ವಿಜಯಪುರ | ಕಾನೂನಿನಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ: ಪ್ರಗತಿಪರ ಚಿಂತಕಿ ಅನುಪಮಾ

Date:

Advertisements

ಸಮಾಜ ಬದಲಾವಣೆ ಆಗಬೇಕಾದರೆ ಅದು ಕಾನೂನಿನ ಮೂಲಕ ಮಾತ್ರ ಎಂದು ಸಾಧ್ಯ ಎಂದು ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ. ಎಚ್ ಎಸ್ ಅನುಪಮಾ ಅಭಿಪ್ರಾಯಪಟ್ಟರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ವಿಭಾಗದಲ್ಲಿ (ಎನ್‌ಇಪಿ) ಆಯೋಜಿಸಿದ್ದ, ಡಾ. ಬಿ ಆರ್ ಅಂಬೇಡ್ಕರರ ಜಯಂತ್ಯೋತ್ಸವದ ಅಂಗವಾಗಿ ‘ಡಾ.ಬಿ.ಆರ್.ಅಂಬೇಡ್ಕರ ಮತ್ತು ಮಹಿಳೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಒಂದು ಸಮಾಜದ ಸೌಖ್ಯ ಮತ್ತು ಪ್ರಗತಿಗೆ ಮಹಿಳೆಯರ ಸಬಲೀಕರಣ ಅತೀ ಅಗತ್ಯವಾದದ್ದು. ಮಹಿಳೆಯರಿಗೆ ಸಮರ್ಪಕ ಶಿಕ್ಷಣ, ಉತ್ತಮ ಆರೋಗ್ಯ ಸೇವೆ, ಆರ್ಥಿಕ ಸ್ವಾವಲಂಬನೆ ಮತ್ತು ತೀರ್ಮಾನಾತ್ಮಕ ಹಕ್ಕುಗಳನ್ನು ನೀಡಿದಾಗ ಮಾತ್ರ ಸಮಾನತೆಯ ಪರಿಕಲ್ಪನೆಗೆ ನಿಜವಾದ ಅರ್ಥ ದೊರೆಯುತ್ತದೆ. ಮಹಿಳೆಯರ ಸಬಲೀಕರಣದಿಂದ ಅವರು ತಮ್ಮ ಕುಟುಂಬ ಅಲ್ಲದೆ ಸಮುದಾಯದ ಬೆಳವಣಿಗೆಗೂ ಪ್ರಮುಖ ಶಕ್ತಿಯಾಗಿ ಪರಿಣಮಿಸುತ್ತಾರೆ” ಎಂದರು.

Advertisements

ಇದನ್ನೂ ಓದಿ: ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

ಬಳಿಕ ಯುಜಿ ಹಾಗೂ ಪಿಜಿ ಬೋಧಕ ಮತ್ತು ಬೋಧಕೇತರ ಸಂಘಟನಾತ್ಮಕ ಹೋರಾಟಗಾರರೊಂದಿಗೆ ಸಂವಾದ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಯ ಸ್ನಾತಕ ವಿಭಾಗದ ಸಂಯೋಜಕಿ ಡಾ. ಜಿ ಸೌಭಾಗ್ಯ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X