ಚಿಕ್ಕಬಳ್ಳಾಪುರ | ಜನಿವಾರ, ಜಾತಿ ಗಣತಿಗೆ ಜಿಲ್ಲಾ ಬ್ರಾಹ್ಮಣ ಮಹಾಸಭಾ ಆಕ್ಷೇಪ

Date:

Advertisements

ಜನಿವಾರ ಬ್ರಾಹ್ಮಣರ ಉಪನಯನದ ಬಳಿಕ ಧರಿಸುವ ಶ್ರೇಷ್ಠ ದಾರ. ಅದನ್ನ ಒಮ್ಮೆ ಧರಿಸಿದ ಮೇಲೆ ಮತ್ತೊಮ್ಮೆ ತೆಗೆಯುವಂತಿಲ್ಲ. ಜನಿವಾರ ಹಳೆಯದಾದ ಬಳಿಕ ಹೊಸತನ್ನು ಹಾಕಿದ ಬಳಿಕವಷ್ಟೇ ಹಳೆಯದನ್ನು ತೆಗೆಯುತ್ತೇವೆ. ಹೀಗಿರುವಾ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿರುವುದು, ವಿದ್ಯಾರ್ಥಿಯನ್ನು ಪರೀಕ್ಷೆಯಿಂದ ಹೊರಗುಳಿಯುವಂತೆ ಮಾಡಿರುವುದು ಖಂಡನೀಯ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಪ್ರತಿನಿಧಿ ನಾಗಭೂಷಣ್ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ ಜನಿವಾರ ತೆಗೆಯದ ಕಾರಣ ವಿದ್ಯಾರ್ಥಿ ಪರೀಕ್ಷೆ ಬರೆದಿಲ್ಲ ಮತ್ತು ಬೀದರ್‌ ನಲ್ಲಿ ಜನಿವಾರ ತೆಗೆಸಿ ಕಸದಬುಟ್ಟಿಗೆ ಹಾಕಲಾಗಿದೆ. ಇದು ಬ್ರಾಹ್ಮಣ ಸಮುದಾಯಕ್ಕೆ ಮಾಡಿದ ಅಪಮಾನ. ಇದನ್ನು ಬ್ರಾಹ್ಮಣ ಸಮುದಾಯ ಎಂದಿಗೂ ಒಪ್ಪುವುದಿಲ್ಲ. ಕೂಡಲೇ ವಿದ್ಯಾರ್ಥಿ ಸುಚಿವ್ರತ್‌ ಎಂಬಾತನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ, ಆತನ ಮುಂದಿನ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ನಮ್ಮ ಆಂತರಿಕ ವರದಿಯ ಪ್ರಕಾರ ರಾಜ್ಯದಲ್ಲಿ ಸುಮಾರು 45 ಲಕ್ಷ ಬ್ರಾಹ್ಮಣರ ಜನಸಂಖ್ಯೆ ಇದೆ. ಆದರೆ, ಸರಕಾರ ಜಾತಿ ಗಣತಿಯ ಪ್ರಕಾರ ಶೇ.2.8ರಷ್ಟಿದೆ ಎಂದಿರುವುದು ಸರಿಯಲ್ಲ. ಸಮೀಕ್ಷೆಯಲ್ಲಿ ತಪ್ಪಾಗಿದೆ. ಹಾಗಾಗಿ ಸರಕಾರ ಮತ್ತೊಮ್ಮೆ ಸಮೀಕ್ಷೆ ನಡೆಸುವ ಮೂಲಕ ಜಾತಿ ಗಣತಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.

Advertisements

ಬ್ರಾಹ್ಮಣ ಮಹಾಸಭಾದ‌ ಜಿಲ್ಲಾ ಪ್ರತಿನಿಧಿ ಪ್ರಕಾಶ್ ಮಾತನಾಡಿ, ಶಿವಮೊಗ್ಗದಲ್ಲಿ ಕೆಇಎ ಅಧಿಕಾರಿಗಳು ಎಡವಟ್ಟಿನಿಂದ ಬಡ ವಿದ್ಯಾರ್ಥಿಗೆ ಅನ್ಯಾಯವಾಗಿದೆ. ಜನಿವಾರ ತೆಗೆಸಿರುವುದು ಸರಿಯಲ್ಲ. ಪರೀಕ್ಷಾ ಕೇಂದ್ರದಲ್ಲಿ ಏನನ್ನು ಧರಿಸಬೇಕು ಎಂಬುದರ ಕುರಿತು ಸರಕಾರ ಸಮಿತಿ ರಚಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬ್ರಾಹ್ಮಣ ಮಹಿಳೆಯರು ಜನಿವಾರ ಧರಿಸುವುದಿಲ್ಲ – ಅವರೂ ಶೂದ್ರರೇ: ಭಗವಾನ್

ರಾಜ್ಯದಲ್ಲಿ ಶೇ.15-20ರಷ್ಟು ಮಾತ್ರ ಜಾತಿ ಗಣತಿ ಸಮೀಕ್ಷೆ ಆಗಿದೆ. ಆದ್ದರಿಂದ, ಸರಿಯಾದ ಜಾತಿಗಣತಿ ನಡೆಸುವ ಮೂಲಕ ಎಲ್ಲಾ ಸಮದಾಯಗಳಿಗೂ ಸೂಕ್ತ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯಾಧ್ಯಕ್ಷರ ಹೇಳಿರುವಂತೆ ಇಡೀ ರಾಜ್ಯಾದ್ಯಂತ ಬ್ರಾಹ್ಮಣರು ಬೀದಿಗಿಳಿದು ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ ಎಂದು ಕಿಡಿಕಾರಿದರು.

ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಬ್ರಾಹ್ಮಣ ಸಮಾಜದ ಮುಖಂಡರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ರಮೇಶ್‌, ಚಿಂತಾಮಣಿ ರಮೇಶ್‌, ತಾಲೂಕು ಅಧ್ಯಕ್ಷ ಕೃಷ್ಣಪ್ಪ, ಅನುಪಮಾ, ಶಾರದ, ಉಮಾಶಂಕರ್‌ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X