ಹಿಂದಿನ ಅವಧಿ ಕಾಮಗಾರಿಗಳ ಅನುದಾನ ಬಿಡುಗಡೆಗೆ ಸರ್ಕಾರ ಆದೇಶ

Date:

Advertisements

ಹಿಂದಿನ ಸರ್ಕಾರದ ಅವಧಿ ಕಾಮಗಾರಿಗಳ ಹಣ ಬಿಡುಗಡೆಗೆ ತಡೆ ನೀಡಿದ್ದ ಸರ್ಕಾರ, ಅದನ್ನು ತೆರವುಗೊಳಿಸಿ ಎಲ್ಲ ಇಲಾಖೆಗಳು, ನಿಗಮಗಳ ಕಾಮಗಾರಿ ಬಿಲ್ ಬಿಡುಗಡೆ ಮಾಡುವಂತೆ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ.

ಎಲ್ಲ ಇಲಾಖೆಗಳು, ಅಧೀನಕ್ಕೊಳಪಡುವ ಕಾಮಗಾರಿ ಬಿಲ್​ ಪಾವತಿ, ನೈಜತೆ, ನಿಯಮಾನುಸಾರ ಇದೆಯಾ ಎಂದು ಖಾತ್ರಿ ಪಡಿಸಿಕೊಂಡು ಸಂಬಂಧಿಸಿದ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ. ಏಕ್​ರೂಪ್​ ಕೌರ್ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆ

ಸುತ್ತೋಲೆಯಲ್ಲಿ ಏನಿದೆ?

Advertisements

ಎಲ್ಲ ಇಲಾಖೆಗಳು ಮತ್ತು ಇಲಾಖೆಗಳ ಅಧೀನಕ್ಕೊಳಪಡುವ ನಿಗಮ, ಮಂಡಳಿ, ಪ್ರಾಧಿಕಾರಗಳ ಮುಂದುವರೆದ ಕಾಮಗಾರಿಗಳಿಗೆ ಸಂಬಂಧಿಸಿದಂತ ಬಿಲ್ಲುಗಳ ನೈಜತೆಯನ್ನು ಹಾಗೂ ನಿಯಮಾನುಸಾರವಿರುವುದನ್ನು ಖಾತ್ರಿಪಡಿಸಿಕೊಂಡು ಸಂಬಂಧಪಟ್ಟ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆ ಮಾಡುವುದು.

ಎಲ್ಲ ಶಾಸನಬದ್ಧ ಪಾವತಿಗಳನ್ನು ಮತ್ತು ಬಾಹ್ಯ ನೆರವಿನ ಮುಂದುವರೆದ ಯೋಜನಗಳಿಗೆ ಸಂಬಂಧಿಸಿದಂತ ಹಣ ಬಿಡುಗಡೆ ಮಾಡುವುದು.

ಮುಂದುವರಿದ ಕಾರ್ಯಕ್ರಮ, ಯೋಜನೆಗಳಿಗೆ ಸಂಬಂಧಿಸಿದಂತೆ ಸರಕು ಮತ್ತು ಸೇವೆಗಳ ಸಂಗ್ರಹಣೆಗಳ ಸಂಬಂಧ ಹಣ ಬಿಡುಗಡೆ ಮಾಡಬಹುದಾಗಿದೆ.

ಪ್ರಾರಂಭವಾಗದಿರುವ ಕಾಮಗಾರಿಗಳ ಬಗ್ಗೆ 2023 ಮೇ 22ರ ನಿರ್ದೇಶನಗಳು ಮುಂದುವರಿಯುತ್ತವೆ ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು: ಬಸವರಾಜ ಬೊಮ್ಮಾಯಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X