ಬೀದರ್ | ಪತ್ರಕರ್ತನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ; ಖಂಡನೀಯ

Date:

Advertisements

ಬೀದರ್‌ನ ಕರ್ತವ್ಯ ನಿರತ ಪತ್ರಕರ್ತ ರವಿ ಭೂಸುಂಡೆ ಎಂಬುವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಹಲ್ಲೆಯನ್ನು ಔರಾದ್ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿದ್ದಾರೆ.

ಈ ಸಂಬಂಧ ಔರಾದ್ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ನೇತೃತ್ವದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಸೀಲ್ದಾರ್ ಮಹೇಶ್ ಪಾಟೀಲ್ ಅವರಿಗೆ ಸಲ್ಲಿಸಿದರು.

‘ಬೀದರ ನಗರದ ಚಿದ್ರಿ ರಸ್ತೆಯಲ್ಲಿ ಏ.15 ರಂದು ರಾತ್ರಿ ರವಿ ಭೂಸುಂಡೆ ಅವರು ವರದಿಗಾಗಿ ಪೋಟೋ ತೆಗೆಯಲು ಹೋದ ವೇಳೆ ಪ್ರಾದೇಶಿಕ ಅರಣ್ಯ ಇಲಾಖೆ ಅಧಿಕಾರಿ ದಸ್ತಗಿರ, ಉಪವಲಯ ಅರಣ್ಯಾಧಿಕಾರಿ ಶಾಂತಕುಮಾರ, ವಲಯ ಅರಣ್ಯಾಧಿಕಾರಿ ಗಜಾನಂದ, ಬೀಟ್ ವನಪಾಲಕ ಸಂಗಮೇಶ ಸೇರಿದಂತೆ ಇನ್ನೂ ಮೂರಾಲ್ಕು ಜನರು ಹಲ್ಲೆ ನಡೆಸಿದ್ದಾರೆ’ ಎಂದು ಆರೋಪಿಸಿದರು.

Advertisements

‘ನಾನು ಪತ್ರಕರ್ತ ಎಂದು ರವಿ ಭೂಸಂಡೆ ಅವರು ಹೇಳಿದರೂ ಮತ್ತಷ್ಟು ಅತಿರೇಕಕ್ಕೇರಿದ ಅಧಿಕಾರಿಗಳು ರವಿ ಅವರನ್ನು ಕಪಾಳಮೋಕ್ಷ ಮಾಡಿ ದರ್ಪ ಮೆರೆದಿದ್ದು ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಪತ್ರಕರ್ತ ರವಿ ಅವರನ್ನು ಅಧಿಕಾರಿಗಳು ತಮ್ಮ ಖಾಸಗಿ ವಾಹನದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ತನ್ನದೇ ಆದ ಸ್ವಾತಂತ್ರ್ಯವಿದೆ. ಅರಣ್ಯ ಅಧಿಕಾರಿಗಳು ಕರ್ತವ್ಯನಿರತ ಪತ್ರಕರ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಮಾಧ್ಯಮ ಸ್ವತಂತ್ರ ಹತ್ತಿಕ್ಕಲು ಹೊರಟಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟಾಗಿದೆ. ಕೂಡಲೇ ತಪ್ಪಿತಸ್ಥ ಅರಣ್ಯಾಧಿಕಾರಿಗಳಿಗೆ ಬಂಧಿಸಿ, ಅವರನ್ನು ಸೇವೆಯಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಸುನೀಲ್ ಜಿರೋಬೆ, ಖಜಾಂಚಿ ಸುಧೀರ್ ಕುಮಾರ್ ಪಾಂಡ್ರೆ, ಕಾರ್ಯದರ್ಶಿ ಅಹ್ಮದ್ ಸೇರಿದಂತೆ ಪ್ರಮುಖರಾದ ಶರಣಪ್ಪ ಚಿಟ್ಮೆ, ಮಲ್ಲಪ್ಪಗೌಡ, ಶಿವಕುಮಾರ್ ಸಾಧುರೆ, ಅಮರ ಸ್ವಾಮಿ, ರಾಚಯ್ಯ ಸ್ವಾಮಿ, ರವಿ ಮಠಪತಿ, ಅಂಬರೇಶ್ ಚಿದ್ರೆ, ರವಿ ಸಿಂಧೆ, ಪ್ರಭುಲಿಂಗ ಸ್ವಾಮಿ ಹಾಗೂ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X