ಧಾರವಾಡ | ಪ್ರಜಾಪ್ರಭುತ್ವ ಬುನಾದಿ ಹಾಕಿದ ಅಂಬೇಡ್ಕರ್; ಸಾಮಾಜಿಕ ಸಮಾನತೆಯ ಶಿಲ್ಪಿ: ಪ್ರೊ. ಕನಕಣಿ

Date:

Advertisements

ಸಮಾನತೆ ಮತ್ತು ಸ್ವಾತಂತ್ರ್ಯ ಜೊತೆಗೆ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಮೌಲ್ಯವನ್ನು ವಿವರಿಸುವ ಆರ್ಥಿಕ ಪ್ರಜಾಪ್ರಭುತ್ವದ ಬುನಾದಿ ಹಾಕಿದ, ಸಾಮಾಜಿಕ ಸಮಾನತೆಯ ಶಿಲ್ಪಿ ಮತ್ತು ಧೀಮಂತ ನಾಯಕ ಅಂಬೇಡ್ಕರ್ ಎಂದು ಪ್ರೊ. ನಾಗರಾಜ್ ಕನಕಣಿ ಹೇಳಿದರು.

ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮ ವಾರ್ಷಿಕೋತ್ಸದ ಅಂಗವಾಗಿ ನಗರದ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಎಲ್ಲಾ ನಾಗರಿಕರಿಗೆ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ತಂದುಕೊಟ್ಟ ಸಂವಿಧಾನ ಶಿಲ್ಪಿ ಆಗಿದ್ದಾರೆ ಎಂದರು.

ಎನ್ ಎಸ್ ಎಸ್ ಘಟಕ, ರಾಜ್ಯಶಾಸ್ತ್ರ ವಿಭಾಗ ಮತ್ತು ದಿನಾಚರಣೆಯ ಘಟಕ ಸಂಯೋಗದೊಂದಿಗೆ ಕಾರ್ಯಕ್ರಮ ನಡೆಯಿತು. ಉಸ್ಮಾನ್ ಅತ್ತಾರ್ ಖುರಾನ ಪಠಿಸಿದರು. ನಿಯಾಜ್ ಶ್ಲೋಕ ಹೇಳಿದರು. ಸಮಾರೋಪದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ ಐ.ಏ.ಮುಲ್ಲಾ ಮಾತನಾಡಿ, ಶಿಕ್ಷಣ ಮತ್ತು ಸಬಲೀಕರಣದಿಂದ ಅಸಮಾನತೆ ಹೋಗಲಾಡಿಸಲು ಸಾಧ್ಯ, ಎಲ್ಲಾ ವರ್ಗಗಳ ಅಭಿವೃದ್ಧಿಯಾಗಬೇಕು ಎಂಬುವುದು ಅಂಬೇಡ್ಕರ್ ಅವರ ಆಸೆಯಾಗಿತ್ತು ಎಂದರು.

Advertisements

ಡಾ. ನಾಗರಾಜ್ ಗುದಗನವರ ಸ್ವಾಗತಿಸಿದರು. ಡಾ. ತಾಜುನ್ನಿಸಾ ವಂದನಾರ್ಪಣೆ ಮಾಡಿದರು. ನೂರಜಹಾನ್ ಗಲಗಲಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಡಾ. ಏನ್ ಬಿ ನಾಲತವಾಡ, ಡಾ. ಅಸ್ಮನಾಜ್ ಬಳ್ಳಾರಿ, ಡಾ ಸೌಭಾಗ್ಯ ಜಾದವ್, ಡಾ. ಗೌರಿ ಕೇರಿಮಠ, ಪ್ರೊ. ಸುರೇಶ್ ವೇದಿಕೆ ಮೇಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X