ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ, ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Date:

Advertisements

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿತು.

ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಮಯೂರ್ ಜೈಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ಸೇರಿ ಪ್ರಮುಖರು ಭಾಗಿಯಾಗಿದ್ದರು.

ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾಗಿರುವದು ಪ್ರಧಾನಿ ಮೋದಿ ಸರ್ಕಾರ. ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿಯಾಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ಮಾತಾಡುತ್ತಿದೆ? 4 ರೂ. ಹಾಲಿನ ದರ ಹೆಚ್ಚಿಸಿ ಆ ಹಣವನ್ನು ನೇರವಾಗಿ ರೈತರ ಜೇಬಿಗೆ ಹಾಕಿದ್ದೇವೆ. ಅದು ಸರ್ಕಾರಕ್ಕೆ ಬರಲ್ಲ” ಎಂದರು.

“ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ. ಸುಳ್ಳೇ ಬಿಜೆಪಿಯ ಮನೆ ದೇವರು. ಆರ್‌ಎಸ್‌ಎಸ್‌ ಸುಳ್ಳಿನ ಮಹಾ ಕಾರ್ಖಾನೆ. ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ” ಎಂದು ಕುಟುಕಿದರು.

“ನಾವು ಸುಳ್ಳಿನ ಕಾರ್ಖಾನೆ ಆರ್‌ಎಸ್‌ಎಸ್‌ ಸುಳ್ಳುಗಳ ವಿರುದ್ಧ ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು. ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಮೋದಿ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ. ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ” ಎಂದು ಪ್ರಶ್ನಿಸಿದರು.

ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಹೆಚ್.ಸಿ ಮಹದೇವಪ್ಪ, ಚಲುವರಾಯಸ್ವಾಮಿ, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಬೋಸರಾಜು, ದರ್ಶನಾಪುರ್, ಎಂ.ಸಿ ಸುಧಾಕರ್, ಭೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜು, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಬಿ.ವಿ, ಶ್ರೀನಿವಾಸ್, ಎಂಎಲ್ ಸಿ ನಾರಾಯಣಸ್ವಾಮಿ, ನಾಗರಾಜ್ ಯಾದವ್, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಮತ್ತಿತರರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X