ಬೆಳಗಾವಿ | ಜುಲೈ 2ರಂದು ‘ಅನ್ನಭಾಗ್ಯದಡಿ ಸಿರಿಧಾನ್ಯ’ ವಿಚಾರಗೋಷ್ಠಿ

Date:

Advertisements

ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಅಕ್ಕಿ ದಾಸ್ತಾನಿಗಾಗಿ ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಕೇಂದ್ರ ಸರ್ಕಾರ ಅಸಕಾರದಿಂದ ಬೇಸತ್ತಿರುವ ಸರ್ಕಾರ ಪಡಿತರದಾರರಿಗೆ ತಲಾ 5 ಕೆ.ಜಿ ಅಕ್ಕಿ ಮತ್ತು ಉಳಿದ ಐದು ಕೆ.ಜಿ ಅಕ್ಕಿ ಬದಲಿಗೆ ಹಣ ನೀಡುವುದಾಗಿ ಘೋಷಿಸಿದೆ. ಈ ಮಧ್ಯೆ, ಹಣದ ಬದಲಿಗೆ ರೈತರು ಸ್ಥಳೀಯವಾಗಿ ಬೆಳೆಯುವ ರಾಗಿ, ಜೋಳಗಳನ್ನು ಖರೀದಿಸಿ, ಪಡಿತರದಾರರಿಗೆ ವಿತರಿಸಬೇಕೆಂಬ ಸಲಹೆಗಳೂ ಕೇಳಿಬಂದಿದೆ.

ಅದೇ ರೀತಿಯಲ್ಲಿ ಅನ್ನಭಾಗ್ಯ ಯೋಜನೆಯಡಿ ಸಿರಿಧಾನ್ಯಗಳನ್ನು ವಿತರಿಸಬೇಕು ಎಂಬ ಒತ್ತಾಯಗಳೂ ಇವೆ. ಪಡಿತರದಾರರಿಗೆ ಸಿರಿಧಾನ್ಯಗಳನ್ನು ವಿತರಣೆ ಮಾಡುವುದರಿಂದ, ಅವರಿಗೆ ಪೌಷ್ಠಿಕ ಆಹಾರ ದೊರೆಯುತ್ತದೆ. ಆರೋಗ್ಯವೂ ಸುಧಾರಣೆಯಾಗುತ್ತದೆ ಎಂದು ಹೇಳಲಾಗುತ್ತಿದೆ.

ಈ ಒತ್ತಾಯದ ಭಾಗವಾಗಿ, ಬೆಳಗಾವಿಯಲ್ಲಿ ಜುಲೈ 2ರ ಭಾನುವಾರ, ‘ಅನ್ನಭಾಗ್ಯದಡಿ ಸಿರಿಧಾನ್ಯ ತಂದು ಹಸಿವು, ಅಪೌಷ್ಟಿಕತೆ ಹೊಡೆದೋಡಿಸೋಣ’ ಎಂಬ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.

Advertisements

ಕಾರ್ಯಕ್ರಮದಲ್ಲಿ ಕೃಷಿ ಆರ್ಥಿಕ ತಜ್ಞ ಡಾ. ಪ್ರಕಾಶ ಕಮ್ಮರಡಿ ಮತ್ತು ಆರ್ಥಿಕ ತಜ್ಞ ಜಿ.ವಿ ಸುಂದರ ವಿಷಯ ಮಂಡಿಸಲಿದ್ದಾರೆ. ಜಾಗೃತ ಮಹಿಳಾ ವೇದಿಕೆಯ ಶಾರದಾ ಗೋಪಾಲ್, ಭಾರತೀಯ ಕೃಷಿಕ ಸಮಾಜದ ಸಿದಗೌಡ ಮೋದಗಿ,  ಭಾರತೀಯ ಕಿಸಾನ್ ಯೂನಿಯನ್‌ನ ಕಾ. ಸಿದ್ದನಗೌಡ ಪಾಟೀಲ, ಕಾ. ನೇಗೇಶ ಸಾತೇರಿ ಭಾಗವಹಿಸಿದ್ದಾರೆ.

WhatsApp Image 2023 06 29 at 7.21.06 PM 1 1

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X