ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜ್ಯಪಾಲರ ಭೇಟಿ: ರಾಜೀನಾಮೆ ಸಾಧ್ಯತೆ

Date:

Advertisements

ಮಣಿಪುರ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ಹೆಚ್ಚಾಗಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

ಮುಖ್ಯಮಂತ್ರಿಗಳು ಶುಕ್ರವಾರ(ಜೂನ್‌ 30) ಮಧ್ಯಾಹ್ನ 3 ಗಂಟೆಗೆ ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯ್ಕೆ ಅವರಿಗೆ ತಮ್ಮ ರಾಜೀನಾಮೆಯನ್ನು ಹಸ್ತಾಂತರಿಸುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಮಾಧ್ಯಮದ ವರದಿಯ ಪ್ರಕಾರ, ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ರಾಜೀನಾಮೆ ಸುದ್ದಿಯನ್ನು ಪತ್ರಿಕೆಯಲ್ಲಿ ಪ್ರಕಟಿಸುವ ಆಯ್ಕೆಯನ್ನು ಪತ್ರಿಕಾ ಮಂಡಳಿಗೆ ನೀಡಲಾಗಿತ್ತು ಅಥವಾ ಕೇಂದ್ರವು ಮಧ್ಯಪ್ರವೇಶಿಸಿ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ.

Advertisements

ಈ ವರದಿಗಳಿಗೆ ಪ್ರತಿಕ್ರಿಯೆಯಾಗಿ, ಶುಕ್ರವಾರ ಮಣಿಪುರ ಮುಖ್ಯಮಂತ್ರಿಗಳ ಸಚಿವಾಲಯ ಮತ್ತು ರಾಜಭವನದ ಹೊರಗೆ ಮಹಿಳೆಯರ ಗುಂಪೊಂದು ಜಮಾಯಿಸಿ, ಸಿಂಗ್ ಅವರು ರಾಜೀನಾಮೆ ನೀಡದಂತೆ ಒತ್ತಾಯಿಸಿತು. ಅಲ್ಲದೆ ತೊಂದರೆ ಉಂಟುಮಾಡುವವರ ವಿರುದ್ಧ ದೃಢವಾದ ನಿಲುವು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಯನ್ನು ಕೇಳಿಕೊಂಡರು.

ಈ ಸುದ್ದಿ ಓದಿದ್ದೀರಾ? ತಮಿಳುನಾಡು ರಾಜ್ಯಪಾಲರ ಏಕಪಕ್ಷೀಯ ಸಚಿವರ ವಜಾ ನಿರ್ಧಾರ; ಅಮಿತ್‌ ಶಾ ಸಲಹೆ ಮೇರೆಗೆ ಆದೇಶಕ್ಕೆ ತಡೆ

ಸುದ್ದಿ ಸಂಸ್ಥೆ ಪ್ರಕಾರ, ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಘಟನೆಯಲ್ಲಿ, ಗುರುವಾರ ಭದ್ರತಾ ಪಡೆಗಳು ಮತ್ತು ಶಂಕಿತ ಗಲಭೆಕೋರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ .

ಮಣಿಪುರದಲ್ಲಿ ಕೇಂದ್ರದ ಮಧ್ಯಪ್ರವೇಶಬೇಕೆಂದು ಪ್ರತಿಭಟನಾಕಾರರು ಮತ್ತು ರಾಜಕೀಯ ಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ. ಒಂದು ತಿಂಗಳ ಹಿಂದೆ, ಮಣಿಪುರದ ಕುಕಿ ಸಮುದಾಯದ ಸದಸ್ಯರು ಮುಖ್ಯಮಂತ್ರಿಯ ಮೇಲಿನ ನಂಬಿಕೆಯನ್ನು ಕಳೆದುಕೊಂಡ ನಂತರ ಮಣಿಪುರದಲ್ಲಿ ಸಾಮಾನ್ಯ ಸ್ಥಿತಿಗೆ ತರಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜೂನ್‌ನಲ್ಲಿ ಮಣಿಪುರದ ಒಂಬತ್ತು ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ಮೇಲೆ ರಾಜ್ಯದ ಜನರು ಸಂಪೂರ್ಣ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ಮೀಟೀ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳಿಂದ ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ರಾಹುಲ್ ಗಾಂಧಿ ಭೇಟಿ

ಮಣಿಪುರ ರಾಜ್ಯದ ಚುರಾಚಂದ್‌ಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ನಿರಾಶ್ರಿತರಾದ ಜನರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಪರಿಹಾರ ಶಿಬಿರದಲ್ಲಿ ಭೇಟಿ ಮಾಡಿದರು.

ಪರಿಹಾರ ಶಿಬಿರದಲ್ಲಿ ಮಕ್ಕಳೊಂದಿಗೆ ರಾಹುಲ್‌ ಗಾಂಧಿ ಊಟ ಮಾಡಿದರು. ಪೋಷಕರು ಹಾಗೂ ಹಿರಿಯ ನಾಯಕರ ನೋವು ನಲಿವುಗಳನ್ನು ಹಂಚಿಕೊಂಡರು.

“ನಾನು ಮಣಿಪುರ ರಾಜ್ಯದ ನನ್ನ ಎಲ್ಲ ಸಹೋದರ ಸಹೋದರಿಯರ ಸಂಕಷ್ಟ ಕೇಳಲು ಬಂದಿದ್ದೇನೆ. ಎಲ್ಲ ಸಮುದಾಯಗಳ ಜನರು ನನ್ನನ್ನು ಸ್ವಾಗತಿಸಿ ಪ್ರೀತಿಯಿಂದ ಬರಮಾಡಿಕೊಂಡಿದ್ದಾರೆ. ಸರ್ಕಾರ ನನ್ನನ್ನು ತಡೆಯುತ್ತಿರುವುದು ತುಂಬಾ ದುರದೃಷ್ಟಕರ. ಮಣಿಪುರಕ್ಕೆ ಸಹಜ ಸ್ಥಿತಿಗೆ ಮರಳಬೇಕಿದೆ. ಶಾಂತಿ ನಮ್ಮ ಆದ್ಯತೆಯಾಗಬೇಕು” ಎಂದು ರಾಹುಲ್‌ ಗಾಂಧಿ ಹೇಳಿದರು.

ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಮಣಿಪುರದ ಚುರಾಚಂದ್‌ಪುರ ಜಿಲ್ಲೆಗೆ ತೆರಳುತ್ತಿದ್ದಾಗ ಪೊಲೀಸರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಬೆಂಗಾವಲು ವಾಹನ ತಡೆಹಿಡಿದ ನಂತರ ಅವರು ಹೆಲಿಕಾಪ್ಟರ್‌ ಮೂಲಕ ಸಂತ್ರಸ್ತರ ಶಿಬಿರಗಳಿಗೆ ತೆರಳಿದರು.

ಮೇ 3 ರಂದು ಮೊದಲ ಬಾರಿಗೆ ಹಿಂಸಾಚಾರ ನಡೆದ ನಂತರ ಈಶಾನ್ಯ ರಾಜ್ಯಕ್ಕೆ ರಾಹುಲ್ ಗಾಂಧಿ ಅವರ ಮೊದಲ ಭೇಟಿ ಇದಾಗಿದೆ.

ಹಿಂಸಾಚಾರ ಹೆಚ್ಚಾಗುವ ಭೀತಿಯಿಂದಾಗಿ ಬೆಂಗಾವಲು ವಾಹನ ತಡೆ ಹಿಡಿಯಲಾಯಿತು ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಬೆಂಗಾವಲು ವಾಹನ ತಡೆ ಹಿಡಿದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X