ಮತ್ತೆ 240 ಉದ್ಯೋಗಿಗಳನ್ನು ವಜಾ ಮಾಡಿದ ಇನ್ಫೋಸಿಸ್!

Date:

Advertisements

ಇತ್ತೀಚೆಗಷ್ಟೇ 400 ಟ್ರೈನಿ ಉದ್ಯೋಗಿಗಳನ್ನು ವಜಾಗೊಳಿಸಿದ್ದ ಉದ್ಯಮಿ ನಾರಾಯಣ ಮೂರ್ತಿ ಅವರ ಇನ್ಫೋಸಿಸ್ ಸಂಸ್ಥೆ, ಇದೀಗ ಮತ್ತೆ 240 ಟ್ರೈನಿ ಉದ್ಯೋಗಿಗಳನ್ನು ವಜಾಗೊಳಿಸಿದೆ.

ಮೈಸೂರಿನಲ್ಲಿ ಇನ್ಫೋಸಿಸ್ ಕ್ಯಾಂಪಸ್‌ಗೆ ಟ್ರೈನಿ ಉದ್ಯೋಗಿಗಳಾಗಿ ಆಯ್ಕೆಯಾಗಿದ್ದ 240 ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಉದ್ಯೋಗಿಗಳು ಆಂತರಿಕ ಮೌಲ್ಯಮಾಪನಗಳಲ್ಲಿ ಉತ್ತೀರ್ಣರಾಗಿಲ್ಲ ಕಾರಣ ವಜಾಗೊಳಿಸಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಉದ್ಯೋಗ ಕಳೆದುಕೊಂಡಿರುವ 240 ಟ್ರೈನಿ ಉದ್ಯೋಗಿಗಳನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಂಸ್ಥೆ ನೇಮಕ ಮಾಡಿಕೊಂಡಿತ್ತು. ಆದರೆ, ಆರೇ ತಿಂಗಳಲ್ಲಿ ಅವರನ್ನು ಸಂಸ್ಥೆಯಿಂದ ಹೊರಹಾಕಲಾಗಿದೆ.

Advertisements

ಇನ್ನೂ ಹಲವು ಟ್ರೈನಿ ಉದ್ಯೋಗಿಗಳ ಆಂತರಿಕ ಮೌಲ್ಯಮಾಪನವನ್ನು ಸಂಸ್ಥೆಯು ನಡೆಸುತ್ತಿದ್ದು, ಆ ಫಲಿತಾಂಶಗಳು ಬಂದ ಬಳಿಕ, ಇನ್ನೂ ಹಲವರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಆದಾಗ್ಯೂ, ಹಾಲಿ ವಜಾಗೊಂಡಿರುವವರು 240 ಮಂದಿ ಅಲ್ಲ. 370 ಮಂದಿ ಎಂದು ಉದ್ಯೋಗ ಕಳೆದುಕೊಂಡಿರುವ ಟ್ರೈನಿಯೊಬ್ಬರು ಹೇಳಿದ್ದಾರೆ.

ಇನ್ಫೋಸಿಸ್ ರೀತಿಯ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡಲು ಉತ್ಸುಕರಾಗಿದ್ದೆವು. ನಾನಾ ರೀತಿಯ ಕನಸು ಕಂಡಿದ್ದೆವು. ಆದರೆ, ಕಂಪನಿಯು ತನ್ನ ಉತ್ಸಾಹ, ಕನಸುಗಳಿಗೆ ತಣ್ಣೀರು ಎರಚಿದೆ ಎಂದು ವಜಾಗೊಂಡವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ವರ್ಷದ ಫೆಬ್ರವರಿಯಲ್ಲಿ, ಮೈಸೂರಿನಲ್ಲಿರುವ ಇನ್ಫೋಸಿನ್‌ ಕ್ಯಾಪಂಸ್‌ನಲ್ಲಿ ಹಲವು ತಿಂಗಳುಗಳ ಕಾಲ ಮೂಲಭೂತ ತರಬೇತಿ ಪಡೆದ 400ಕ್ಕೂ ಹೆಚ್ಚು ಹೊಸ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಲಾಗಿತ್ತು. ಇನ್ಫೋಸಿಸ್‌ನ ಧೋರಣೆಯ ವಿರುದ್ಧ ಐಟಿ ವಲಯದ ಸಂಘಟನೆಯಾದ ‘ನಸೆಂಟ್ ಇನ್ಫರ್ಮೇಷನ್ ಟೆಕ್ನಾಲಜಿ ಉದ್ಯೋಗಿಗಳ ಸೆನೆಟ್’ (NITES) ಕಾರ್ಮಿಕ ಸಚಿವಾಲಯಕ್ಕೆ ದೂರು ನೀಡಿತ್ತು. ಮಾತ್ರವಲ್ಲದೆ, ವಜಾಗೊಳಿಸಲಾಗಿರುವ ಉದ್ಯೋಗಿಗಳ ಸಂಖ್ಯೆ 300 ಅಲ್ಲ, 700 ಎಂದು ವಾದಿಸಿತ್ತು. ಇನ್ಫೋಸಿಸ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X