ಬೀದರ್‌ | ದೇಶದ ಸಂಸ್ಕೃತಿಗೆ, ಅಭಿವೃದ್ಧಿಗೆ ಅಲೆಮಾರಿ ಸಮುದಾಯದ ಕೊಡುಗೆ ಅಪಾರ : ಪಲ್ಲವಿ.ಜಿ

Date:

Advertisements

ನಮ್ಮ ದೇಶದ ಸಾಂಸ್ಕೃತಿಕ ವೈಭವದಲ್ಲಿ, ಜನಜೀವನದಲ್ಲಿ, ಅಭಿವೃದ್ಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲೆಮಾರಿ ಜನಾಂಗಗಳ ಕೊಡುಗೆ ಸ್ಮರಣೀಯವಾದುದಾಗಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಹೇಳಿದರು.

ಬೀದರ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ʼಬೀದರ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಸಮುದಾಯಗಳ ಸಮಸ್ಯೆ, ಸವಾಲುಗಳು ಮತ್ತು ಪರಿಹಾರೋಪಾಯಗಳುʼ ಕುರಿತಾದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ʼವಿದ್ಯಾವಂತರಾದವರು ತಳವರ್ಗದ, ಅಲೆಮಾರಿಗಳ ಚಿಂತನೆ ಮಾಡಬೇಕು. ಧ್ವನಿಯಿಲ್ಲದವರಿಗೆ ಅವಕಾಶ ವಂಚಿತರಿಗೆ ಅವಕಾಶ ನೀಡುವ ಮನಸ್ಸು ಮಾಡಬೇಕು. ಸಮಾಜ ಕಲ್ಯಾಣವೆಂದರೆ ಜನರ ಕಲ್ಯಾಣ, ಸಮುದಾಯದ ಕಲ್ಯಾಣ. ಹೀಗಾಗಿ ಮೂಲನಿವಾಸಿಗಳಾದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲೆಮಾರಿಗಳ ಕುರಿತು ಅಧ್ಯಯನ ಕೈಗೊಂಡು ಅವರ ವಾಸ್ತವ ಬದುಕಿನ ಬಗ್ಗೆ ಬೆಳಕು ಚೆಲ್ಲಬೇಕಾದ ಅವಶ್ಯಕತೆಯಿದೆʼ ಎಂದರು.

Advertisements

ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಬಿ.ಎಸ್.ಆನಂದಕುಮಾರ ಏಕಲವ್ಯ ಮಾತನಾಡಿ, ʼಅಲೆಮಾರಿಗಳು ಸಾರ್ಥಕ ಬದುಕಿನ ನಿಜವಾದ ರೂವಾರಿಗಳು. ನಾಳಿನ ಬದುಕಿಗಾಗಿ, ಸ್ವಚ್ಛ ಭಾರತದ ನಿಜವಾದ ನಾಗರೀಕರು. ಅವರು ತಮ್ಮ ಉಪಜೀವನಕ್ಕಾಗಿ ಹಾವು, ಕೋತಿ, ಕರಡಿ ಆಡುಸುತ್ತಾ ಸಮಾಜದ ಸ್ವಾಸ್ಥಕ್ಕಾಗಿ, ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸುವ ಪ್ರಾಂಜಲಭಾವದ ಕಾಯಕಜೀವಿಗಳು. ಅವರು ಸ್ವಂತ ಸೂರಿಲ್ಲದೇ ನಿರಂತರ ಸಂಚರಿಸಿ ತಾವು ಪಟ್ಟ ಪಾಡೇ ದೇಶಕ್ಕೆ ಹಾಡಾಗಿಸಿದರು. ಅತ್ಯಂತ ಕಠಿಣ ಕೆಲಸಗಳನ್ನು ಈ ಅಲೆಮಾರಿ, ಬುಡಕಟಡ್ಟು ಜನಾಂಗದಿಂದಲೇ ಅಂದಿನ ಆಡಳಿತವರ್ಗ ಮಾಡಿಸಿತುʼ ಎಂದರು.

ʼಅಲೆಮಾರಿಗಳು ಪ್ರಕೃತಿಯ ಆರಾಧಕರು. ಪ್ರಕೃತಿಯೊಂದಿಗೆ ಮಾತಾಡುವವರು. ಅರಣ್ಯದ ಹಕ್ಕನ್ನು ನಿಷೇಧ ಮಾಡಿದಾಗ ಅವರು ಅರಣ್ಯವನ್ನು ತೊರೆದು ದೊಂಬರಾಟ, ದುರುಗಮುರುಗಿ ಮುಂತಾದ ಕಾಯಕದಲ್ಲಿ ತಮ್ಮನ್ನು ಗುರುತಿಸಿಕೊಂಡು ಬಾಳಿದರು. ಇಂದು ಅಲೆಮಾರಿ ಬದುಕು ಆಧುನಿಕತೆಯ ಹೊಡೆತಕ್ಕೆ ಸಿಕ್ಕು ಮೂರಾಬಟ್ಟೆಯಾಗಿದೆ. ಅವರು ತಯಾರಿಸುವ ವಸ್ತುಗಳ ಸ್ಥಾನದಲ್ಲಿ ಇಂದು ಪ್ಲಾಸ್ಟಿಕ್, ಎಲೆಕ್ಟ್ರಾನಿಕ್ ವಸ್ತುಗಳು ಆವರಿಸಿವೆ. ಹೀಗಾಗಿ ಅಲೆಮಾರಿಗಳ ಅಭಿವೃದ್ಧಿ, ಅವರ ಬದುಕು ಕಟ್ಟಿಕೊಡುವಲ್ಲಿ ಎಲ್ಲರೂ ಪ್ರಾಮಾಣಿಕವಾಗಿ, ಸಹಕಾರಿಯಾಗಬೇಕುʼ ಎಂದರು.

ಬೀದರ್ ವಿವಿ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಮಾತನಾಡಿ, ʼಅಲೆಮಾರಿ ಜನಾಂಗ ಧ್ವನಿಯಿಲ್ಲದ, ಶಕ್ತಿಯಿಲ್ಲದ ಜನಾಂಗ. ಬಡವರ ನೋವು ಅದನ್ನು ಅನುಭವಿಸಿದವರಿಗೆ ಮಾತ್ರ ಅರ್ಥವಾಗುತ್ತದೆ. ಇಂದಿಗೂ ನಿರ್ಲಕ್ಷ್ಯಕ್ಕೊಳಗಾದ ಅಲೆಮಾರಿ ಸಮುದಾಯ ನಿರಂತರ ಸಂಚಾರದಿಂದಾಗಿ ಜನಸಂಖ್ಯಾ ಗಣತಿಯಲ್ಲಿ, ಆಧಾರನಲ್ಲಿಯೂ ವಿಳಾಸ ಸಿಗದಷ್ಟು ನತದೃಷ್ಟರಾಗಿದ್ದಾರೆ. ಅವರ ಜೀವನ ನಿಜವಾಗಿಯೂ ಶೋಚನೀಯ. ಅಂತಹ ನಿರ್ಲಕ್ಷಿತರ ಸಬಲೀಕರಣಕ್ಕಾಗಿ ಎಲ್ಲರೂ ಶ್ರಮಿಸಬೇಕಾಗಿದೆʼ ಎಂದರು.

ಬೀದರ ವಿವಿ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್. ಮಾತನಾಡಿ, ʼದೇಶದ ಉದ್ಧಾರವೆಂದರೆ ಎಲ್ಲರ ಜೀವನಮಟ್ಟ ಸುಧಾರಣೆಯಾಗಬೇಕು. ಅಲೆಮಾರಿಗಳ, ತಳವರ್ಗದ ಜನರೆಲ್ಲ ಮುಖ್ಯವಾಹಿನಿಗೆ ತರಬೇಕಾದ ಅವಶ್ಯಕತೆಯಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಏ.30ರಂದು ಬಸವ ಜಯಂತಿ : ವಚನಗಳ ಕಿರುಪುಸ್ತಕ ಹಂಚಲು ನಿರ್ಧಾರ

ಕಾರ್ಯಕ್ರಮದಲ್ಲಿ ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀನಾಗಭೂಷಣ ಕಮಠಾಣೆ, ಶಾಂತಲಿಂಗ ಸಾವಳಗಿ, ಸಚಿನ್ ಶಿವರಾಜ, ವಿಠ್ಠಲದಾಸ ಪ್ಯಾಗೆ, ಅಬ್ದುಲ್ ಸತ್ತಾರಸಾಬ, ವೈಷ್ಣವಿ ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಸಿಂಧು, ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರನಾಯ್ಕ.ಟಿ., ಬೀದರ ವಿವಿ ವಿಶೇಷಾಧಿಕಾರಿ ಡಾ.ರವೀಂದ್ರನಾಥ ವಿ.ಗಬಾಡಿ, ಬೀದರ ಹಾಗೂ ವಿವಿಧ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X