ಕಳ್ಳತನದ ಆರೋಪ | ಕಾರ್ಮಿಕರ ಉಗುರು ಕಿತ್ತು, ವಿದ್ಯುತ್ ಶಾಕ್ ನೀಡಿ ವಿಕೃತಿ

Date:

Advertisements

ಹಣ ಕದ್ದಿದ್ದಾರೆಂಬ ಆರೋಪದ ಮೇಲೆ ಇಬ್ಬರು ಕಾರ್ಮಿಕರ ಮೇಲೆ ಕಾರ್ಖಾನೆ ಮಾಲೀಕ ವಿಕೃತವಾಗಿ ದೌರ್ಜನ್ಯ ನಡೆಸಿರುವ ಅಮಾನವೀಯ ಘಟನೆ ಛತ್ತೀಸ್‌‌ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.

ಕೊರ್ಬಾ ಜಿಲ್ಲೆಯ ಖಾಪ್ರಭಟ್ಟಿ ಪ್ರದೇಶದ ಐಸ್ ಕ್ರೀಮ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ಅಭಿಷೇಕ್ ಭಾಂಬಿ ಮತ್ತು ವಿನೋದ್ ಭಾಂಬಿ ಎಂಬರ ಮೇಲೆ ಮಾಲೀಕ ಚೋಟು ಗುರ್ಜರ್ ಎಂಬಾತ ದೌರ್ಜನ್ಯ ಎಸಗಿದ್ದಾನೆ. ಕಾರ್ಮಿಕರ ಉಗುರು ಕಿತ್ತು, ಅರೆಬೆತ್ತಲೆಗೊಳಿಸಿ, ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ಕೊಟ್ಟಿದ್ದಾನೆ.

ಇತ್ತೀಚೆಗೆ, ಅಭಿಷೇಕ್ ತನ್ನ ವಾಹನ ನಿರ್ವಹಣೆಗಾಗಿ ಮಾಲೀಕನ ಬಳಿ 20,000 ರೂ. ಮುಂಗಣ ಹಣ ಕೇಳಿದ್ದರು. ಆದರೆ, ಹಣ ಕೊಡಲು ಮಾಲೀಕ‌ ನಿರಾಕರಿಸಿದ್ದರು. ಹೀಗಾಗಿ, ಕೆಲಸ ಬಿಡುವುದಾಗಿ ಅಭಿಷೇಕ್ ಹೇಳಿದ್ದರು. ಇದರಿಂದ ವಿಚಲಿತಗೊಂಡಿದ್ದ. ಮಾಲೀಕ, ಕೆಲ ದಿನಗಳ ಬಳಿಕ ಅಭಿಷೇಕ್ ಮತ್ತು ವಿನೋದ್ ಮೇಲೆ‌ ಕಳ್ಳತನದ ಆರೋಪ ಹೊರಿಸಿ, ದೌರ್ಜನ್ಯ ಎಸಗಿ ವಿಕೃತಿ ಮೆರೆದಿದ್ದಾರೆ.

Advertisements

ಕಾರ್ಖಾನೆಯ ಮಾಲೀಕ ಚೋಟು ಗುರ್ಜಾರ್ ಮತ್ತು ಆತನ ಸಹಾಯಕ ಮುಖೇಶ್ ಶರ್ಮಾ – ಇಬ್ಬರೂ ಸೇರಿ ಕಾರ್ಮಿಕರನ್ನು ಅರೆಬೆತ್ತಲೆಗೊಳಿಸಿ, ಅಮಾನುಷವಾಗಿ ಥಳಿಸಿ, ಅವರ ಕೈಗಳ ಉಗುರು ಕಿತ್ತು, ವಿದ್ಯುತ್ ಶಾಕ್ ಕೊಟ್ಟು ದೌರ್ಜನ್ಯ ಎಸಗಿದ್ದಾರೆ.

ಸಂತ್ರಸ್ತ ಕಾರ್ಮಿಕರು ಗುಲಾಬ್ಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಕೊರ್ಬಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದಾಗ್ಯೂ, ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಎಸ್‌ಎಚ್‌ಒ ಪ್ರಮೋದ್ ದಡ್ಸೆನಾ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X