ಹೈದರಾಬಾದ್ ವಿವಿ ಮರಗಳ ಕಡಿತ ಪ್ರಕರಣ: ಮುಂದಿನ ವಿಚಾರಣೆವರೆಗೆ ಮರ ಕಡಿಯದಂತೆ ಸುಪ್ರೀಂ ಆದೇಶ

Date:

Advertisements

ಹೈದರಾಬಾದ್ ವಿವಿ ಸಮೀಪದ ಕಂಚ ಗಚ್ಚಿಬೌಲಿಯಲ್ಲಿಯ 100 ಎಕರೆ ಪ್ರದೇಶದಲ್ಲಿ ಅರಣ್ಯ ನಾಶದಿಂದ ಬಾಧಿತ ವನ್ಯಜೀವಿಗಳ ರಕ್ಷಣೆಗಾಗಿ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಬುಧವಾರ ತೆಲಂಗಾಣದ ವನ್ಯಜೀವಿ ಮುಖ್ಯಸ್ಥರಿಗೆ ಆದೇಶಿಸಿದೆ.

ಮುಂದಿನ ವಿಚಾರಣಾ ದಿನಾಂಕವಾದ ಮೇ 15ರವರೆಗೆ ಒಂದೇ ಒಂದು ಮರವನ್ನು ಕಡಿಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ವಿಚಾರಣೆಯ ಸಂದರ್ಭದಲ್ಲಿ, ಮರಗಳನ್ನು ಕಡಿಯಲು ತೆಲಂಗಾಣ ಸರಕಾರದ ‘ಆತುರ’ವನ್ನು ಪ್ರಶ್ನಿಸಿದ ಕೋರ್ಟ್, ಪ್ರಾಣಿಗಳು ಆಶ್ರಯಕ್ಕಾಗಿ ಓಡುತ್ತಿರುವುದನ್ನು ತೋರಿಸಿರುವ ವಿಡಿಯೋಗಳ ಕುರಿತು ಎಚ್ಚರಿಕೆಯ ಗಂಟೆಯನ್ನು ಮೊಳಗಿಸಿತು. ಪರಿಸರಕ್ಕೆ ಮಾಡಲಾಗಿರುವ ಹಾನಿಯ ಬಗ್ಗೆಯೂ ಅದು ಕಳವಳವನ್ನು ವ್ಯಕ್ತಪಡಿಸಿತು.

ಈ ಸುದ್ದಿ ಓದಿದ್ದೀರಾ? IPL 2025: ಬ್ಯಾಟರ್‌ಗಳು ಅಳತೆ ಮೀರಿದ ಬ್ಯಾಟ್ ಬಳಸುತ್ತಿದ್ದಾರೆಯೇ? ಅಂಪೈರ್‌ಗಳು ಪರಿಶೀಲಿಸುವುದೇಕೆ?

Advertisements

“ಮುಂಬೈನ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನದಂತೆ ನಗರದಲ್ಲಿ ಹಸಿರು ಶ್ವಾಸಕೋಶಗಳು ಇರಲಿ. ಪರಿಸರ ಮತ್ತು ಪರಿಸರ ವಿಜ್ಞಾನದ ರಕ್ಷಣೆಗಾಗಿ ನಾವು ಎಲ್ಲವನ್ನೂ ಮಾಡುತ್ತೇವೆ. ಕಾಡು ಪ್ರಾಣಿಗಳನ್ನು ಹೇಗೆ ರಕ್ಷಿಸಬೇಕು ಎಂಬುದನ್ನು ರಾಜ್ಯವು ತಕ್ಷಣವೇ ಗಮನವಹಿಸಬೇಕು. ರಾಜ್ಯ ವನ್ಯಜೀವಿ ಮುಖ್ಯಸ್ಥರು ಇದನ್ನು ಮೇಲ್ವಿಚಾರಣೆಗೊಳಿಸಬೇಕು. 100 ಎಕರೆ ಪ್ರದೇಶದಲ್ಲಿ ಅರಣ್ಯನಾಶದಿಂದ ಪ್ರಭಾವಿತವಾಗಿರುವ ವನ್ಯಜೀವಿಗಳನ್ನು ರಕ್ಷಿಸಲು ಅಗತ್ಯವಿರುವ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ತೆಲಂಗಾಣ ರಾಜ್ಯದ ವನ್ಯಜೀವಿ ಮುಖ್ಯಸ್ಥರಿಗೆ ನಿರ್ದೇಶಿಸುತ್ತೇವೆ” ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣವು ಕಂಚ ಗಚ್ಚಿಬೌಲಿಯಲ್ಲಿನ 400 ಎಕರೆ ಭೂಮಿಗೆ ಸಂಬಂಧಿಸಿದೆ. ತೆಲಂಗಾಣ ಸರಕಾರವು ಐಟಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಈ ಭೂಮಿಯನ್ನು ಹರಾಜು ಮಾಡಲು ಉದ್ದೇಶಿಸಿದೆ. ಈ ಕ್ರಮವು ವಿದ್ಯಾರ್ಥಿಗಳು ಮತ್ತು ಪರಿಸರವಾದಿಗಳಿಂದ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X