ಮೈಸೂರು | ಕೆಆರ್ ಆಸ್ಪತ್ರೆ ವಿರುದ್ಧ ಸುಮೊಟೊ ಪ್ರಕರಣ

Date:

Advertisements

ಮೈಸೂರಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿರುವ ಕೆಆರ್ ಆಸ್ಪತ್ರೆ ಮತ್ತು ಚೆಲುವಾಂಬ ಆಸ್ಪತ್ರೆಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಭೇಟಿ ನೀಡಿದ್ದರು. ಆಸ್ಪತ್ರೆಗಳಲ್ಲಿನ ದುರಾಡಳಿತವನ್ನು ಗಮನಿಸಿರುವ ಅವರು ವೈದ್ಯಕೀಯ ಅಧೀಕ್ಷಕರು ಮತ್ತು ವೈದ್ಯಾಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ (ಸುಮೊಟೊ) ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕಸ ನಿರ್ವಹಣೆ, ಪ್ಲಾಸ್ಟಿಕ್ ಸುರಿಯುವುದು ಮತ್ತು ಪ್ರವೇಶದ್ವಾರದಲ್ಲಿ ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್, ಗ್ಯಾಂಗ್ರೀನ್ ಮತ್ತು ಸೆಲ್ಯುಲೈಟಿಸ್ ರೋಗಿಗಳ ಬಗ್ಗೆ ಕಾಳಜಿವಹಿಸದಿರುವುದು, ಹೊರರೋಗಿ ವಿಭಾಗದಲ್ಲಿ ರೋಗಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸದಿರುವುದನ್ನು ಉಪ ಲೋಕಾಯುಕ್ತರು ಪಟ್ಟಿದ್ದಾರೆ. ಜುಲೈ 19ರಂದು ಲೋಕಾಯುಕ್ತ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಎರಡೂ ಆಸ್ಪತ್ರೆಗಳ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲು ಸೂಚಿಸಲಾಗಿದೆ. ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರು ಸಮಸ್ಯೆಗಳನ್ನು ಪರಿಹರಿಸಿ ಎರಡು ವಾರಗಳಲ್ಲಿ ಉಪ ಲೋಕಾಯುಕ್ತ ಕಚೇರಿಗೆ ಅನುಪಾಲನಾ ವರದಿ ಸಲ್ಲಿಸಬೇಕೆಂದು ಉಪ ಲೋಕಾಯುಕ್ತರು ಆದೇಶಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಲೋಕಾಯುಕ್ತ ತಿಳಿಸಿದೆ.

Advertisements

ಎರಡೂ ಆಸ್ಪತ್ರೆಗಳಲ್ಲಿ ಔಷಧಿಗಳನ್ನು ಹೊರಗಿನ ಮೆಡಿಕಲ್ ಸ್ಟೋರ್‌ಗಳಲ್ಲಿ ಖರೀದಿಸುವಂತೆ ಮತ್ತು ಹತ್ತಿರ ಲ್ಯಾಬ್‌ಗಳಲ್ಲಿ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವಂತೆ ವೈದ್ಯರು ಒತ್ತಾಯಿಸಿದ್ದಾರೆ ಎಂದು ಕೆಲವು ರೋಗಿಗಳು ಉಪ ಲೋಕಾಯುಕ್ತರ ಮುಂದೆ ದೂರಿದ್ದಾರೆ. ವಿಶೇಷಚೇತನ ರೋಗಿಗಳಿಗೆ ವಿಶೇಷವಾದ ವಿಶ್ರಾಂತಿ ಕೊಠಡಿ ಸೌಲಭ್ಯಗಳು ಇಲ್ಲವೆಂಬುದನ್ನೂ ಅವರು ಗಮನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಂ-ಮೈ ಎಕ್ಸ್‌ಪ್ರೆಸ್‌ವೇ: ಮತ್ತೊಂದು ಟೋಲ್‌ ಹೊರೆ; ಮಂಡ್ಯದಲ್ಲಿ ಸುಂಕ ವಸೂಲಿ ಆರಂಭ

“ಕೆ.ಆರ್‌ ಆಸ್ಪತ್ರೆಯ ಸಿಬ್ಬಂದಿಗಳು ರೋಗಿಗಳ ಪೋಷಕರಿಂದ ಹಣ ಕೇಳುವ ಅಭ್ಯಾಸವನ್ನು ಹೊಂದಿದ್ದಾರೆ ಎಂಬುದು ತಿಳಿದುಬಂದಿದೆ. ರೋಗಿಗಳಿಗೆ ಹಾಸಿಗೆ ನೀಡಿಲ್ಲ. ಕಬ್ಬಿಣದ ಮಂಚಗಳು ತುಕ್ಕು ಹಿಡಿದಿವೆ. ಆಸ್ಪತ್ರೆಯ ಆವರಣಗಳಲ್ಲಿ ಇಲಿ, ಹೆಗ್ಗಣಗಳ ಅನೇಕ ಬಿಲಗಳಿವೆ. ಇದು ಆಸ್ಪತ್ರೆಯ ಅವ್ಯವಸ್ಥೆಯನ್ನು ಎತ್ತಿ ತೋರಿಸುತ್ತದೆ” ಎಂದು ಉಪ ಲೋಕಾಯುಕ್ತರು ಹೇಳಿದ್ದಾರೆ.

“ಚೆಲುವಾಂಬ ಆಸ್ಪತ್ರೆಯಲ್ಲೂ ವಾರ್ಡ್‌ಗಳ ನಿರ್ವಹಣೆ ಸರಿಯಾಗಿಲ್ಲ. ರೋಗಿಗಳ ಪೋಷಕರಿಗೆ ವಸತಿ ನಿಲಯ ಮತ್ತು ಕಾಯುವ ಸ್ಥಳದ ಸೌಲಭ್ಯಗಳಿಲ್ಲ. ವಿಪರೀತ ಶುಲ್ಕ ವಿಧಿಸುವ ಖಾಸಗಿ ಲ್ಯಾಬ್‌ಗಳಿಂದ ಎಂಆರ್‌ಐ ಮತ್ತು ಅಲ್ಟ್ರಾಸೌಂಡ್ ಪರೀಕ್ಷೆಗಳನ್ನು ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂಬುದನ್ನು ಗಮನಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಡಿಎಚ್ ಒ ಕೆ.ಎಚ್.ಪ್ರಸಾದ್, ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ನಂಜುಂಡಸ್ವಾಮಿ, ನಿವಾಸಿ ವೈದ್ಯಾಧಿಕಾರಿ ರಾಜೇಶ್ ಕುಮಾರ್, ಚೆಲುವಾಂಬ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ರಾಜೇಂದ್ರಕುಮಾರ್, ಆರ್‌ಎಂಒ
ಶಿವರಾಮಕೃಷ್ಣ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಿ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ” ಎಂದು ಲೋಕಯುಕ್ತ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X