ಶಿವಮೊಗ್ಗ | ಈ ಕೆಳಕಂಡ ಮಕ್ಕಳ ಪಾಲನ ಸಂಸ್ಥೆಗಳ ಪರವಾನೆ ರದ್ದು

Date:

Advertisements

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲನ್ಯಾಯ ಕಾಯ್ದೆ,2015ರ ಸೆಕ್ಷನ್ 41 (1) ರಡಿ ನೋಂದಾಯಿಸಲ್ಪಟ್ಟಿರುವ ಮಕ್ಕಳ ಪಾಲನಾ ಆರು ಸಂಸ್ಥೆಗಳನ್ನ ರದ್ದುಗೊಳಿಸಲಾಗಿದೆ.

ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ, ವಿದ್ಯಾನಗರ, ಶಿವಮೊಗ್ಗ, ತರಂಗ ಕಿವುಡು ಮಕ್ಕಳ ಹಿರಿಯ ವಸತಿ ಶಾಲೆ, ಬಸವೇಶ್ವರನಗರ, ಶಿವಮೊಗ್ಗ, ತರಂಗ ಕಿವುಡು ಮಕ್ಕಳ ವಸತಿ ನಿಲಯ, ನ್ಯೂಟೌನ್, ಭದ್ರಾವತಿ, ಮದರ್ ತೆರೆಸಾ ರೆಸಿಡೆನ್ಸಿಯಲ್ ಸ್ಕೂಲ್ ಫಾರ್ ಹಿಯರಿಂಗ್ ಇಂಪರ‍್ಡ್, ಭದ್ರಾವತಿ, ಮಾತೃಛಾಯ ಸರ್ವಧರ್ಮ ಸಂಸ್ಥೆ, ಸ್ವಾಮಿ ವಿವೇಕಾನಂದ ಬಡಾವಣೆ, ಗೋಪಾಳ, ಶಿವಮೊಗ್ಗ ಮತ್ತು ಸುಜ್ಞಾನ ಸಂಸ್ಥೆ, ಶಾಂತಿನಗರ, ಶಿಕಾರಿಪುರ ತಾಲೂಕು.

ಈ ಮೇಲ್ಕಂಡ ಮಕ್ಕಳ ಪಾಲನಾ ಆರು ಸಂಸ್ಥೆಗಳನ್ನು ಪಾಲನೆ, ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಿಲ್ಲದ ಕಾರಣ ಬಾಲನ್ಯಾಯ ಕಾಯ್ದೆ, 2015 ಸೆಕ್ಷನ್ 41(7)ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಸರ್ಕಾರಿ ಆದೇಶದನ್ವಯ ದಿನಾಂಕ 17 ಮಾರ್ಚ್ 2025 ರಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X