ಮಾಂಸಾಹಾರದ ಬಗ್ಗೆ ‘ಕೊಳಕು’ ನಿಂದನೆ: ಮುಂಬೈನಲ್ಲಿ ಮರಾಠಿಗಳು – ಗುಜರಾತಿಗಳ ನಡುವೆ ಘರ್ಷಣೆ

Date:

Advertisements

ಮುಂಬೈನ ಘಾಟ್ಕೋಪರ್‌ನಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಮಾಂಸಾಹಾರ ಸೇವನೆಯ ಮರಾಠಿ ಸಮುದಾಯದವರು ಮತ್ತು ಸಸ್ಯಾಹಾರ ಸೇವನೆಯ ಗುಜರಾತಿ ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ.

ಅಪಾರ್ಟ್ ಮೆಂಟ್‌ನಲ್ಲಿ ವಾಸಿಸುತ್ತಿರುವ ಕೆಲ ಗುಜರಾತಿ ನಿವಾಸಿಗಳು ಮಾಂಸಾಹಾರ ಸೇವನೆಯ ಮರಾಠಿಯವರನ್ನು ʼಕೊಳಕರುʼ ಎಂದು ನಿಂದಿಸಿದ ಪರಿಣಾಮ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಘರ್ಷಣೆಯಲ್ಲಿ ತೊಡಗಿದ್ದ ಎರಡೂ ಸಮುದಾಯಗಳ ಜನರ ಜೊತೆ ಮಾತುಕತೆ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಮರಾಠಿ ಭಾಷಿಕ ಜನರು ಮೀನು ಮತ್ತು ಮಾಂಸಾಹಾರ ಸೇವನೆ ಮಾಡುತ್ತಾರೆಂದು ಅದೇ ಅಪಾರ್ಟ್ಮೆಂಟ್‌ನಲ್ಲೇ ವಾಸಿಸುತ್ತಿರುವ ಕೆಲ ಗುಜರಾತಿಗರು ಕೀಳಾಗಿ ನೋಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

Advertisements

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿರುವ ಗುಜರಾತಿ ನಿವಾಸಿಗಳೊಂದಿಗೆ ವಾಗ್ವಾದ ನಡೆಸುತ್ತಾ, ಮರಾಠಿಗರ ಆಹಾರ ಆಯ್ಕೆಯನ್ನು ಸಮರ್ಥಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶವನ್ನಾಳುವ ಪ್ರಧಾನಿ ಮೋದಿ ಬಡ ಮುಸ್ಲಿಮರ ಪರವೇ?

ಮರಾಠಿ ಕುಟುಂಬಗಳನ್ನು ಕೊಳಕರು ಎಂದು ನಿಂದಿಸಿದ ಮತ್ತು ಮಾಂಸ ಹಾಗೂ ಮೀನು ಅಡುಗೆ ತಯಾರಿಸದಂತೆ ನಿರ್ಬಂಧಿಸಿದ ಅಪಾರ್ಟ್ಮೆಂಟ್‌ನ ಕೆಲ ನಿವಾಸಿಗಳ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ನಾಯಕರೊಬ್ಬರು ಆಕ್ರೋಶವನ್ನು ವ್ಯಕ್ತಪಡಿಸಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಗುಜರಾತಿ ನಿವಾಸಿಗಳ ಆಕ್ಷೇಪದ ಕಾರಣಕ್ಕೆ ಮರಾಠಿ ಭಾಷಿಕ ನಿವಾಸಿಗಳು ಹೊರಗಿನಿಂದ ಮಾಂಸಾಹಾರ ತರಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿನ ಕುಟುಂಬಗಳು ಯಾವ ಆಹಾರವನ್ನು ಸೇವಿಸಬೇಕು ಎಂಬ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಅಪಾರ್ಟ್ಮೆಂಟ್‌ನ ನಿವಾಸಿಯೊಬ್ಬರು ಸ್ಪಷ್ಟನೆ ನೀಡಲು ಯತ್ನಿಸಿದರೂ, ಇನ್ನಿತರರ ಆಹಾರಾಭ್ಯಾಸದ ಬಗ್ಗೆ ಯಾರೂ ಕೂಡ ತಾಕೀತು ಮಾಡಲು ಸಾಧ್ಯವಿಲ್ಲ. ವಿಶೇಷವಾಗಿ, ಮುಂಬೈನಂತಹ ಮಹಾನಗರದಲ್ಲಿ ನಿರ್ಬಂಧ ಸಾಧ್ಯವಿಲ್ಲ ಎಂದು ನಿವಾಸಿಯೊಬ್ಬರು ಒತ್ತಿ ಹೇಳುತ್ತಿರುವುದು ಆ ವಿಡಿಯೊದಲ್ಲಿ ದಾಖಲಾಗಿದೆ.

ಅಪಾರ್ಟ್ಮೆಂಟ್‌ನಲ್ಲಿ ಪ್ರಕ್ಷುಬ್ಧತೆ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿದರು. ಆದರೆ, ಈ ಸಂಬಂಧ ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ, ಅಪಾರ್ಟ್ಮೆಂಟ್‌ನ ನಿವಾಸಿಗಳು ಪರಸ್ಪರ ಸೌಹಾರ್ದದಿಂದ ಜೀವಿಸಬೇಕು ಹಾಗೂ ಯಾರಿಗೂ ಕಿರುಕುಳ ನೀಡಬಾರದು ಎಂದು ಪೊಲೀಸರು ಅಲ್ಲಿನ ನಿವಾಸಿಗಳಿಗೆ ಕಿವಿಮಾತು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X