ಗುಬ್ಬಿ | ಏಪ್ರಿಲ್ 23 ರಂದು ಬೃಹತ್ ಜನಕ್ರಾಂತಿ ಸಮಾವೇಶ

Date:

Advertisements

ಏಪ್ರಿಲ್ 23 ರಂದು ಬೆಂಗಳೂರಿನಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನದ ಅಂಗವಾಗಿ ಕೋಮುವಾದ ದಿಕ್ಕರಿಸಿ, ಸಂವಿಧಾನ ರಕ್ಷಿಸಿ, ದಲಿತರ ಅಭಿವೃದ್ಧಿಗಾಗಿ ಬೃಹತ್ ಜನಕ್ರಾಂತಿ ಸಮಾವೇಶ ನಡೆಯಲಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಿಎಸ್ಎಸ್ 

ತಾಲೂಕು ಸಂಘಟನಾ ಸಂಚಾಲಕ ಹರಿವೇಸಂದ್ರ ಕೃಷ್ಣಪ್ಪ ಮನವಿ ಮಾಡಿದರು.

ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ ಗುರುಮೂರ್ತಿ ನೇತೃತ್ವದಲ್ಲಿ ನಡೆಯಲಿರುವ ಜನಕ್ರಾಂತಿ ಸಮಾವೇಶದಲ್ಲಿ ದಲಿತರ 15 ಹಕ್ಕೋತ್ತಾಯಗಳನ್ನು ಮಂಡಿಸಲಾಗುತ್ತದೆ. ಪ್ರಗತಿಪರ ಸಂಘಟನೆಗಳು, ದಲಿತ ಮುಖಂಡರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬರಬೇಕೆಂದು ತಿಳಿಸಿದರು. 

Advertisements

ಡಿಎಸ್ಎಸ್ ಮುಖಂಡ ಸಿ ಎಸ್ ಪುರ ಬೆಟ್ಟಸ್ವಾಮಿ ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರು ಅಲ್ಲಿಂದ ಇಲ್ಲಿಯವರೆಗೂ ಕೆಲವು ಕೋಮುವಾದಿ ಸಂಘಟನೆಗಳು ಸಂವಿಧಾನವನ್ನು ವಿರೋಧಿಸಿಕೊಂಡೇ ಬರುತ್ತಿವೆ. ಸಂವಿಧಾನದ ಉಳಿವಿಗಾಗಿ ದಲಿತಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಕೈಜೋಡಿಸಬೇಕು ಜನಕ್ರಾಂತಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಎಸ್ಎಸ್ ತಾಲೂಕು ಉಸ್ತುವಾರಿ ನರೇಂದ್ರ ಕುಮಾರ್, ನಗರ ಸಂಚಾಲಕ ಜಿ ಎಚ್ ಕೃಷ್ಣಸ್ವಾಮಿ ಸೇರಿದಂತೆ ಹಲವು ದಲಿತ ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X