ಶಿವಮೊಗ್ಗ | ಸೊರಬ ಗೋವು ಸಂರಕ್ಷಣೆಗೆ ಸರ್ಕಾರ ಬದ್ದ ; ಮಧು ಬಂಗಾರಪ್ಪ

Date:

Advertisements

ಗೋ ಸಂರಕ್ಷಣೆಗೆ ಸರ್ಕಾರ ಬದ್ಧ ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಚಾಲನೆ ನೀಡಿದರು.

ಏಪ್ರಿಲ್ 21 ರಿಂದ ಜೂನ್ 4 ರವರೆಗೆ ರಾಜ್ಯಾದ್ಯಂತ 45 ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ.ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುವ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿರುವ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗ ಲಸಿಕೆ ಅಭಿಯಾನದ 7 ನೇ ಸುತ್ತಿನ ಪೋಸ್ಟರ್ ಅನ್ನು ಅನಾವರಣಗೊಳಿಸಿದ ನಂತರ, ಶ್ರೀ ಎಸ್. ಮಧು ಬಂಗಾರಪ್ಪ ಅವರು ಸಾರ್ವಜನಿಕರು ಉಚಿತ ಲಸಿಕೆ ಅಭಿಯಾನದ ಲಾಭವನ್ನು ಪಡೆದುಕೊಳ್ಳಬೇಕು ಮತ್ತು ತಮ್ಮ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗ ಎರಡರ ವಿರುದ್ಧ ಲಸಿಕೆ ಹಾಕುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಅಭಿಯಾನವನ್ನು ಬೆಂಬಲಿಸಬೇಕೆಂದು ಹೇಳಿದರು.

1001500214

“ಕಾಲು ಬಾಯಿ ರೋಗ ಹಾಗೂ ಚರ್ಮ ಗಂಟು ರೋಗಕ್ಕೆ ಒಳಗಾಗುವ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿಗಳು ನಿಮ್ಮ ಗ್ರಾಮಕ್ಕೆ ಭೇಟಿ ಲಸಿಕೆ ಹಾಕುತ್ತಾರೆ. ಅವರೊಂದಿಗೆ ಸಹಕರಿಸಿ ಮತ್ತು ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಂಡು ಈ ರೋಗಗಳಿಂದ ಗೋವುಗಳನ್ನು ರಕ್ಷಿಸಿ” ಗೋಗಳ ಸಂರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿರುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Advertisements

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಿದೆ. ಜಾನುವಾರು ಸಾಕಾಣಿಕೆ ದಾರರು ಎದುರಿಸಲು ಉಪಯೋಗಪಡಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಪಶುಪಾಲನ ಇಲಾಖೆಯ ಉಪ ನಿರ್ದೇಶಕರಾದ ಡಾ.ಬಾಬುರತ್ನ ಎ. ಉಪನಿರ್ದೆಶಕರು(ಆಡಳಿತ), ಡಾ.ವಿನಯಕುಮಾರ.ವೈ.ಎಲ್ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ), ಡಾ.ಪ್ರದೀಪ ಕುಮಾರ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) ಇವರು ಉಪಸ್ಥಿತರಿದ್ದರು ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X