ಹಾಸನ | ಪ್ರಜ್ವಲ್ ರೇವಣ್ಣ ಲೈಂಗಿಕ ಹಲ್ಲೆ ಪ್ರಕರಣ; ದಿನನಿತ್ಯ ವಿಚಾರಣೆ

Date:

Advertisements

ಹಾಸನ ಕ್ಷೇತ್ರದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಮೇಲಿರುವ ಲೈಂಗಿಕ ಕಿರುಕುಳದ ಕೇಸುಗಳ ಪೈಕಿ ಒಂದು ಪ್ರಕರಣ ವಿಚಾರಣೆ ಇದೇ 23ರಿಂದ ದಿನ ನಿತ್ಯ ನಡೆಯಲಿದೆ.

ಮನೆಗೆಲಸದ ಹೆಣ್ಣುಮಗಳ ಮೇಲೆ ಹೊಳೆನರಸೀಪುರದ ಗನ್ನಿಗಢ ಫಾರ್ಮ್‌ ಹೌಸ್‌ ಲೈಂಗಿಕ ಹಲ್ಲೆಯ ಪ್ರಕರಣವನ್ನು ಸಂಸದರ ಮತ್ತು ಶಾಸಕರ ವಿಶೇಷ ನ್ಯಾಯಾಲಯವು ಈ ತಿಂಗಳ 23ರಿಂದ 29ರ(ಭಾನುವಾರ ಹೊರತುಪಡಿಸಿ) ತನಕ ನಡೆಸಲಿದೆ.

2021ರ ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಪ್ರಜ್ವಲ್ ಈ ಗೆಸ್ಟ್ ಹೌಸ್‌ಗೆ ಬಂದು ಈ ಹೆಣ್ಣುಮಗಳ ಮೇಲೆ ಲೈಂಗಿಕ ಹಲ್ಲೆ ನಡೆಸಿದ್ದಾಗಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿಕೊಳ್ಳಲಾಗಿರುವ ಆಪಾದನಾ ಪಟ್ಟಿಯಲ್ಲಿ ಹೇಳಲಾಗಿದೆ. ಆಪಾದನಾಪಟ್ಟಿಯ ಪ್ರಕಾರ ಪ್ರಜ್ವಲ್ ಈ ಹಲ್ಲೆಯನ್ನು ತಮ್ಮ ಮೊಬೈಲ್ ಫೋನಿನಲ್ಲಿ ರೆಕಾರ್ಡ್ ಮಾಡಿದ್ದಾರೆ.

Advertisements

ಹೆಣ್ಣುಮಗಳು 2022ರಲ್ಲಿ ಗೆಸ್ಟ್ ಹೌಸ್ ಕೆಲಸವನ್ನು ತೊರೆದು ತಮ್ಮ ಹಳ್ಳಿಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. 2024ರ ಏಪ್ರಿಲ್ 28ರಿಂದ ಜೂನ್ 10ರ ಅವಧಿಯಲ್ಲಿ ಪ್ರಜ್ವಲ್ ವಿರುದ್ಧ ಲೈಂಗಿಕ ಹಲ್ಲೆಯ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು. ಬೆಂಗಳೂರಿನಲ್ಲಿ ಮೂರು ಮತ್ತು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆರ್‌ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪಂಚಮಸಾಲಿ ಸಮಾಜದ ಹಿಡಿತಕ್ಕೆ ಎರಡು ಗುಂಪುಗಳ ನಡುವೆ ಸಂಘರ್ಷ

ಜಿಲ್ಲಾ ಪಂಚಾಯಿತಿ ಸದಸ್ಯೆಯೊಬ್ಬರ ಮೇಲೆ ನಡೆಸಲಾದ ಲೈಂಗಿಕ ಹಲ್ಲೆ ಪ್ರಕರಣದಲ್ಲಿ ಪ್ರಜ್ವಲ್ ಅವರ ಜಾಮೀನು ಕೋರಿಕೆ ಅರ್ಜಿಯನ್ನು ನ್ಯಾಯಾಲಯ ನೆನ್ನೆ(ಏಪ್ರಿಲ್ 19) ತಿರಸ್ಕರಿಸಿತ್ತು. ಲೈಂಗಿಕ ಹಲ್ಲೆಗೆ ಗುರಿಯಾದ ಹೆಣ್ಣುಮಗಳು ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡಲಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X