ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

Advertisements

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರೂ. ಕೂಡ ಖರ್ಚಿಲ್ಲದೆ ಮಹಿಳೆಯರಿಗೆ ಹಣ ನೀಡಬೇಕೆನ್ನುವುದು ಸರ್ಕಾರದ ಉದ್ದೇಶ. ಹಾಗಾಗಿ ಸೇವೆ ನೀಡುವ ಕೇಂದ್ರ ಮತ್ತು ವ್ಯಕ್ತಿಗಳಿಗೆ ಸರ್ಕಾರವೇ ಸೇವಾ ಶುಲ್ಕ ಎಂದು ಒಂದು ಅರ್ಜಿಗೆ 20 ರೂ. ನೀಡಲು ನಿರ್ಧರಿಸಿದೆ. ಹಾಗಾಗಿ ಯಾರಾದರೂ ಬಂದು ಹಣ ಕೊಡಿ ಎಂದು ಕೇಳಿದರೆ ಕೊಡಬೇಡಿ ಎಂದು ವಿನಂತಿಸಿದರು.

ಕೆಲವು ಕಡೆ ಮಧ್ಯವರ್ತಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿದ್ದೇನೆ. ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಮಹಿಳೆಯರ ಖಾತೆಗೆ ಹಣ ತಲುಪಬೇಕು ಎನ್ನುವುದು ನಮ್ಮ ಉದ್ದೇಶ. ಇದಕ್ಕೆ ಯಾರೂ ಅವಕಾಶ ಕೊಡಬಾರದು. ಅರ್ಜಿ ಸಲ್ಲಿಸಲು ಯಾವುದೇ ಸಮಯ ಮಿತಿ ಇಲ್ಲದಿರುವುದರಿಂದ ಯಾವುದೇ ಅವಸರವಿಲ್ಲದೆ ನಿಧಾನವಾಗಿ ಅರ್ಜಿ ಹಾಕಲು ಅವಕಾಶ ನೀಡಲಾಗುವುದು. ಹಾಗಾಗಿ ಯಾರೂ ಹಣ ಕಳೆದುಕೊಳ್ಳಬಾರದು ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ನಮಗೆ ಮಾರ್ಗದರ್ಶನ ಮಾಡೋಕೆ ಅಣ್ಣಾಮಲೈ ದೊಡ್ಡ ಹೀರೋನಾ?: ಎಂ ಪಿ ರೇಣುಕಾಚಾರ್ಯ

ಕಳೆದ ನಾಲ್ಕು ತಿಂಗಳಿನಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಾಲು ಪೌಡರ್ ಪೂರೈಕೆಯಾಗುತ್ತಿಲ್ಲ. ದರ ಹೆಚ್ಚಳವಾಗಿದ್ದರಿಂದ ಹಾಲು ಪೂರೈಸಲು ಸಾಧ್ಯವಿಲ್ಲ ಎಂದು ಕೆಎಂಎಫ್ ನವರು ನಿಲ್ಲಿಸಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಹೆಬ್ಬಾಳ್ಕರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾವು ಶಾಸಕರಾಗಿದ್ದ ಅವಧಿಯಲ್ಲಿ ತಮ್ಮ ಆಪ್ತ ಸಹಾಯಕರಾಗಿದ್ದ ಬೆಳಗಾವಿಯ ಗ್ರೇಡ್ 2 ತಹಶೀಲ್ದಾರ್‌ ಅಶೋಕ ಮಣ್ಣಿಕೇರಿ ಅಕಾಲಿಕ ನಿಧನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ ಸೂಚಿಸಿದರು. ಅಶೋಕ ಮಣ್ಣಿಕೇರಿ ಮನೆಗೆ ತೆರಳಿ ಮೃತ ದೇಹದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X