಕ್ಕಳು 1ನೇ ತರಗತಿಗೆ ದಾಖಲಾಗಲು ಅವರು ಯುಕೆಜಿ ಕಲಿತಿರಬೇಕು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

“ಎಲ್​ಕೆಜಿ, ಯುಕೆಜಿಯಲ್ಲಿ ಕಲಿತಿದ್ದರೆ ಮಾತ್ರವೇ 5 ವರ್ಷ 5 ತಿಂಗಳು ಆಸುಪಾಸಿನ ಮಕ್ಕಳಿಗೆ 1ನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. ಪೋಷಕರ ಒತ್ತಾಯದ ಮೇರೆಗೆ ಈ ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ವಯೋಮಿತಿ ಸಡಿಲಿಕೆಯು ಈ ವರ್ಷಕ್ಕೆ ಮಾತ್ರವೇ ಅನ್ವಯವಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

Advertisements

ಈ ಹಿಂದೆ, 2022ರಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳು ಕಡ್ಡಾಯವಾಗಿ 6 ವರ್ಷ ಪೂರೈಸಿರಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ ಆದೇಶಿಸಿತ್ತು. ಈ ಆದೇಶವು 2023–24ನೇ ಸಾಲಿನಲ್ಲಿಯೇ ಜಾರಿಗೆ ಬರಬೇಕಿತ್ತು. ಆದರೆ, ಪೋಷಕರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾಗಿದ್ದರಿಂದ ನಿಯಮ ಜಾರಿಗೆ ಬಂದಿರಲಿಲ್ಲ. ಇದೀಗ, ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ (2025-26) 2022ರ ಆದೇಶವು ಜಾರಿಗೆ ಬರಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

Download Eedina App Android / iOS

X