ಕೊಪ್ಪಳ | ರತ್ನಾಗೆ ಆಶ್ರಯ ಕಲ್ಪಿಸಲು ಸಿಎಂ ಕಚೇರಿಯಿಂದ ಸೂಚನೆ; ನಿರಾಶ್ರಿತರ ಕೇಂದ್ರದಲ್ಲಿ ವ್ಯವಸ್ಥೆ

Date:

Advertisements

‌ಬಾಡಿಗೆ ಕಟ್ಟಲಾಗದೆ ಇರುವ ಮನೆಯನ್ನೂ ಬಿಟ್ಟು ಭಾಗ್ಯನಗರದ ತಾಯಮ್ಮ-ಸಾಯಿಬಾಬಾ ದೇವಸ್ಥಾನಗಳ ಆವರಣದಲ್ಲಿ ವಾಸವಿದ್ದ ರತ್ನಾ ದೊಡ್ಡಮನಿ ಎಂಬ ಅಸಹಾಯಕ ಮಹಿಳೆಗೆ ತ್ವರಿತವಾಗಿ ಸೂರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಥಳೀಯ ಆಡಳಿತ ಸಂಸ್ಥೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೊಪ್ಪಳದ ತೆಗ್ಗಿನಕೇರಿ ನಗರ ವಸತಿ ನಿರಾಶ್ರಿತರ ಕೇಂದ್ರದಲ್ಲಿ ಉಳಿಯಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೊಪ್ಪಳ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.

ರತ್ನಾ ಪಿ ದೊಡ್ಡಮನಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ನಂತರದ ದಿನಗಳಲ್ಲಿ ಬಾಡಿಗೆ ಕಟ್ಟಲು ಸಾಧ್ಯವಾಗದೆ, ತಾವಿದ್ದ ಮನೆಯನ್ನು ಬಿಟ್ಟು, ತಾಲೂಕಿನ ಭಾಗ್ಯನಗರದ ತಾಯಮ್ಮ-ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಆಶ್ರಯ ಪಡೆದಿದ್ದರು. ಸಂತ್ರಸ್ತೆಗೆ ಕೂಡಲೇ ನಿವೇಶನ ಒದಗಿಸಿಕೊಡುವಂತೆ ಮಾಧ್ಯಮಗಳು ವರದಿ ಮಾಡಿ ಆಗ್ರಹಿಸಿದ್ದವು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು, ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಸೂಚನೆ ಅನ್ವಯ 2024ರ ಆಗಸ್ಟ್‌ 10ರಂದು ಆಶ್ರಯ ಸಮಿತಿ ಸಭೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ಆಯ್ಕೆ ಪ್ರಕ್ರಿಯೆಯಲ್ಲಿ ರತ್ನಾ ಪಿ ದೊಡ್ಡಮನಿ ಅವರ ಹೆಸರನ್ನು ಸೇರಿಸಲಾಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ರಾಜೀವ ಗಾಂಧಿ ವಸತಿ ನಿಗಮದ ವೆಬ್‌ಸೈಟ್‌ನಲ್ಲಿ ಮಾಹಿತಿಗಳನ್ನು ಈಗಾಗಲೇ ನೋಂದಣಿ ಮಾಡಲಾಗಿದ್ದು, ಸರ್ವೇ ನಂ.32/1,2,3,4,5 ‍‍ಹಾಗೂ 41/11ರ ಕೆಜಿಪಿ ವಿನ್ಯಾಸ ನಕ್ಷೆಯನ್ನು ತಯಾರಿಸಲು ಭೂ ದಾಖಲೆಗಳ ಕಾರ್ಯಾಲಯಕ್ಕೆ ಸಲ್ಲಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೂರ್ಣಚಂದ್ರ ಕನ್ನಡ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸ್ಥಾಪನೆ; ಏ.27ರಂದು ಉದ್ಘಾಟನೆ

“ಸದರಿ ಕೆಜಿಪಿ ವಿನ್ಯಾಸ ನಕ್ಷೆ ಅನುಮೋದನೆಗೊಂಡ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು”‌ ಎಂದು ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X