ಕೊಪ್ಪಳ | ನ್ಯಾಯಾಂಗ ನಿಂದನೆ; ಜಪ್ತಿಗೆ ಬಂದವರಿಗೆ ಕಾರು ಕೀ ಕೊಡದೆ ಸತಾಯಿಸಿದ ಡಿಸಿ ನಳೀನ್ ಅತುಲ್

Date:

Advertisements

ಕೊಪ್ಪಳ ಜಿಲ್ಲಾಧಿಕಾರಿ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದು, ನ್ಯಾಯಾಲಯದ ಆದೇಶದಂತೆ ಕಾರ್ ಜಪ್ತಿ ಮಾಡಲು ಸಿಬ್ಬಂದಿ ಬಂದಾಗ ಅವಕಾಶ ಕೊಡದ ಡಿಸಿ ನಳೀನ್ ಅತುಲ್ ಮತ್ತೆ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ.

ಗಂಗಾವತಿಯ ರಸ್ತೆ ಅಗಲಿಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದರ ವಿಚಾರಣೆ ನಡೆಸಿದ್ದ ನಗರ ನ್ಯಾಯಾಲಯ, ಜಿಲ್ಲಾಧಿಕಾರಿ ಕಾರನ್ನು ಜಪ್ತಿ ಮಾಡಲು ಆದೇಶಿಸಿತ್ತು. ಕಾರು ಜಪ್ತಿ ಮಾಡಲು ಕೋರ್ಟ್ ಅಧಿಕಾರಿಗಳು ಹೋದಾಗ ಕಾರಿನ ಕೀ ಕೊಡದೇ ಸತಾಯಿಸಿದ್ದಾರೆ.

ಗಂಗಾವತಿ ನಗರಸಭೆ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಈ ವೇಳೆ ಗಂಗಾವತಿಯ ಕಲ್ಮಠ ಹಾಗೂ ವೀರುಪಾಕ್ಷಪ್ಪ ಅವರ ಭೂಮಿ ಒತ್ತುವರಿ ಮಾಡಿ ರಸ್ತೆ ಅಗಲೀಕರಣ ಮಾಡಲಾಗಿದೆ. ಮಾಲೀಕರಿಗೆ ಮಾಹಿತಿ ನೀಡದೆ ರಸ್ತೆ ಅಗಲೀಕರಣ ಮಾಡಿದ್ದು, ಜಮೀನು ಮಾಲೀಕರಿಗೆ ಪರಿಹಾರ ಕೊಡದ ಹಿನ್ನೆಲೆ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಏ.30ರಂದು ಬಸವ ಜಯಂತಿ : ವಚನಗಳ ಕಿರುಪುಸ್ತಕ ಹಂಚಲು ನಿರ್ಧಾರ

ಸುದೀರ್ಘ 6 ವರ್ಷಗಳ ಕಾಲ ವಿಚಾರಣೆ ನಡೆಸಿದ್ದ ಕೋರ್ಟ್‌ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡಲು ಆದೇಶ ಮಾಡಿತ್ತು. ವಿಚಾರಣೆ ಮಾಡಿದ ಬಳಿಕ ಕಲ್ಮಠಕ್ಕೆ ಸುಮಾರು ₹7 ಲಕ್ಷ, ವಿರೂಪಾಕ್ಷಪ್ಪ ಅವರಿಗೆ ₹6 ಲಕ್ಷ ಪರಿಹಾರ ನೀಡಲು ಆದೇಶ ಮಾಡಿತ್ತು. ಈವರೆಗೂ ಪರಿಹಾರ ಸಿಕ್ಕಿರಲಿಲ್ಲ. ಹೀಗಾಗಿ ಮಾಲೀಕರು ಮತ್ತೊಮ್ಮೆ ಕೋರ್ಟ್ ಮೊರೆ ಹೋದಾಗ ಗಂಗಾವತಿಯ ಹಿರಿಯ ಶ್ರೇಣಿಯ ನ್ಯಾಯಾಲಯ ಕಾರು ಜಪ್ತಿ ಮಾಡಲು ಆದೇಶ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X