ಉಡುಪಿ | ಹಿಜಾಬ್ ತೆಗೆಸುವಾಗ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ, ಸಂವಿಧಾನ ವಿರೋಧಿ ಆಗಿಲ್ವಾ ?

Date:

Advertisements

ಸಿಇಟಿ ಪರೀಕ್ಷೆಗೆ ಹಾಜರಾಗುವ ಜನಿವಾರ ತೆಗೆಸಿದ್ದನ್ನು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುದೇಂದ್ರ ತೀರ್ಥರು ತೀವ್ರವಾಗಿ ಖಂಡಿಸಿದ್ದಾರೆ, ಜನಿವಾರವೆಂಬುದು ಧರ್ಮ, ಸಂಪ್ರದಾಯ, ಹಾಗೂ ಬ್ರಾಹ್ಮಣತ್ವದ ಪ್ರತೀಕ ಎಂದಿದ್ದಾರೆ. ಜನಿವಾರ ತೆಗೆಸಿದ್ದರಿಂದ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ. ಇದು ಸಂವಿಧಾನ ವಿರೋಧಿ ನಡೆಯೂ ಆಗಿದೆ, ಸಂವಿಧಾನದಲ್ಲಿ ಎಲ್ಲಾ ಧರ್ಮವನ್ನೂ ಆಚರಿಸುವ ಅವಕಾಶ ಕಲ್ಪಿಸಲಾಗಿದೆ ಎಂದಿರಿ. ಒಪ್ಪಿಕೊಳ್ಳೋಣ ಅಂದು ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಹಾಕಿದ್ದರಿಂದ ಶಾಲೆಯಿಂದ ಹೊರಗಟ್ಟಿದರಲ್ಲಾ ಆಗ ತಮಗೆ ಇದು ಸಂಪ್ರದಾಯ ವಿರೋಧಿ ಧರ್ಮ ವಿರೋಧಿ ಅನಿಸಲಿಲ್ವಾ. ಶಾಲೆಗೆ ಹೋಗುವ ಮಕ್ಕಳನ್ನು ಹಿಜಾಬ್ ಧರಿಸಿ ಕ್ಲಾಸಿಗೆ ಬರುವ ಹಾಗಿಲ್ಲಾ ಎಂದು ಶಾಲೆಯಿಂದ ಹೊರಹಾಕಿ ಆ ಹೆಣ್ಣು ಮಕ್ಕಳ ಶಿಕ್ಷಣದ ಭವಿಷ್ಯಕ್ಕೇ ಕೊಳ್ಳಿ ಇಟ್ಟಾಗ ತಮಗೆ ಇದು ಸಂವಿಧಾನ ವಿರೋಧಿ ಅನಿಸಲಿಲ್ವೇ ಸ್ವಾಮೀಜಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜಾಪುರ ಜಿಲ್ಲೆಯಲ್ಲಿ ಅಂದು ದಲಿತ ಐದು ವರ್ಷದ ಬಾಲಕ ಪಂಚ ಕಜ್ಜಾಯದ ಪಾತ್ರೆ ಮುಟ್ಟಿದ ಎಂದು ಸೌಟಲ್ಲಿ ಹೊಡೆದು ಕೊಂದರಲ್ಲಾ ಆಗ ತಮಗೆ ಹಿಂದೂ ಧರ್ಮದ ನೆನಪು ಬರಲಿಲ್ವೇ, ತಪ್ಪು ಅನಿಸಲಿಲ್ವೇ, ಅರಿವಿಲ್ಲದೆ ದಲಿತ ಬಾಲಕರು ಗೆಜ್ಜೆ ಕೋಲು ಬಿದ್ದದ್ದನ್ನು ಎತ್ತಿಕೊಟ್ಟಿದ್ದೆ ಅಪರಾಧ ಎಂದು ಥಳಿಸಿ, ದಂಡ ಹಾಕಿ ಬಹಿಷ್ಕಾರ ಹಾಕಿದರಲ್ಲಾ ಆಗ ಎಲ್ಲಿ ಹೋಗಿತ್ತು ತಮ್ಮ ಮನುಷ್ಯತ್ವ ಧರ್ಮ ರಕ್ಷಣೆಯ ಜವಾಬ್ದಾರಿ ಎಂದು ಹೇಳಿದರು ‌

ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಹಚ್ಚಬೇಡಿ ಸ್ವಾಮೀಜಿಯವರೇ ಭಾರತದ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X