ವಿವಾಹೇತರ ಸಂಬಂಧ ಶಂಕೆ: ಪತ್ನಿ, ಇಬ್ಬರು ಹೆಣ್ಣುಮಕ್ಕಳ ಮೇಲೆ ಆ್ಯಸಿಡ್ ಎರಚಿದ ದುರುಳ

Date:

Advertisements

ವಿವಾಹೇತರ ಸಂಬಂಧವಿದೆ ಎಂದು ಶಂಕಿ ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣುಮಕ್ಕಳ ಮೇಲೆ ಆ್ಯಸಿಡ್ ಎರಚಿದ ಘಟನೆ ಉತ್ತರ ಪ್ರದೇಶದ ಟಿಕ್ರಿ ಗ್ರಾಮದಲ್ಲಿ ನಡೆದಿದೆ.

ಆ್ಯಸಿಡ್ ದಾಳಿಯಿಂದ 39 ವರ್ಷದ ರಾಮಗುಣಿ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳಾದ 16 ವರ್ಷದ ನೇಹಾ ಮತ್ತು 23 ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ವಿವಾಹೇತರ ಸಂಬಂಧಕ್ಕೆ 35 ವರ್ಷದ ಮಹಿಳೆ ಬಲಿ

Advertisements

ಈ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ನಗರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ದೇವೇಂದ್ರ ಕುಮಾರ್, “ಸಂತ್ರಸ್ತ ಮಹಿಳೆ ತನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನೊಂದಿಗೆ ಟಿಕ್ರಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆಕೆಯ ಪತಿ ರಾಮ್ ಗೋಪಾಲ್ ಶಹಾಬಾದ್ ಹರ್ದೋಯ್‌ನಲ್ಲಿ ವಾಸಿಸುತ್ತಿದ್ದನು. ಶುಕ್ರವಾರ ರಾತ್ರಿ, ರಾಮಗುಣಿ ಮತ್ತು ಆಕೆಯ ಹೆಣ್ಣುಮಕ್ಕಳು ನಿದ್ರಿಸುತ್ತಿದ್ದಾಗ ಆಕೆಯ ಪತಿ ಗೋಡೆ ಹಾರಿ ಮನೆಗೆ ನುಗ್ಗಿ ಅವರ ಮೇಲೆ ಆ್ಯಸಿಡ್ ಎರಚಿದ್ದಾನೆ” ಎಂದು ತಿಳಿಸಿದ್ದಾರೆ.

ಘಟನೆಯ ಸಮಯದಲ್ಲಿ, ರಾಮಗುಣಿ ಅವರ ಮಗ ಆಶು ತನ್ನ ಸ್ನೇಹಿತರೊಂದಿಗೆ ಇದ್ದ. ಬಳಿಕ ತನ್ನ ತಂದೆಯ ವಿರುದ್ಧ ದೂರು ದಾಖಲಿಸಿದ್ದಾನೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಒಡಿಶಾ | ಅಲೆಮಾರಿ ಕುಟುಂಬದ ಐವರ ಬರ್ಬರ ಹತ್ಯೆ; ಐವರ ಅಪಹರಣ

ಗಾಯಾಳುಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ತನ್ನ ತಂದೆ ಮದ್ಯವ್ಯಸನಿಯಾಗಿದ್ದು, ವ್ಯಸನದಿಂದಾಗಿ ಶಹಾಬಾದ್ ಪ್ರದೇಶದಲ್ಲಿರುವ ತನ್ನ ಕೃಷಿ ಭೂಮಿಯನ್ನು ಮಾರಿದ್ದಾಗಿ ಆಶು ಪೊಲೀಸರಿಗೆ ತಿಳಿಸಿದ್ದಾನೆ.

ಇದರ ನಂತರ, ರಾಮಗುಣಿ ತನ್ನ ಮಕ್ಕಳೊಂದಿಗೆ ಟಿಕ್ರಿ ಗ್ರಾಮಕ್ಕೆ ತೆರಳಿದರು. ಆದರೂ ಆಕೆಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನಿಸಿದ ಪತಿ ಆಗಾಗ್ಗೆ ಬಂದು ನೋಡುತ್ತಿದ್ದ ಎನ್ನಲಾಗಿದೆ. ಸದ್ಯ ಗೋಪಾಲ್ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆಹಚ್ಚಲು ಹುಡುಕಾಟ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X