ದಾವಣಗೆರೆ | ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ವತಿಯಿಂದ 134 ನೇ ಅಂಬೇಡ್ಕರ್ ಜಯಂತಿ.

Date:

Advertisements

ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ವತಿಯಿಂದ 134ನೇ ಡಾ.ಬಿಆರ್ ಅಂಬೇಡ್ಕರ್ ಜಯಂತಿಯನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ವಿಶೇಷವಾಗಿ ಮಹಿಳೆಯರು ಸೇರಿದಂತೆ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

1001845892
ಚಿಕ್ಕ ಮಲ್ಲನಹೊಳೆ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಹಿಳೆಯರು

ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮುಖಂಡರು, “ಸಂವಿಧಾನ ಶಿಲ್ಪಿ, ವಿಶ್ವ ಜ್ಞಾನಿ ಅಂಬೇಡ್ಕರ್ ಸಂವಿಧಾನ ರಚಿಸಿ ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮಹಾ ತ್ಯಾಗ ಮಾಡಿದ ಮಹಾ ಜ್ಞಾನಿ.‌ ತಮ್ಮ ಜೀವನದಲ್ಲಿ ಅವರು ಏನೆಲ್ಲಾ ಕಳೆದುಕೊಂಡರೂ ಛಲ ಬಿಡದೆ ದಲಿತ, ಶೋಷಿತ ಸಮುದಾಯಗಳಿಗೆ ನ್ಯಾಯ, ಸಮಾನತೆ ಒದಗಿಸುವ ನಿಟ್ಟಿನಲ್ಲಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ದಲಿತರ ಸ್ವಾಭಿಮಾನದ ಹೆಗ್ಗುರುತು ಅಂಬೇಡ್ಕರ್. ಅವರ ದಾರಿಯಲ್ಲಿ ನಾವೆಲ್ಲರೂ ನೆಡೆಯಬೇಕು” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ಹಸಿದವರು ಕಾಂತರಾಜ್ ವರದಿ ಜಾರಿಗಾಗಿ ಕಾಯುತ್ತಿದ್ದಾರೆ, ಹೊಟ್ಟೆ ತುಂಬಿದವರು ವಿರೋಧಿಸುತ್ತಾರೆ ; ಈಶ್ವರಾನಂದಪುರಿ ಶ್ರೀ

Advertisements

ಕಾರ್ಯಕ್ರಮದಲ್ಲಿ ಮುಖಂಡರಾದ ಪ್ರದೀಪ್, ಗಿಡ್ಡ ರಂಗಪ್ಪ, ಸಿದ್ದಬಸಪ್ಪ, ಮಧುಸೂದನ, ತಿಪ್ಪೇಸ್ವಾಮಿ, ತಿಪ್ಪೇಶ್, ಶಾಮಿಯಾನ ರಾಮಣ್ಣ, ನಾಗರಾಜ್, ಯೋಗೀಶ್, ಮಹಾಂತೇಶ, ರವಿ, ಎಂ ಶ್ರೀಧರ್, ಮಂಜುನಾಥ್, ನಾಗೇಂದ್ರ, ಬಸವರಾಜು, ನಾಗೇಂದ್ರಪ್ಪ, ನಾಗಮ್ಮ, ಹೊನ್ನಮ್ಮ, ತಿಪ್ಪಮ್ಮ, ಸಾಕಮ್ಮ, ಶರಣಮ್ಮ, ಗಂಗಮ್ಮ, ರತ್ನಮ್ಮ ಸೇರಿದಂತೆ ಹಲವು ಮಹಿಳೆಯರು, ಭಾಗವಹಿಸಿದ್ದರು.‌

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇಲ್ಲಿ ಯಾವುದೇ ಭೀಮ್ ಆರ್ಮಿ ವತಿಯಿಂದ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆಯಾಗಿರುವುದಿಲ್ಲ ಸುದ್ದಿಯನ್ನು ಪರಾಮರ್ಶಿಸಿ ಬರೆಯರಿ ಇಲ್ಲ ಖಚಿತ ಪಡಿಸಿಕೊಂಡು ಸುದ್ದಿಯನ್ನು ಬಿತ್ತರಿಸಬೇಕು ಸರ್ ಗ್ರಾಮದಲ್ಲಿ ಅಂಬೇಡ್ಕರ್ ಯುವಕರಿಂದ ವಾರಗಟ್ಟಲೇ ಶ್ರಮ ಹಾಕಿ ಕಾರ್ಯಕ್ರಮ ಮಾಡಿರುವುದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X