ಚಿಕ್ಕಬಳ್ಳಾಪುರ | ಉಪ್ಪಾರ ಸಮಾಜಕ್ಕೆ ಸರಕಾರದಿಂದ ಅನ್ಯಾಯ : ಮಂಚನಬೆಲೆ ವೆಂಕಟೇಶ್‌ ಆರೋಪ

Date:

Advertisements

ಏ.20ರಂದು ಬೆಂಗಳೂರಲ್ಲಿ ಉಪ್ಪಾರ ವಧು ವರರ ಸಮಾವೇಶ

ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಏಪ್ರಿಲ್ 20ರಂದು ವಧು – ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಉಪ್ಪಾರ ಮಹಾಸಭಾದ ಉಪಾಧ್ಯಕ್ಷ ಮಂಚನಬೆಲೆ ವೆಂಕಟೇಶ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 20ರಂದು ಬೆಂಗಳೂರಿನ ರಿಯಲ್ಟೊ ಹೋಟೆಲ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ಉಪ್ಪಾರ ವಧು – ವರರು ಮತ್ತು ಪಾಲಕರ ಸಮಾಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಉಪ್ಪಾರ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಶ್ರೀರಾಲ ಶ್ರೀರಾಮುಲು ಸಗರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ರಾಜ್ಯ ಸೇರಿದಂತೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಉಪ್ಪಾರ ಸಮುದಾಯದ ವಧು – ವರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಮುದಾಯದ ಬಾಂಧವರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

Advertisements

ಉಪ್ಪಾರ ಸಮಾಜಕ್ಕೆ ಸರಕಾರ ದ್ರೋಹ : ರಾಜ್ಯಾದ್ಯಂತ ಸುಮಾರು 24 ಲಕ್ಷ ಉಪ್ಪಾರ ಸಮಾಜದ ಜನರಿದ್ದು, ಸರಕಾರ ಜಾತಿ ಗಣತಿಯಲ್ಲಿ ಕಡಿಮೆ ಜನಸಂಖ್ಯೆಯನ್ನು ತೋರಿಸಿ ಇಡೀ ಸಮುದಾಯಕ್ಕೆ ಅನ್ಯಾಯ ಮಾಡಲು ಮುಂದಾಗಿರುವುದು ಖಂಡನೀಯ. ಕೂಡಲೇ ಸರಕಾರ ಮರು ಸಮೀಕ್ಷೆ ನಡೆಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಪ್ಪಾರ ಸಮಾಜ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪೊಲೀಸರ ಬಂದೂಕಿನ ನ್ಯಾಯ ಸಮಾಜಕ್ಕೆ ಮಾರಕ

ಚಿಕ್ಕಬಳ್ಳಾಪುರ ನಗರದಲ್ಲಿ 30 ಸಾವಿರ ಮತ್ತು ತಾಲ್ಲೂಕಿನಲ್ಲಿ 8 ಸಾವಿರ ಉಪ್ಪಾರ ಸಮಾಜದ ಜನ ಸಂಖ್ಯೆ ಇದೆ. ಚಿಕ್ಕಬಳ್ಳಾಪುರದಲ್ಲಿ ಉಪಜಾತಿ ಪ್ರಮಾಣ ಪತ್ರ ಕೊಡುತ್ತಿಲ್ಲ. ಪ್ರತ್ಯೇಕ ನಿಗಮ ಮಾಡಿ ನಮಗೆ ಯಾವುದೇ ಅನುಕೂಲವಾಗದಂತೆ ಮಾಡಿದ್ದಾರೆ. ಇದೆಲ್ಲವನ್ನೂ ಬಗೆಹರಿಸುವ ನಿಟ್ಟಿನಲ್ಲಿ ಸರಕಾರ ನಿಖರವಾದ ಸಮೀಕ್ಷೆ ನಡೆಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸೋಮಶೇಖರ್, ಬಾಗೇಪಲ್ಲಿ ಶಿವಪ್ಪ, ಮಂಚೆನಹಳ್ಳಿ ಸುರೇಶ್, ಗೌರಿಬಿದನೂರು ಆನಂದ್, ಶಾಂತಪ್ಪ ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X